<p><strong>ಗಂಗಾವತಿ:</strong> ತಾಲ್ಲೂಕಿನ ಆನೆಗೊಂದಿ ಗ್ರಾಮದ ಚಿಂತಾಮಣಿ ಬಳಿ ತುಂಗಭದ್ರಾ ನದಿ ತೀರದಲ್ಲಿ ಭಾನುವಾರ ಶಾಸಕ ಜಿ. ಜನಾರ್ದನರೆಡ್ಡಿ ಗಂಗಾಮಾತೆಗೆ ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ ಧರ್ಮಸ್ಥಳ ಮಂಜುನಾಥ ಸ್ವಾಮಿಗೆ ಅಭಿಷೇಕ ಮಾಡಲು ಗಂಗಾಜಲ ತೆಗೆದುಕೊಳ್ಳಲಾಯಿತು.</p>.<p>ಬಿಜೆಪಿ ಪಕ್ಷ ಧರ್ಮಸ್ಥಳ ರಕ್ಷಿಸಿ, ಹಿಂದೂ ಧರ್ಮ ಉಳಿಸಿ ಅಭಿಯಾನ ಹಮ್ಮಿಕೊಂಡಿದ್ದು, ಇದರ ಭಾಗವಾಗಿ ಶಾಸಕ ಜನಾರ್ದನರೆಡ್ಡಿ ಧರ್ಮಸ್ಥಳದ ಮೇಲೆ ಹೋರಿಸಲಾದ ಆರೋಪ ಮುಕ್ತವಾಗಲಿ ಎಂದು ನದಿಗೆ ವಿಶೇಷ ಪೂಜೆ ಸಲ್ಲಿಸಿದರು.</p>.<p>ನಂತರ ನೇರವಾಗಿ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ, ಬೆಟ್ಟದ ಕೆಲಭಾಗದಲ್ಲಿನ ಆಂಜನೇಯನ ಪಾದಗಟ್ಟೆಗೆ ವಿಶೇಷ ಪೂಜೆ ಸಲ್ಲಿಸಿದರು.</p>.<p>ನಂತರ ಶಾಸಕ ರೆಡ್ಡಿ ಮಾಧ್ಯಮದವರ ಜೊತೆ ಮಾತನಾಡಿ, ‘ಪವಿತ್ರ ಧರ್ಮಸ್ಥಳದ ವಿರುದ್ಧ ಕೆಲ ಯೂಟ್ಯೂಬ್, ಸಾಮಾಜಿಕ ಜಾಲತಾಣಗಳಿಂದ ಅಪಪ್ರಚಾರವಾಗಿದ್ದು, ಆ ದೇವರುಗಳೇ ತಮ್ಮತನವನ್ನು ಕಾಪಾಡಿಕೊಂಡಿದ್ದಾರೆ. ಧರ್ಮಸ್ಥಳ ಅಪಪ್ರಚಾರ ವಿರುದ್ಧ ಬಿಜೆಪಿ ಧರ್ಮಯುದ್ದ ಆರಂಭಿಸಿದ್ದು, ಬಿಜೆಪಿಯ ಎಲ್ಲ ನಾಯಕರು ಧರ್ಮಸ್ಥಳಕ್ಕೆ ಭೇಟಿ ನೀಡಿ ದರ್ಶನ ಪಡೆಯಲಿದ್ದಾರೆ’ ಎಂದರು.</p>.<p>‘ಕಂಪ್ಲಿ ಸೇತುವೆ ನಿರ್ಮಾಣಕ್ಕೆ ನಾನು ಸಚಿವನಿದ್ದ ಅವಧಿಯಲ್ಲಿ ₹ 70 ಕೋಟಿ ಅನುದಾನ ಬಂದಿತ್ತು. ಕೆಲ ಅಭಿವೃದ್ಧಿ ಕಾರ್ಯಗಳಿಗೆ ಬಳಸಲಾಗಿದೆ. ಈಚೆಗೆ ಸಚಿವ ಸತೀಶ ಜಾರಕಿಹೊಳಿ 3 ತಿಂಗಳಲ್ಲಿ ಸೇತುವೆ ಕಾಮಗಾರಿ ಆರಂಭಿಸುವ ಬಗ್ಗೆ ಭರವಸೆ ನೀಡಿದ್ದು, ಈ ಕೆಲಸವಾಗಲಿದೆ. ಸಚಿವ ತಂಗಡಗಿ ವೇಟೂ ಜಾಸ್ತಿಯಾಗಿದ್ದಾರೆ, ರೇಟೂ ಜಾಸ್ತಿಯಾಗಿದ್ದಾರೆ. ನಾನು ಅವರ ಬಗ್ಗೆ ಮಾತನಾಡಲ್ಲ. ಕಂಪ್ಲಿ ಸೇತುವೆ ಉತ್ತಮ ರೀತಿಯಲ್ಲಿ ಆಗಬೇಕಿದೆ’ ಎಂದರು.</p>.<p>‘ಅಂಜನಾದ್ರಿ ಅಭಿವೃದ್ದಿ ಕುರಿತು ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದು, ಮುಂದಿನ ದಿನಗಳಲ್ಲಿ ಕೆಲಸ ಆಗಲಿದೆ. ತುಂಗಭದ್ರಾ ಜಲಾಶಯದ ಎಲ್ಲ 33 ಕ್ರಸ್ಟ್ ಗೇಟ್ಗಳನ್ನೂ ತೆಗೆದು ನೂತನ ಗೇಟ್ ಅಳವಡಿಸುವ ಬಗ್ಗೆ ಡಿಸಿಎಂ ಭರವಸೆ ನೀಡಿದ್ದಾರೆ’ ಎಂದರು.</p>.<p>‘ಗಂಗಾವತಿ ನಗರದಲ್ಲಿ ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತು ಆಗುತ್ತಿರುವ ದೊಡ್ಡ ಅನಾಹುತ. ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲು ಈಗಾಗಲೇ ಸೂಚನೆ ನೀಡಿ, ಗೋಡೌನ್ ಸೀಜ್ ಮಾಡಲು ತಹಶೀಲ್ದಾರರಿಗೆ ಸೂಚಿಸಲಾಗಿದೆ’ ಎಂದರು.</p>.<p>ಕಾಡಾ ಮಾಜಿ ಅಧ್ಯಕ್ಷ ಗಿರೇಗೌಡ, ತಿಪ್ಪೇರುದ್ರಸ್ವಾಮಿ, ನಗರ ಮಂಡಲ ಅಧ್ಯಕ್ಷ ಚಂದ್ರಶೇಖರ ಹೀರೂರು, ಮನೋಹರ ಗೌಡ, ಯಮನೂರ ಚೌಡ್ಕಿ, ನಾಗರಾಜ ಚಳಿಗೇರಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ:</strong> ತಾಲ್ಲೂಕಿನ ಆನೆಗೊಂದಿ ಗ್ರಾಮದ ಚಿಂತಾಮಣಿ ಬಳಿ ತುಂಗಭದ್ರಾ ನದಿ ತೀರದಲ್ಲಿ ಭಾನುವಾರ ಶಾಸಕ ಜಿ. ಜನಾರ್ದನರೆಡ್ಡಿ ಗಂಗಾಮಾತೆಗೆ ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ ಧರ್ಮಸ್ಥಳ ಮಂಜುನಾಥ ಸ್ವಾಮಿಗೆ ಅಭಿಷೇಕ ಮಾಡಲು ಗಂಗಾಜಲ ತೆಗೆದುಕೊಳ್ಳಲಾಯಿತು.</p>.<p>ಬಿಜೆಪಿ ಪಕ್ಷ ಧರ್ಮಸ್ಥಳ ರಕ್ಷಿಸಿ, ಹಿಂದೂ ಧರ್ಮ ಉಳಿಸಿ ಅಭಿಯಾನ ಹಮ್ಮಿಕೊಂಡಿದ್ದು, ಇದರ ಭಾಗವಾಗಿ ಶಾಸಕ ಜನಾರ್ದನರೆಡ್ಡಿ ಧರ್ಮಸ್ಥಳದ ಮೇಲೆ ಹೋರಿಸಲಾದ ಆರೋಪ ಮುಕ್ತವಾಗಲಿ ಎಂದು ನದಿಗೆ ವಿಶೇಷ ಪೂಜೆ ಸಲ್ಲಿಸಿದರು.</p>.<p>ನಂತರ ನೇರವಾಗಿ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ, ಬೆಟ್ಟದ ಕೆಲಭಾಗದಲ್ಲಿನ ಆಂಜನೇಯನ ಪಾದಗಟ್ಟೆಗೆ ವಿಶೇಷ ಪೂಜೆ ಸಲ್ಲಿಸಿದರು.</p>.<p>ನಂತರ ಶಾಸಕ ರೆಡ್ಡಿ ಮಾಧ್ಯಮದವರ ಜೊತೆ ಮಾತನಾಡಿ, ‘ಪವಿತ್ರ ಧರ್ಮಸ್ಥಳದ ವಿರುದ್ಧ ಕೆಲ ಯೂಟ್ಯೂಬ್, ಸಾಮಾಜಿಕ ಜಾಲತಾಣಗಳಿಂದ ಅಪಪ್ರಚಾರವಾಗಿದ್ದು, ಆ ದೇವರುಗಳೇ ತಮ್ಮತನವನ್ನು ಕಾಪಾಡಿಕೊಂಡಿದ್ದಾರೆ. ಧರ್ಮಸ್ಥಳ ಅಪಪ್ರಚಾರ ವಿರುದ್ಧ ಬಿಜೆಪಿ ಧರ್ಮಯುದ್ದ ಆರಂಭಿಸಿದ್ದು, ಬಿಜೆಪಿಯ ಎಲ್ಲ ನಾಯಕರು ಧರ್ಮಸ್ಥಳಕ್ಕೆ ಭೇಟಿ ನೀಡಿ ದರ್ಶನ ಪಡೆಯಲಿದ್ದಾರೆ’ ಎಂದರು.</p>.<p>‘ಕಂಪ್ಲಿ ಸೇತುವೆ ನಿರ್ಮಾಣಕ್ಕೆ ನಾನು ಸಚಿವನಿದ್ದ ಅವಧಿಯಲ್ಲಿ ₹ 70 ಕೋಟಿ ಅನುದಾನ ಬಂದಿತ್ತು. ಕೆಲ ಅಭಿವೃದ್ಧಿ ಕಾರ್ಯಗಳಿಗೆ ಬಳಸಲಾಗಿದೆ. ಈಚೆಗೆ ಸಚಿವ ಸತೀಶ ಜಾರಕಿಹೊಳಿ 3 ತಿಂಗಳಲ್ಲಿ ಸೇತುವೆ ಕಾಮಗಾರಿ ಆರಂಭಿಸುವ ಬಗ್ಗೆ ಭರವಸೆ ನೀಡಿದ್ದು, ಈ ಕೆಲಸವಾಗಲಿದೆ. ಸಚಿವ ತಂಗಡಗಿ ವೇಟೂ ಜಾಸ್ತಿಯಾಗಿದ್ದಾರೆ, ರೇಟೂ ಜಾಸ್ತಿಯಾಗಿದ್ದಾರೆ. ನಾನು ಅವರ ಬಗ್ಗೆ ಮಾತನಾಡಲ್ಲ. ಕಂಪ್ಲಿ ಸೇತುವೆ ಉತ್ತಮ ರೀತಿಯಲ್ಲಿ ಆಗಬೇಕಿದೆ’ ಎಂದರು.</p>.<p>‘ಅಂಜನಾದ್ರಿ ಅಭಿವೃದ್ದಿ ಕುರಿತು ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದು, ಮುಂದಿನ ದಿನಗಳಲ್ಲಿ ಕೆಲಸ ಆಗಲಿದೆ. ತುಂಗಭದ್ರಾ ಜಲಾಶಯದ ಎಲ್ಲ 33 ಕ್ರಸ್ಟ್ ಗೇಟ್ಗಳನ್ನೂ ತೆಗೆದು ನೂತನ ಗೇಟ್ ಅಳವಡಿಸುವ ಬಗ್ಗೆ ಡಿಸಿಎಂ ಭರವಸೆ ನೀಡಿದ್ದಾರೆ’ ಎಂದರು.</p>.<p>‘ಗಂಗಾವತಿ ನಗರದಲ್ಲಿ ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತು ಆಗುತ್ತಿರುವ ದೊಡ್ಡ ಅನಾಹುತ. ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲು ಈಗಾಗಲೇ ಸೂಚನೆ ನೀಡಿ, ಗೋಡೌನ್ ಸೀಜ್ ಮಾಡಲು ತಹಶೀಲ್ದಾರರಿಗೆ ಸೂಚಿಸಲಾಗಿದೆ’ ಎಂದರು.</p>.<p>ಕಾಡಾ ಮಾಜಿ ಅಧ್ಯಕ್ಷ ಗಿರೇಗೌಡ, ತಿಪ್ಪೇರುದ್ರಸ್ವಾಮಿ, ನಗರ ಮಂಡಲ ಅಧ್ಯಕ್ಷ ಚಂದ್ರಶೇಖರ ಹೀರೂರು, ಮನೋಹರ ಗೌಡ, ಯಮನೂರ ಚೌಡ್ಕಿ, ನಾಗರಾಜ ಚಳಿಗೇರಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>