ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ‘ಎಲ್ಲ ಕಾಲ, ಸರ್ಕಾರಗಳ ಅವಧಿಯಲ್ಲೂ ದುಷ್ಟ ಶಕ್ತಿಗಳು ಇದ್ದೇ ಇರುತ್ತವೆ. ಮಂಗಳೂರಲ್ಲಿ ಬಾಂಬ್ ಬ್ಲಾಸ್ಟ್ ಆಗಿದ್ದಾಗ ಬಿಜೆಪಿ ಅಧಿಕಾರದಲ್ಲಿತ್ತು. ಏನೇ ಆಗಲಿ, ಈ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಪತ್ತೆಹಚ್ಚುವ ಪ್ರಯತ್ನ ರಾಜ್ಯದ ಪೊಲೀಸರು ಸಮರ್ಥವಾಗಿ ನಿಭಾಯಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.