‘ಜ.22 ರಿಂದ ರಿಜ್ವಾನಾ ಬೇಗಂ ಅವರು ಕೆಲಸಕ್ಕೆ ಗೈರಾಗಿದ್ದ ಕುರಿತು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವರದಿ ಸಲ್ಲಿಸಿದ್ದರು. ಇದರ ಅನ್ವಯ ಸಂಬಂಧಿಸಿದ ವಿಭಾಗೀಯ ಕಚೇರಿಯ ಕಾರ್ಯಪಾಲಕ ಎಂಜಿನಿಯರ್ ಅವರು ಶಿಸ್ತು ಪ್ರಾಧಿಕಾರದ ಅಧಿಕಾರಿಯೂ ಆಗಿರುವ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗೆ ಶಿಫಾರಸು ಮಾಡಿದ್ದರು. ಈ ಅಂಶಗಳ ಆಧಾರದ ಮೇಲೆ ವಿಚಾರಣೆ ಕಾಯ್ದಿರಿಸಿ ಕರ್ನಾಟಕ ನಾಗರಿಕ ಸೇವಾ ನಿಯಮಗಳ ಅನ್ವಯ ಅವರನ್ನು ಅಮಾನತಿನಲ್ಲಿಡಲಾಗಿದೆ’ ಎಂದು ಆದೇಶದಲ್ಲಿ ವಿವರಿಸಲಾಗಿದೆ.