ಅಂಜನಾದ್ರಿ ಸುತ್ತ ಮದ್ಯ ನಿಷೇಧ ಆದೇಶ:
ಗಂಗಾವತಿ ತಾಲ್ಲೂಕಿನ ಚಿಕ್ಕರಾಂಪುರ ಸಮೀಪದ ಅಂಜನಾದ್ರಿ ಬೆಟ್ಟದಲ್ಲಿ ಡಿ. 22ರಿಂದ 24ರವರೆಗೆ ಹನುಮಮಾಲಾ ವಿಸರ್ಜನೆಯ ಕಾರ್ಯಕ್ರಮಗಳು ಜರುಗಲಿದ್ದು, ಅಂಜನಾದ್ರಿ ಸುತ್ತಮುತ್ತ 10 ಕಿ.ಮೀ ಅಂತರದಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಹನುಮಮಾಲಾ ವಿಸರ್ಜನೆಯ ನಿಮಿತ್ತ ಅಂಜನಾದ್ರಿಯಲ್ಲಿ ವಿವಿಧ ಪೂಜಾ ಕಾರ್ಯಕ್ರಮಗಳು ಜರುಗಲಿದ್ದು, ಶಾಂತಿ ಪಾಲನೆಗಾಗಿ, ಅಹಿತಕರ ಘಟನೆ ನಡೆಯದಂತೆ ತಡೆಯಲು ಜಿಲ್ಲಾಧಿಕಾರಿ ನಲೀನ್ ಅತುಲ್ ಅವರು ಅಂಜನಾದ್ರಿ ಸುತ್ತ 3 ದಿನ ಮದ್ಯ ಮಾರಾಟಕ್ಕೆ ನಿಷೇಧ ಹೇರಿ, ಆದೇಶ ಹೊರಡಿಸಿದ್ದಾರೆ.