<p><strong>ಕನಕಗಿರಿ (ಕೊಪ್ಪಳ ಜಿಲ್ಲೆ):</strong> ಚುನಾವಣಾ ಮಾದರಿ ನೀತಿಸಂಹಿತೆ ಉಲ್ಲಂಘನೆ ಮಾಡಿದ ಕಾರಣಕ್ಕಾಗಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ವತಿಯಿಂದ ಸಾರ್ವಜನಿಕರ ಬಳಕೆಗೆ ನೀಡಲಾಗಿದ್ದ ಆಂಬುಲೆನ್ಸ್ ಅನ್ನು ಅಧಿಕಾರಿಗಳು ಶನಿವಾರ ರಾತ್ರಿ ವಶಪಡಿಸಿಕೊಂಡಿದ್ದಾರೆ.</p>.<p>ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ, ಬಳ್ಳಾರಿ ಕ್ಷೇತ್ರದ ನಿಯೋಜಿತ ಅಭ್ಯರ್ಥಿ ಅರುಣಾ ಲಕ್ಷ್ಮೀ ಹಾಗೂ ಕನಕಗಿರಿ ಕ್ಷೇತ್ರದ ನಿಯೋಜಿತ ಅಭ್ಯರ್ಥಿ ಡಾ.ವೆಂಕಟರಮಣ ಭಾವಚಿತ್ರಗಳು ವಾಹನದ ಮೇಲೆ ಇವೆ.</p>.<p>‘ಮಾದರಿ ನೀತಿ ಸಂಹಿತೆ ಘೋಷಣೆಯಾದ ಬಳಿಕ ಮತದಾರರ ಮೇಲೆ ಪ್ರಭಾವ ಬೀರುವ ಈ ರೀತಿಯ ವಾಹನಗಳನ್ನು ಬಳಸುವಂತಿಲ್ಲ. ಉಚಿತ ಸೇವೆಯ ಹೆಸರಿನಲ್ಲಿ ಆಂಬುಲೆನ್ಸ್ ವಿವಿಧ ಗ್ರಾಮಗಳಲ್ಲಿ ಸಂಚರಿಸಿದ ಮಾಹಿತಿಯಿದೆ. ವಾಹನ ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಲಾಗಿದೆ’ ಎಂದು ಕ್ಷೇತ್ರದ ಚುನಾವಣಾಧಿಕಾರಿ ಸಮೀರ ಮುಲ್ಲಾ ತಿಳಿಸಿದರು.</p>.<p><strong>ದಾಖಲೆಗಳಿಲ್ಲದೇ ಸಾಗಾಟ; ಸೀರೆಗಳ ವಶ<br />ಕಾರಟಗಿ (ಕೊಪ್ಪಳ ಜಿಲ್ಲೆ): </strong>ಅಗತ್ಯ ದಾಖಲೆಗಳಿಲ್ಲದೆ ಕಾರಿನಲ್ಲಿ ಸಾಗಣೆ ಮಾಡುತ್ತಿದ್ದ ₹4.52 ಲಕ್ಷ ಮೌಲ್ಯದ 226 ಸೀರೆಗಳನ್ನು ಕಾರಟಗಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ನ್ಯಾಯಾಲಯದ ಅನುಮತಿ ಬಳಿಕ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.</p>.<p>ಕಾರಟಗಿ ಪಟ್ಟಣದ ಸಮೀಪದ ಸಿದ್ದಲಿಂಗನಗರದ ಬಳಿ ಸ್ಥಾಪಿಸಲಾಗಿರುವ ಚೆಕ್ ಪೋಸ್ಟ್ ಬಳಿ ಸಿಂಧನೂರ ಕಡೆಯಿಂದ ಬರುತ್ತಿದ್ದ ಕಾರು ತಪಾಸಣೆ ನಡೆಸಿದಾಗ ಸೀರೆಗಳು ಪತ್ತೆಯಾಗಿವೆ. ಕಾರಿನಲ್ಲಿದ್ದ ಹೈದರಾಬಾದ್ನ ಅಮೀನಪುರದ ದಿನೇಶಕುಮಾರಗೆ ನೋಟಿಸ್ ನೀಡಲಾಗಿದೆ. ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಗಿರಿ (ಕೊಪ್ಪಳ ಜಿಲ್ಲೆ):</strong> ಚುನಾವಣಾ ಮಾದರಿ ನೀತಿಸಂಹಿತೆ ಉಲ್ಲಂಘನೆ ಮಾಡಿದ ಕಾರಣಕ್ಕಾಗಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ವತಿಯಿಂದ ಸಾರ್ವಜನಿಕರ ಬಳಕೆಗೆ ನೀಡಲಾಗಿದ್ದ ಆಂಬುಲೆನ್ಸ್ ಅನ್ನು ಅಧಿಕಾರಿಗಳು ಶನಿವಾರ ರಾತ್ರಿ ವಶಪಡಿಸಿಕೊಂಡಿದ್ದಾರೆ.</p>.<p>ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ, ಬಳ್ಳಾರಿ ಕ್ಷೇತ್ರದ ನಿಯೋಜಿತ ಅಭ್ಯರ್ಥಿ ಅರುಣಾ ಲಕ್ಷ್ಮೀ ಹಾಗೂ ಕನಕಗಿರಿ ಕ್ಷೇತ್ರದ ನಿಯೋಜಿತ ಅಭ್ಯರ್ಥಿ ಡಾ.ವೆಂಕಟರಮಣ ಭಾವಚಿತ್ರಗಳು ವಾಹನದ ಮೇಲೆ ಇವೆ.</p>.<p>‘ಮಾದರಿ ನೀತಿ ಸಂಹಿತೆ ಘೋಷಣೆಯಾದ ಬಳಿಕ ಮತದಾರರ ಮೇಲೆ ಪ್ರಭಾವ ಬೀರುವ ಈ ರೀತಿಯ ವಾಹನಗಳನ್ನು ಬಳಸುವಂತಿಲ್ಲ. ಉಚಿತ ಸೇವೆಯ ಹೆಸರಿನಲ್ಲಿ ಆಂಬುಲೆನ್ಸ್ ವಿವಿಧ ಗ್ರಾಮಗಳಲ್ಲಿ ಸಂಚರಿಸಿದ ಮಾಹಿತಿಯಿದೆ. ವಾಹನ ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಲಾಗಿದೆ’ ಎಂದು ಕ್ಷೇತ್ರದ ಚುನಾವಣಾಧಿಕಾರಿ ಸಮೀರ ಮುಲ್ಲಾ ತಿಳಿಸಿದರು.</p>.<p><strong>ದಾಖಲೆಗಳಿಲ್ಲದೇ ಸಾಗಾಟ; ಸೀರೆಗಳ ವಶ<br />ಕಾರಟಗಿ (ಕೊಪ್ಪಳ ಜಿಲ್ಲೆ): </strong>ಅಗತ್ಯ ದಾಖಲೆಗಳಿಲ್ಲದೆ ಕಾರಿನಲ್ಲಿ ಸಾಗಣೆ ಮಾಡುತ್ತಿದ್ದ ₹4.52 ಲಕ್ಷ ಮೌಲ್ಯದ 226 ಸೀರೆಗಳನ್ನು ಕಾರಟಗಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ನ್ಯಾಯಾಲಯದ ಅನುಮತಿ ಬಳಿಕ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.</p>.<p>ಕಾರಟಗಿ ಪಟ್ಟಣದ ಸಮೀಪದ ಸಿದ್ದಲಿಂಗನಗರದ ಬಳಿ ಸ್ಥಾಪಿಸಲಾಗಿರುವ ಚೆಕ್ ಪೋಸ್ಟ್ ಬಳಿ ಸಿಂಧನೂರ ಕಡೆಯಿಂದ ಬರುತ್ತಿದ್ದ ಕಾರು ತಪಾಸಣೆ ನಡೆಸಿದಾಗ ಸೀರೆಗಳು ಪತ್ತೆಯಾಗಿವೆ. ಕಾರಿನಲ್ಲಿದ್ದ ಹೈದರಾಬಾದ್ನ ಅಮೀನಪುರದ ದಿನೇಶಕುಮಾರಗೆ ನೋಟಿಸ್ ನೀಡಲಾಗಿದೆ. ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>