<p><strong>ಗಂಗಾವತಿ</strong>: ತಾಲ್ಲೂಕಿನ ಚಿಕ್ಕರಾಂಪೂರ ಗ್ರಾಮವನ್ನು ಅರಣ್ಯ ಇಲಾಖೆ ಕಾಯ್ದಿಟ್ಟ ಅರಣ್ಯ ಎಂದು ಘೋಷಣೆ ಮಾಡಲು ಮುಂದಾಗಿರುವ ಹಿನ್ನಲೆಯಲ್ಲಿ ಶಾಸಕ ಜಿ.ಜನಾರ್ದನ ರೆಡ್ಡಿ ಸೋಮವಾರ ಗ್ರಾಮಕ್ಕೆ ಭೇಟಿ ನೀಡಿ, ಸ್ಥಳೀಯ ಜನರದೊಂದಿಗೆ ಸಮಾಲೋಚನೆ ಸಭೆ ನಡೆಸಿದರು.</p>.<p>ನಂತರ ಮಾತನಾಡಿ, ‘ತಾಲ್ಲೂಕಿನ ಆನೆಗೊಂದಿ ಸಮೀಪದ ಚಿಕ್ಕರಾಂಪೂರ, ಲಕ್ಷ್ಮೀಪುರ ಗ್ರಾಮಗಳು ಸೇರಿದಂತೆ ಒಟ್ಟು 192.82 ಹೆಕ್ಟೇರ್ ಪ್ರದೇಶವನ್ನು ಅರಣ್ಯ ಇಲಾಖೆ ಕಾಯ್ದಿಟ್ಟ ಅರಣ್ಯ ಪ್ರದೇಶ ಎಂದು ಘೋಷಣೆ ಮಾಡಲು ಮುಂದಾಗಿದೆ. ಇದರ ಭಾಗವಾಗಿಯೇ ಈ ಗ್ರಾಮಗಳ ಜನರಿಗೆ ನೋಟಿಸ್ ಸಹ ನೀಡಿದ್ದಾರೆ.</p>.<p>ಈ ನೋಟಿಸ್ ವಿಷಯಕ್ಕೆ ಜನರು ಆತಂಕಪಡುವ ಅವಶ್ಯ ಕತೆಯಿಲ್ಲ. ಯಾವುದೇ ಕಾರಣಕ್ಕೂ ಗ್ರಾಮಗಳು ಖಾಲಿ ಮಾಡಿಸಲು ಬಿಡುವುದಿಲ್ಲ. ಸುಮಾರು ವರ್ಷಗಳಿಂದ ವಾಸಿ ಸುತ್ತಿರುವ ನಿಮಗೆ ತೊಂದರೆ ನೀಡುವುದು ಸರಿಯಲ್ಲ. ಈ ಗ್ರಾಮಗಳಲ್ಲಿ ವಾಸಕ್ಕೆ ಸಂಬಂಧಪಟ್ಟಂತೆ ಗ್ರಾ.ಪಂ ಸೇರಿದಂತೆ ಇತರೆ ಇಲಾಖೆ ನೀಡಿದ ದಾಖಲೆಗಳು ಸಲ್ಲಿಕೆ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.</p>.<p>ಮುಂದೆ ಅಧಿಕಾರಿಗಳ ಜೊತೆಗೆ ಹಾಗೂ ಸರ್ಕಾರದ ಜೊತೆಗೆ ಸ್ವತಃ ನಾನೆ ಚರ್ಚೆ ನಡೆಸಿ, ಸೂಕ್ತ ರೀತಿಯಲ್ಲಿ ಕ್ರಮಕೈಗೊ ಳ್ಳುವ ಭರವಸೆ ನೀಡುವೆ ಎಂದರು.</p>.<p>ತಹಶೀಲ್ದಾರ ಯು.ನಾಗರಾಜ, ಡಿವೈಎಸ್ಪಿ ಜೆ.ನ್ಯಾಮಗೌಡರ, ತಾ.ಪಂ ಇಒ ರಾಮರೆಡ್ಡಿ, ಗ್ರಾಮೀಣ ಠಾಣೆಯ ಪಿಐ ರಂಗಪ್ಪ ದೊಡ್ಡಮನಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ</strong>: ತಾಲ್ಲೂಕಿನ ಚಿಕ್ಕರಾಂಪೂರ ಗ್ರಾಮವನ್ನು ಅರಣ್ಯ ಇಲಾಖೆ ಕಾಯ್ದಿಟ್ಟ ಅರಣ್ಯ ಎಂದು ಘೋಷಣೆ ಮಾಡಲು ಮುಂದಾಗಿರುವ ಹಿನ್ನಲೆಯಲ್ಲಿ ಶಾಸಕ ಜಿ.ಜನಾರ್ದನ ರೆಡ್ಡಿ ಸೋಮವಾರ ಗ್ರಾಮಕ್ಕೆ ಭೇಟಿ ನೀಡಿ, ಸ್ಥಳೀಯ ಜನರದೊಂದಿಗೆ ಸಮಾಲೋಚನೆ ಸಭೆ ನಡೆಸಿದರು.</p>.<p>ನಂತರ ಮಾತನಾಡಿ, ‘ತಾಲ್ಲೂಕಿನ ಆನೆಗೊಂದಿ ಸಮೀಪದ ಚಿಕ್ಕರಾಂಪೂರ, ಲಕ್ಷ್ಮೀಪುರ ಗ್ರಾಮಗಳು ಸೇರಿದಂತೆ ಒಟ್ಟು 192.82 ಹೆಕ್ಟೇರ್ ಪ್ರದೇಶವನ್ನು ಅರಣ್ಯ ಇಲಾಖೆ ಕಾಯ್ದಿಟ್ಟ ಅರಣ್ಯ ಪ್ರದೇಶ ಎಂದು ಘೋಷಣೆ ಮಾಡಲು ಮುಂದಾಗಿದೆ. ಇದರ ಭಾಗವಾಗಿಯೇ ಈ ಗ್ರಾಮಗಳ ಜನರಿಗೆ ನೋಟಿಸ್ ಸಹ ನೀಡಿದ್ದಾರೆ.</p>.<p>ಈ ನೋಟಿಸ್ ವಿಷಯಕ್ಕೆ ಜನರು ಆತಂಕಪಡುವ ಅವಶ್ಯ ಕತೆಯಿಲ್ಲ. ಯಾವುದೇ ಕಾರಣಕ್ಕೂ ಗ್ರಾಮಗಳು ಖಾಲಿ ಮಾಡಿಸಲು ಬಿಡುವುದಿಲ್ಲ. ಸುಮಾರು ವರ್ಷಗಳಿಂದ ವಾಸಿ ಸುತ್ತಿರುವ ನಿಮಗೆ ತೊಂದರೆ ನೀಡುವುದು ಸರಿಯಲ್ಲ. ಈ ಗ್ರಾಮಗಳಲ್ಲಿ ವಾಸಕ್ಕೆ ಸಂಬಂಧಪಟ್ಟಂತೆ ಗ್ರಾ.ಪಂ ಸೇರಿದಂತೆ ಇತರೆ ಇಲಾಖೆ ನೀಡಿದ ದಾಖಲೆಗಳು ಸಲ್ಲಿಕೆ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.</p>.<p>ಮುಂದೆ ಅಧಿಕಾರಿಗಳ ಜೊತೆಗೆ ಹಾಗೂ ಸರ್ಕಾರದ ಜೊತೆಗೆ ಸ್ವತಃ ನಾನೆ ಚರ್ಚೆ ನಡೆಸಿ, ಸೂಕ್ತ ರೀತಿಯಲ್ಲಿ ಕ್ರಮಕೈಗೊ ಳ್ಳುವ ಭರವಸೆ ನೀಡುವೆ ಎಂದರು.</p>.<p>ತಹಶೀಲ್ದಾರ ಯು.ನಾಗರಾಜ, ಡಿವೈಎಸ್ಪಿ ಜೆ.ನ್ಯಾಮಗೌಡರ, ತಾ.ಪಂ ಇಒ ರಾಮರೆಡ್ಡಿ, ಗ್ರಾಮೀಣ ಠಾಣೆಯ ಪಿಐ ರಂಗಪ್ಪ ದೊಡ್ಡಮನಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>