<p><strong>ಕೊಪ್ಪಳ</strong>: ‘ಮುಂದಿನವಾರ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಕೈಗಾರಿಕೆಗಳ ಮಾಲಿನ್ಯದಿಂದ ಬಾಧಿತ ಗ್ರಾಮಗಳ ಕುರಿತು ವಸ್ತುನಿಷ್ಠ ವರದಿ ಸಲ್ಲಿಸಲಾಗುವುದು’ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ್ ಹೇಳಿದರು.</p>.<p>ತಾಲ್ಲೂಕಿನ ಸುತ್ತಮುತ್ತಲಿನ ಕಾರ್ಖಾನೆಗಳ ಮಾಲಿನ್ಯದಿಂದ ಬಾಧಿತವಾಗಿರುವ ಹಿರೇಬಗನಾಳ, ಕಾಸನಕಂಡಿ, ಕುಣಿಕೇರಿ ಹಾಗೂ ಕುಣಿಕೇರಿ ತಾಂಡಾಗಳಿಗೆ ವಸ್ತುಸ್ಥಿತಿ ಅಧ್ಯಯನಕ್ಕಾಗಿ ಸೋಮವಾರ ತೆರಳಿದ ನಿಯೋಗದ ನೇತೃತ್ವ ವಹಿಸಿ ಮಾತನಾಡಿದ ಅವರು ‘ಹಿರೇಬಗನಾಳ ಗ್ರಾಮದ ಜನಸಂಖ್ಯೆ ಸುಮಾರು 2500 ಇದ್ದು ಇದರಲ್ಲಿ ದೂಳಿನಿಂದ ವಿವಿಧ ರೋಗಗಳಿಗೆ ತುತ್ತಾದವರ ಸಂಖ್ಯೆ 220ಕ್ಕೂ ಹೆಚ್ಚು ಇದೆ. ಕಳೆದ 25 ವರ್ಷಗಳಲ್ಲಿ ಅಧಿಕಾರದಲ್ಲಿ ಇದ್ದವರ ಕಣ್ಣಿಗೆ ಈ ಸಮಸ್ಯೆ ಗಮನಕ್ಕೆ ಬಾರದೆ ಹೋಗಿದ್ದು ದುರಂತ. ಕೇಂದ್ರ ಸರ್ಕಾರದಿಂದ ಸಿಗಬಹುದಾದ ಎಲ್ಲಾ ಪರಿಹಾರ ರೂಪದ ಕ್ರಮಗಳನ್ನು ಜಾರಿಗೊಳಿಸಲು ಮಾಡಬೇಕಾದ ಪ್ರಯತ್ನ ಮಾಡುತ್ತೇನೆ’ ಎಂದು ಭರವಸೆ ನೀಡಿದರು.</p>.<p>ಪಕ್ಷದ ಜಿಲ್ಲಾ ವಕ್ತಾರ ಮಲ್ಲನಗೌಡ ಕೋನನಗೌಡ್ರು ಮಾತನಾಡಿ ‘ಈ ಭಾಗದಲ್ಲಿ ಕೃಷಿ ಕ್ಷೇತ್ರ ಅಪಾರ ನಷ್ಟಕ್ಕೀಡಾಗಿದೆ. ಈ ಭಾಗದ ಬೆಳೆಯನ್ನು ಯಾರೂ ಖರೀದಿಸುತ್ತಿಲ್ಲ. ಈ ನಷ್ಟದ ಕುರಿತು ಅಧ್ಯಯನ ನಡೆಸಿ ಅಂಕಿ ಅಂಶ ಸಮೇತ ವರದಿ ಸಿದ್ಧಪಡಿಸಬೇಕಿದೆ’ ಎಂದರು.</p>.<p>ಪಕ್ಷದ ಜಿಲ್ಲಾಧ್ಯಕ್ಷ ಮೂರ್ತ್ಯಪ್ಪ ಗಿಣಿಗೇರಿ, ಜಿಲ್ಲಾ ಒಬಿಸಿ ಅಧ್ಯಕ್ಷ ಕರಿಯಪ್ಪ ಹಾಲವರ್ತಿ, ತಾಲ್ಲೂಕು ಗೌರವಾಧ್ಯಕ್ಷ ಈಶಪ್ಪ ಮಾದಿನೂರು, ತಾಲ್ಲೂಕು ಘಟಕದ ಅಧ್ಯಕ್ಷ ವೀರೇಶಗೌಡ, ನಗರ ಘಟಕದ ಅಧ್ಯಕ್ಷ ಸೋಮನಗೌಡ ಹೊಗರನಾಳ, ಎಸ್ಸಿ ಘಟಕದ ತಾಲ್ಲೂಕು ಅಧ್ಯಕ್ಷ ಸುರೇಶ ಪೂಜಾರ, ಜಿಲ್ಲಾ ಕೈಗಾರಿಕಾ ಘಟಕದ ಅಧ್ಯಕ್ಷ ಮಾರುತಿಗೌಡ ಪೊಲೀಸ್ ಪಾಟೀಲ್, ನಗರ ಕಾನೂನು ಘಟಕದ ಅಧ್ಯಕ್ಷ ಬಸವರಾಜ ಎಸ್. ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ‘ಮುಂದಿನವಾರ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಕೈಗಾರಿಕೆಗಳ ಮಾಲಿನ್ಯದಿಂದ ಬಾಧಿತ ಗ್ರಾಮಗಳ ಕುರಿತು ವಸ್ತುನಿಷ್ಠ ವರದಿ ಸಲ್ಲಿಸಲಾಗುವುದು’ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ್ ಹೇಳಿದರು.</p>.<p>ತಾಲ್ಲೂಕಿನ ಸುತ್ತಮುತ್ತಲಿನ ಕಾರ್ಖಾನೆಗಳ ಮಾಲಿನ್ಯದಿಂದ ಬಾಧಿತವಾಗಿರುವ ಹಿರೇಬಗನಾಳ, ಕಾಸನಕಂಡಿ, ಕುಣಿಕೇರಿ ಹಾಗೂ ಕುಣಿಕೇರಿ ತಾಂಡಾಗಳಿಗೆ ವಸ್ತುಸ್ಥಿತಿ ಅಧ್ಯಯನಕ್ಕಾಗಿ ಸೋಮವಾರ ತೆರಳಿದ ನಿಯೋಗದ ನೇತೃತ್ವ ವಹಿಸಿ ಮಾತನಾಡಿದ ಅವರು ‘ಹಿರೇಬಗನಾಳ ಗ್ರಾಮದ ಜನಸಂಖ್ಯೆ ಸುಮಾರು 2500 ಇದ್ದು ಇದರಲ್ಲಿ ದೂಳಿನಿಂದ ವಿವಿಧ ರೋಗಗಳಿಗೆ ತುತ್ತಾದವರ ಸಂಖ್ಯೆ 220ಕ್ಕೂ ಹೆಚ್ಚು ಇದೆ. ಕಳೆದ 25 ವರ್ಷಗಳಲ್ಲಿ ಅಧಿಕಾರದಲ್ಲಿ ಇದ್ದವರ ಕಣ್ಣಿಗೆ ಈ ಸಮಸ್ಯೆ ಗಮನಕ್ಕೆ ಬಾರದೆ ಹೋಗಿದ್ದು ದುರಂತ. ಕೇಂದ್ರ ಸರ್ಕಾರದಿಂದ ಸಿಗಬಹುದಾದ ಎಲ್ಲಾ ಪರಿಹಾರ ರೂಪದ ಕ್ರಮಗಳನ್ನು ಜಾರಿಗೊಳಿಸಲು ಮಾಡಬೇಕಾದ ಪ್ರಯತ್ನ ಮಾಡುತ್ತೇನೆ’ ಎಂದು ಭರವಸೆ ನೀಡಿದರು.</p>.<p>ಪಕ್ಷದ ಜಿಲ್ಲಾ ವಕ್ತಾರ ಮಲ್ಲನಗೌಡ ಕೋನನಗೌಡ್ರು ಮಾತನಾಡಿ ‘ಈ ಭಾಗದಲ್ಲಿ ಕೃಷಿ ಕ್ಷೇತ್ರ ಅಪಾರ ನಷ್ಟಕ್ಕೀಡಾಗಿದೆ. ಈ ಭಾಗದ ಬೆಳೆಯನ್ನು ಯಾರೂ ಖರೀದಿಸುತ್ತಿಲ್ಲ. ಈ ನಷ್ಟದ ಕುರಿತು ಅಧ್ಯಯನ ನಡೆಸಿ ಅಂಕಿ ಅಂಶ ಸಮೇತ ವರದಿ ಸಿದ್ಧಪಡಿಸಬೇಕಿದೆ’ ಎಂದರು.</p>.<p>ಪಕ್ಷದ ಜಿಲ್ಲಾಧ್ಯಕ್ಷ ಮೂರ್ತ್ಯಪ್ಪ ಗಿಣಿಗೇರಿ, ಜಿಲ್ಲಾ ಒಬಿಸಿ ಅಧ್ಯಕ್ಷ ಕರಿಯಪ್ಪ ಹಾಲವರ್ತಿ, ತಾಲ್ಲೂಕು ಗೌರವಾಧ್ಯಕ್ಷ ಈಶಪ್ಪ ಮಾದಿನೂರು, ತಾಲ್ಲೂಕು ಘಟಕದ ಅಧ್ಯಕ್ಷ ವೀರೇಶಗೌಡ, ನಗರ ಘಟಕದ ಅಧ್ಯಕ್ಷ ಸೋಮನಗೌಡ ಹೊಗರನಾಳ, ಎಸ್ಸಿ ಘಟಕದ ತಾಲ್ಲೂಕು ಅಧ್ಯಕ್ಷ ಸುರೇಶ ಪೂಜಾರ, ಜಿಲ್ಲಾ ಕೈಗಾರಿಕಾ ಘಟಕದ ಅಧ್ಯಕ್ಷ ಮಾರುತಿಗೌಡ ಪೊಲೀಸ್ ಪಾಟೀಲ್, ನಗರ ಕಾನೂನು ಘಟಕದ ಅಧ್ಯಕ್ಷ ಬಸವರಾಜ ಎಸ್. ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>