ಕೊಪ್ಪಳ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಪ್ತರಾದ ವಿ.ಆರ್. ಪಾಟೀಲ್ ಹಾಗೂ ಎಸ್.ಆರ್. ಪಾಟೀಲ್ ಅವರ ನಿವಾಸದ ಮೇಲೆ ಬುಧವಾರ ಐ.ಟಿ (ಆದಾಯ ತೆರಿಗೆ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕೊಪ್ಪಳ ತಾಲ್ಲೂಕಿನ ಲಿಂಗಾಪುರ ಗ್ರಾಮದಲ್ಲಿರುವ ಪಾಟೀಲರ ಮನೆ ಹಾಗೂ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆದಿದೆ.
ಪಾಟೀಲ ಅವರು, ಇಲ್ಲಿಗೆ ಸಮೀಪದ ಕಿಡದಾಳ ಗ್ರಾಮದಲ್ಲಿರುವ ಶಾರದಾ ಇಂಟರ್ ನ್ಯಾಷನಲ್ ಶಾಲೆಯ ಮಾಲೀಕರೂ ಹೌದು. ಅಂದಾಜು 20 ಅಧಿಕಾರಿಗಳನ್ನು ಒಳಗೊಂಡ ತಂಡ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿದೆ ಎಂದು ಮೂಲಗಳು ತಿಳಿಸಿವೆ.
ಗವಿಮಠದ ಜಾತ್ರೆಯ ಮಹಾರಥೋತ್ಸವದಲ್ಲಿ ಪಾಲ್ಗೊಳ್ಳಲು ಬಂದಿದ್ದ ಶಿವಕುಮಾರ್ ಅವರು ಪಾಟೀಲರ ಶಾಲೆಗೂ ಭೇಟಿ ನೀಡಿದ್ದರು.