‘ಬಸವರಾಜ ಬೊಮ್ಮಾಯಿ ನೀರಾವರಿ ಸಚಿವರಾಗಿದ್ದಾಗ ಮತ್ತು ಮುಖ್ಯಮಂತ್ರಿಯಾದ ಬಳಿಕ ಕೇವಲ ಬೋಗಸ್ ಹೇಳಿಕೆಗಳನ್ನು ನೀಡಿ ಕಾಲ ಕಳೆಯುತ್ತಿದ್ದಾರೆ. ನೀರಾವರಿ ಯೋಜನೆಗೆ ಭೂಮಿ ಕೊಟ್ಟ ಮಾಲೀಕರಿಗೆ ಬೇರೆ ಭಾಗದಲ್ಲಿ ದೊಡ್ಡ ಮೊತ್ತವನ್ನು ನೀಡಲಾಗಿದ್ದು, ಕೃಷ್ಣಾ ಮೇಲ್ದಂಡೆ ಭಾಗದ ಭೂ ಮಾಲೀಕರಿಗೆ ಪ್ರತಿ ಎಕರೆಗೆ ₹1.5 ಲಕ್ಷ ಕೊಡುವುದಾಗಿ ಹೇಳುತ್ತಿದ್ದಾರೆ. ಈ ಕುರಿತು ಶ್ವೇತಪತ್ರ ಹೊರಡಿಸಬೇಕು’ ಎಂದು ಒತ್ತಾಯಿಸಿದರು.