<p><strong>ಕೊಪ್ಪಳ</strong>: ಜಯತೀರ್ಥರ (ಟೀಕಾರಾಯರ) ಆರಾಧನಾ ಮಹೋತ್ಸವ ಅಂಗವಾಗಿ ಇಲ್ಲಿನ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮಂಗಳವಾರ ವಿವಿಧ ಧಾರ್ಮಿಕ ಹಾಗೂ ಸಂಗೀತ ಕಾರ್ಯಕ್ರಮಗಳು ನಡೆದವು. ಮಧ್ಯಾಹ್ನ ಸಂಭ್ರಮದಿಂದ ರಥೋತ್ಸವ ಜರುಗಿತು.</p>.<p>ಬೆಳಿಗ್ಗೆಯಿಂದಲೇ ನೂರಾರು ಸಂಖ್ಯೆಯಲ್ಲಿ ರಾಯರ ಮಠಕ್ಕೆ ಭೇಟಿ ನೀಡಿ ಬೃಂದಾವನದ ದರ್ಶನ ಪಡೆದರು. ಮಠದ ವತಿಯಿಂದ ಸುಪ್ರಭಾತ, ಜಯತೀರ್ಥ ಸ್ತುತಿ ಪಾರಾಯಣ, ಅಷ್ತೋತ್ತರ, ಪಂಚಾಮೃತ ಅಭಿಷೇಕ, ನೈವೇದ್ಯ, ಹಸ್ತೋದಕ ಅಲಂಕಾರ, ತೀರ್ಥಪ್ರಸಾದ ಕಾರ್ಯಕ್ರಮಗಳು ನಡೆದವು.</p>.<p>ರಾಯರ ಬೃಂದಾವನ ಹಾಗೂ ಎದುರು ಇರುವ ಆಂಜನೇಯನ ದೇವಸ್ಥಾನದಲ್ಲಿ ತರಹೇವಾರಿ ಹೂಗಳಿಂದ ಹೂವಿನ ಅಲಂಕಾರ ಮಾಡಲಾಗಿತ್ತು. ಮಠದ ಪ್ರಧಾನ ಅರ್ಚಕ ಪಂಡಿತ್ ರಘುಪ್ರೇಮಾಚಾರ್ ಮುಳಗುಂದ ಅವರು ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ವ್ಯವಸ್ಥಾಪಕ ಜಗನ್ನಾಥ ಹುನುಗುಂದ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.</p>.<p>ಸಂಜೆ ಪಂಡಿತ್ ಹನುಮೇಶಚಾರ್ಯ ಗಂಗೂರ್ ಅವರಿಂದ ಉಪನ್ಯಾಸ ಮತ್ತು ಆಕಾಶವಾಣಿ ಕಲಾವಿದೆ ಕಲಬುರಗಿಯ ಶ್ರುತಿ ವಿಜಯೀಂದ್ರ ಸಗರ ಅವರ ಭಕ್ತಿ ಸಂಗೀತ ಜರುಗಿದವು. ರಾತ್ರಿ ಕೂಡ ಭಕ್ತರು ಮಠಕ್ಕೆ ಭೇಟಿ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ಜಯತೀರ್ಥರ (ಟೀಕಾರಾಯರ) ಆರಾಧನಾ ಮಹೋತ್ಸವ ಅಂಗವಾಗಿ ಇಲ್ಲಿನ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮಂಗಳವಾರ ವಿವಿಧ ಧಾರ್ಮಿಕ ಹಾಗೂ ಸಂಗೀತ ಕಾರ್ಯಕ್ರಮಗಳು ನಡೆದವು. ಮಧ್ಯಾಹ್ನ ಸಂಭ್ರಮದಿಂದ ರಥೋತ್ಸವ ಜರುಗಿತು.</p>.<p>ಬೆಳಿಗ್ಗೆಯಿಂದಲೇ ನೂರಾರು ಸಂಖ್ಯೆಯಲ್ಲಿ ರಾಯರ ಮಠಕ್ಕೆ ಭೇಟಿ ನೀಡಿ ಬೃಂದಾವನದ ದರ್ಶನ ಪಡೆದರು. ಮಠದ ವತಿಯಿಂದ ಸುಪ್ರಭಾತ, ಜಯತೀರ್ಥ ಸ್ತುತಿ ಪಾರಾಯಣ, ಅಷ್ತೋತ್ತರ, ಪಂಚಾಮೃತ ಅಭಿಷೇಕ, ನೈವೇದ್ಯ, ಹಸ್ತೋದಕ ಅಲಂಕಾರ, ತೀರ್ಥಪ್ರಸಾದ ಕಾರ್ಯಕ್ರಮಗಳು ನಡೆದವು.</p>.<p>ರಾಯರ ಬೃಂದಾವನ ಹಾಗೂ ಎದುರು ಇರುವ ಆಂಜನೇಯನ ದೇವಸ್ಥಾನದಲ್ಲಿ ತರಹೇವಾರಿ ಹೂಗಳಿಂದ ಹೂವಿನ ಅಲಂಕಾರ ಮಾಡಲಾಗಿತ್ತು. ಮಠದ ಪ್ರಧಾನ ಅರ್ಚಕ ಪಂಡಿತ್ ರಘುಪ್ರೇಮಾಚಾರ್ ಮುಳಗುಂದ ಅವರು ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ವ್ಯವಸ್ಥಾಪಕ ಜಗನ್ನಾಥ ಹುನುಗುಂದ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.</p>.<p>ಸಂಜೆ ಪಂಡಿತ್ ಹನುಮೇಶಚಾರ್ಯ ಗಂಗೂರ್ ಅವರಿಂದ ಉಪನ್ಯಾಸ ಮತ್ತು ಆಕಾಶವಾಣಿ ಕಲಾವಿದೆ ಕಲಬುರಗಿಯ ಶ್ರುತಿ ವಿಜಯೀಂದ್ರ ಸಗರ ಅವರ ಭಕ್ತಿ ಸಂಗೀತ ಜರುಗಿದವು. ರಾತ್ರಿ ಕೂಡ ಭಕ್ತರು ಮಠಕ್ಕೆ ಭೇಟಿ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>