<p><strong>ಕೊಪ್ಪಳ</strong>: ಚಿತ್ರಸಾಹಿತಿ ಕೆ. ಕಲ್ಯಾಣ ದಾಂಪತ್ಯದಲ್ಲಿ ಬಿರುಕು ಮೂಡಿಸಿದ್ದ ಆರೋಪ ಹೊತ್ತಿದ್ದ ಗಂಗಾ ಕುಲಕರ್ಣಿ ಕೊಪ್ಪಳದ ಕುಷ್ಟಗಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಕುಷ್ಟಗಿ ನ್ಯಾಯಾಲಯದ ಆವರಣದಲ್ಲಿ ವಿಷ ಸೇವಿಸಿ ಗಂಗಾ ಕುಲಕರ್ಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ.</p>.<p>ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾ ಕುಲಕರ್ಣಿ ಇಂದು ವಿಚಾರಣೆಗೆ ಕುಷ್ಟಗಿ ನ್ಯಾಯಾಲಯಕ್ಕೆ ಬಂದಿದ್ದರು. ಈ ಸಂದರ್ಭದಲ್ಲಿ ನ್ಯಾಯಾಲಯದ ಆವರಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.</p>.<p>ಚಲನಚಿತ್ರ ಸಾಹಿತಿ ಕೆ. ಕಲ್ಯಾಣ್ ಕೆಲ ದಿನಗಳ ಹಿಂದೆ ಚಲನಚಿತ್ರ ಅವರ ಪತ್ನಿಯ ಜೀವನದ ಜೊತೆ ಚೆಲ್ಲಾಟವಾಡಿ ಪತಿ ಪತ್ನಿಯರಿಬ್ಬರೂ ದೂರಾಗುವಲ್ಲಿ ಪ್ರಮುಖ ರೂವಾರಿಯಾಗಿದ್ದರು. ಅಲ್ಲದೆ ಅವರ ಆಸ್ತಿಯನ್ನು ಲಪಾಟಿಸಿದ್ದರು ಎಂದು ಆರೋಪ ಕೇಳಿಬಂದಿತ್ತು</p>.<p>ಗಂಗಾ ಕುಲಕರ್ಣಿ ಕುಷ್ಟಗಿ ತಾಲೂಕಿನಾದ್ಯಂತ ವಿವಿಧ ನಿರುದ್ಯೋಗಿ ಯುವಕರಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ ಹಣ ಎತ್ತುವಳಿ ಮಾಡಿ, ತಲೆಮರೆಸಿಕೊಂಡಿದ್ದರು. ಸರ್ಕಾರಿ ನೌಕರಿ ಕೊಡಿಸುವುದಾಗಿ ಅನೇಕ ಯುವಕರಿಗೆ ಮೋಸ ಮಾಡಿದ್ದಾರೆ ಎಂಬ ಆರೋಪದ ಮೇಲೆ ಇಲ್ಲಿಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ಅಲ್ಲದೆ, ಹಣ ಕಳೆದುಕೊಂಡವರು ಗಂಗಾಗೆ ಹಣ ನೀಡುವಂತೆ ಒತ್ತಾಯಿಸಿದ್ದರಲ್ಲದೆ, ಸ್ಥಳೀಯ ಪೊಲೀಸರ ನೆರವಿನಿಂದ ಒತ್ತಡ ಹೇರಿದ್ದರು ಎನ್ನಲಾಗಿದೆ.</p>.<p>ಅಲ್ಲದೆ ಇವರ ಮೇಲೆ ಅನೇಕ ಪ್ರಕರಣಗಳು ದಾಖಲಾಗಿದ್ದವು. ಆ ಪ್ರಕರಣಕ್ಕೆ ಸಂಬಂದಿಸಿದಂತೆ ನ 3 ನವೆಂಬರ್ ರಂದು ಹಾಜರಾಗಬೇಕಾಗಿದ್ದ ಕಾರಣ ಕುಷ್ಟಗಿ ನಗರದ ನ್ಯಾಯಾಲಯಕ್ಕೆ ವಕೀಲರ ಭೇಟಿಗಾಗಿ ಬಂದಿದ್ದರು ಎನ್ನಲಾಗುತ್ತಿದೆ.</p>.<p>ಈ ವೇಳೆ ಕೋಟ್೯ ಆವರಣದಲ್ಲಿಯೇ ವಿಷ ಸೇವಿಸಿ ಕುಸಿದು ಬಿದ್ದರು. ತಕ್ಷಣ ಸ್ಥಳೀಯರ ಸಹಕಾರದಿಂದ ಪೋಲಿಸರು ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲು ದಾಖಲಿಸಿದ್ದರು.</p>.<p>ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕುಷ್ಟಗಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ.</p>.<p><strong>ಡೆತ್ ನೋಟ್ ಪತ್ತೆ</strong></p>.<p>ಕುಷ್ಟಗಿ ನ್ಯಾಯಾಲಯದ ಆವರಣದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಗಂಗಾ ಕುಲಕರ್ಣಿ ಅವರದ್ದು ಎನ್ನಲಾದ ಎರಡು ಪುಟಗಳ ಡೆತ್ ನೋಟ್ ಪತ್ತೆಯಾಗಿದೆ.</p>.<p>ಗಂಗಾ ಕುಲಕರ್ಣಿ ಡೆತ್ ನೋಟ್ ಮರಾಠಿ ಭಾಷೆಯಲ್ಲಿದ್ದು, ಅದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನನ್ನ ಮೇಲೆ ಹಲವಾರು ಕೇಸುಗಳಿವೆ. ನನಗೆ ಇಬ್ಬರು ಮಕ್ಕಳಿದ್ದಾರೆ. ನನ್ನ ಕರ್ಮಕ್ಕೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂಬುದು ಸೇರಿದಂತೆ ಇನ್ನಿತರ ವಿಚಾರಗಳನ್ನು ಆಕೆ ಪ್ರಸ್ತಾಪಿಸಿದ್ದಾರೆ.</p>.<p><strong>ಕಲ್ಯಾಣ ನೀಡಿದ್ದ ದೂರು</strong></p>.<p>ನನ್ನ ಪತ್ನಿ, ಅತ್ತೆ ಹಾಗೂ ಮಾವನಿಗೆ ಗಂಗಾ ಕುಲಕರ್ಣಿ ವಂಚಿಸಿದ್ದಾರೆ ಎಂದು ಆರೋಪಿಸಿ ಕೆ. ಕಲ್ಯಾಣ್ ಅವರು ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಸೆ.30ರಂದು ದೂರು ನೀಡಿದ್ದರು. ಗಂಗಾ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದರು ಎನ್ನಲಾಗಿದೆ.</p>.<p><strong>ಕುಷ್ಟಗಿಯಲ್ಲಿ ವಂಚನೆ:</strong> ತಾಲ್ಲೂಕಿನ ಕ್ಯಾದಿಗುಪ್ಪಾ ಗ್ರಾಮದ ಸಂತೋಷ್ ಕುಲಕರ್ಣಿ ಎಂಬುವರಿಗೆ ಗಂಗಾ 3 ಲಕ್ಷ ವಂಚನೆ ಮಾಡಿದ್ದಳು. ನೌಕರಿ ಕೊಡಿಸುವುದಾಗಿ ಹೇಳಿ ಹಣ ಪಡೆದಿದ್ದರು ಎನ್ನಲಾಗಿದೆ. ಈ ಕುರಿತು 2016 ರಲ್ಲಿ ದೂರು ದಾಖಲಾಗಿತ್ತು.</p>.<p>ನಂತರ ಬಂಧನಕ್ಕೆ ಒಳಗಾಗಿ ಜೈಲು ಅನುಭವಿಸಿ, ಜಾಮೀನು ಮೇಲೆ ಬಿಡುಗಡೆ ಆಗಿದ್ದರು. ತನ್ನ ಇಬ್ಬರು ಮಕ್ಕಳ ಭವಿಷ್ಯದ ಸಂಬಂಧ ಜ್ಯೋತಿ ಕುಲಕರ್ಣಿ ಗಂಗಾ ಕುಲಕರ್ಣಿ ಎಂದು ಹೆಸರು ಬದಲಾಯಿಸಿರುವುದಾಗಿ ಡೆತ್ ನೋಟ್ ನಲ್ಲಿ ಬರೆದುಕೊಂಡಿದ್ದಾರೆ.</p>.<p>ಈ ಕುರಿತು ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದರು. ಪೊಲೀಸರಿಗೆ ಸಿಗದೇ ತಲೆ ಮರೆಸಿಕೊಂಡು ಬೆಳಗಾವಿಯಲ್ಲಿ ಆಶ್ರಯ ಪಡೆದಿದ್ದರು ಎನ್ನಲಾಗಿದೆ.</p>.<p>ಬೆಳಗಾವಿಯಲ್ಲಿ ಕೆ.ಕಲ್ಯಾಣ ಪತ್ನಿಯ ಮನೆಯಲ್ಲಿ ಕೆಲಸಕ್ಕೆ ಸೇರಿ ಶಿವಾನಂದ ವಾಲಿ ಎಂಬಾತನ ಜೊತೆಗೂಡಿ ಮೋಸ ಮಾಡಿದ್ದರು ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ಚಿತ್ರಸಾಹಿತಿ ಕೆ. ಕಲ್ಯಾಣ ದಾಂಪತ್ಯದಲ್ಲಿ ಬಿರುಕು ಮೂಡಿಸಿದ್ದ ಆರೋಪ ಹೊತ್ತಿದ್ದ ಗಂಗಾ ಕುಲಕರ್ಣಿ ಕೊಪ್ಪಳದ ಕುಷ್ಟಗಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಕುಷ್ಟಗಿ ನ್ಯಾಯಾಲಯದ ಆವರಣದಲ್ಲಿ ವಿಷ ಸೇವಿಸಿ ಗಂಗಾ ಕುಲಕರ್ಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ.</p>.<p>ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾ ಕುಲಕರ್ಣಿ ಇಂದು ವಿಚಾರಣೆಗೆ ಕುಷ್ಟಗಿ ನ್ಯಾಯಾಲಯಕ್ಕೆ ಬಂದಿದ್ದರು. ಈ ಸಂದರ್ಭದಲ್ಲಿ ನ್ಯಾಯಾಲಯದ ಆವರಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.</p>.<p>ಚಲನಚಿತ್ರ ಸಾಹಿತಿ ಕೆ. ಕಲ್ಯಾಣ್ ಕೆಲ ದಿನಗಳ ಹಿಂದೆ ಚಲನಚಿತ್ರ ಅವರ ಪತ್ನಿಯ ಜೀವನದ ಜೊತೆ ಚೆಲ್ಲಾಟವಾಡಿ ಪತಿ ಪತ್ನಿಯರಿಬ್ಬರೂ ದೂರಾಗುವಲ್ಲಿ ಪ್ರಮುಖ ರೂವಾರಿಯಾಗಿದ್ದರು. ಅಲ್ಲದೆ ಅವರ ಆಸ್ತಿಯನ್ನು ಲಪಾಟಿಸಿದ್ದರು ಎಂದು ಆರೋಪ ಕೇಳಿಬಂದಿತ್ತು</p>.<p>ಗಂಗಾ ಕುಲಕರ್ಣಿ ಕುಷ್ಟಗಿ ತಾಲೂಕಿನಾದ್ಯಂತ ವಿವಿಧ ನಿರುದ್ಯೋಗಿ ಯುವಕರಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ ಹಣ ಎತ್ತುವಳಿ ಮಾಡಿ, ತಲೆಮರೆಸಿಕೊಂಡಿದ್ದರು. ಸರ್ಕಾರಿ ನೌಕರಿ ಕೊಡಿಸುವುದಾಗಿ ಅನೇಕ ಯುವಕರಿಗೆ ಮೋಸ ಮಾಡಿದ್ದಾರೆ ಎಂಬ ಆರೋಪದ ಮೇಲೆ ಇಲ್ಲಿಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ಅಲ್ಲದೆ, ಹಣ ಕಳೆದುಕೊಂಡವರು ಗಂಗಾಗೆ ಹಣ ನೀಡುವಂತೆ ಒತ್ತಾಯಿಸಿದ್ದರಲ್ಲದೆ, ಸ್ಥಳೀಯ ಪೊಲೀಸರ ನೆರವಿನಿಂದ ಒತ್ತಡ ಹೇರಿದ್ದರು ಎನ್ನಲಾಗಿದೆ.</p>.<p>ಅಲ್ಲದೆ ಇವರ ಮೇಲೆ ಅನೇಕ ಪ್ರಕರಣಗಳು ದಾಖಲಾಗಿದ್ದವು. ಆ ಪ್ರಕರಣಕ್ಕೆ ಸಂಬಂದಿಸಿದಂತೆ ನ 3 ನವೆಂಬರ್ ರಂದು ಹಾಜರಾಗಬೇಕಾಗಿದ್ದ ಕಾರಣ ಕುಷ್ಟಗಿ ನಗರದ ನ್ಯಾಯಾಲಯಕ್ಕೆ ವಕೀಲರ ಭೇಟಿಗಾಗಿ ಬಂದಿದ್ದರು ಎನ್ನಲಾಗುತ್ತಿದೆ.</p>.<p>ಈ ವೇಳೆ ಕೋಟ್೯ ಆವರಣದಲ್ಲಿಯೇ ವಿಷ ಸೇವಿಸಿ ಕುಸಿದು ಬಿದ್ದರು. ತಕ್ಷಣ ಸ್ಥಳೀಯರ ಸಹಕಾರದಿಂದ ಪೋಲಿಸರು ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲು ದಾಖಲಿಸಿದ್ದರು.</p>.<p>ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕುಷ್ಟಗಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ.</p>.<p><strong>ಡೆತ್ ನೋಟ್ ಪತ್ತೆ</strong></p>.<p>ಕುಷ್ಟಗಿ ನ್ಯಾಯಾಲಯದ ಆವರಣದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಗಂಗಾ ಕುಲಕರ್ಣಿ ಅವರದ್ದು ಎನ್ನಲಾದ ಎರಡು ಪುಟಗಳ ಡೆತ್ ನೋಟ್ ಪತ್ತೆಯಾಗಿದೆ.</p>.<p>ಗಂಗಾ ಕುಲಕರ್ಣಿ ಡೆತ್ ನೋಟ್ ಮರಾಠಿ ಭಾಷೆಯಲ್ಲಿದ್ದು, ಅದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನನ್ನ ಮೇಲೆ ಹಲವಾರು ಕೇಸುಗಳಿವೆ. ನನಗೆ ಇಬ್ಬರು ಮಕ್ಕಳಿದ್ದಾರೆ. ನನ್ನ ಕರ್ಮಕ್ಕೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂಬುದು ಸೇರಿದಂತೆ ಇನ್ನಿತರ ವಿಚಾರಗಳನ್ನು ಆಕೆ ಪ್ರಸ್ತಾಪಿಸಿದ್ದಾರೆ.</p>.<p><strong>ಕಲ್ಯಾಣ ನೀಡಿದ್ದ ದೂರು</strong></p>.<p>ನನ್ನ ಪತ್ನಿ, ಅತ್ತೆ ಹಾಗೂ ಮಾವನಿಗೆ ಗಂಗಾ ಕುಲಕರ್ಣಿ ವಂಚಿಸಿದ್ದಾರೆ ಎಂದು ಆರೋಪಿಸಿ ಕೆ. ಕಲ್ಯಾಣ್ ಅವರು ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಸೆ.30ರಂದು ದೂರು ನೀಡಿದ್ದರು. ಗಂಗಾ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದರು ಎನ್ನಲಾಗಿದೆ.</p>.<p><strong>ಕುಷ್ಟಗಿಯಲ್ಲಿ ವಂಚನೆ:</strong> ತಾಲ್ಲೂಕಿನ ಕ್ಯಾದಿಗುಪ್ಪಾ ಗ್ರಾಮದ ಸಂತೋಷ್ ಕುಲಕರ್ಣಿ ಎಂಬುವರಿಗೆ ಗಂಗಾ 3 ಲಕ್ಷ ವಂಚನೆ ಮಾಡಿದ್ದಳು. ನೌಕರಿ ಕೊಡಿಸುವುದಾಗಿ ಹೇಳಿ ಹಣ ಪಡೆದಿದ್ದರು ಎನ್ನಲಾಗಿದೆ. ಈ ಕುರಿತು 2016 ರಲ್ಲಿ ದೂರು ದಾಖಲಾಗಿತ್ತು.</p>.<p>ನಂತರ ಬಂಧನಕ್ಕೆ ಒಳಗಾಗಿ ಜೈಲು ಅನುಭವಿಸಿ, ಜಾಮೀನು ಮೇಲೆ ಬಿಡುಗಡೆ ಆಗಿದ್ದರು. ತನ್ನ ಇಬ್ಬರು ಮಕ್ಕಳ ಭವಿಷ್ಯದ ಸಂಬಂಧ ಜ್ಯೋತಿ ಕುಲಕರ್ಣಿ ಗಂಗಾ ಕುಲಕರ್ಣಿ ಎಂದು ಹೆಸರು ಬದಲಾಯಿಸಿರುವುದಾಗಿ ಡೆತ್ ನೋಟ್ ನಲ್ಲಿ ಬರೆದುಕೊಂಡಿದ್ದಾರೆ.</p>.<p>ಈ ಕುರಿತು ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದರು. ಪೊಲೀಸರಿಗೆ ಸಿಗದೇ ತಲೆ ಮರೆಸಿಕೊಂಡು ಬೆಳಗಾವಿಯಲ್ಲಿ ಆಶ್ರಯ ಪಡೆದಿದ್ದರು ಎನ್ನಲಾಗಿದೆ.</p>.<p>ಬೆಳಗಾವಿಯಲ್ಲಿ ಕೆ.ಕಲ್ಯಾಣ ಪತ್ನಿಯ ಮನೆಯಲ್ಲಿ ಕೆಲಸಕ್ಕೆ ಸೇರಿ ಶಿವಾನಂದ ವಾಲಿ ಎಂಬಾತನ ಜೊತೆಗೂಡಿ ಮೋಸ ಮಾಡಿದ್ದರು ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>