ಶಾಸಕ ಹಿಟ್ನಾಳ ಗ್ರಾಮದ ದುರ್ಗಾದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಹೊರಬರುವಾಗ ಯುವಕರು ಏಕಾಏಕಿ ಘೋಷಣೆ ಕೂಗಿದ್ದರಿಂದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಗಲಿಬಿಲಿಗೊಂಡರು.
ಇದರಿಂದ ಆಕ್ರೋಶಗೊಂಡ ಕೆಲ ಕಾಂಗ್ರೆಸ್ ಮುಖಂಡರು ಘೋಷಣೆ ಕೂಗಿದ ಯುವಕರೊಂದಿಗೆ ವಾಗ್ವಾದಕ್ಕಿಳಿದರು. ಸ್ಥಳದಲ್ಲಿಯೇ ಇದ್ದರೆ ಗಲಾಟೆ ಹೆಚ್ಚಾಗುತ್ತದೆ ಎಂದು ಭಾವಿಸಿದ ಶಾಸಕರು ಅಲ್ಲಿಂದ ಕಾಲ್ಕಿತ್ತರು. ಶಾಸಕರು ತೆರಳಿದ ಬಳಿಕ ವಾಗ್ವಾದ ಮುಂದುವರಿಯಿತು.