‘ಬೀದರ್ ಲೋಕಸಭಾ ಕ್ಷೇತ್ರದಿಂದ ಭಗವಂತ ಖೂಬಾ ಎರಡು ಬಾರಿ,ರಾಯಚೂರು ಕ್ಷೇತ್ರದಿಂದ ರಾಜಾ ಅಮರೇಶ್ವರ ನಾಯಕ, ಬಳ್ಳಾರಿಯ ದೇವೇಂದ್ರಪ್ಪ, ಕಲಬುರ್ಗಿಯ ಡಾ.ಉಮೇಶ ಜಾಧವ ಪ್ರಥಮ ಬಾರಿ ಚುನಾಯಿತರಾಗಿದ್ದಾರೆ. ನಾಲ್ಕು ಬಾರಿ ಶಾಸಕರಾಗಿದ್ದ, ಎರಡು ಬಾರಿ ಸಂಸದರಾದ ಸಂಗಣ್ಣ ಕರಡಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಒತ್ತಾಯವಿದೆ.ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳೀನ್ಕುಮಾರ್ ಕಟೀಲ್ ಅವರಿಗೂ ಸಂಗಣ್ಣ ಅತ್ಯಂತ ಆಪ್ತರಾಗಿದ್ದಾರೆ’ ಎನ್ನುತ್ತಾರೆ ಕರಡಿ ಅವರ
ಆಪ್ತರೊಬ್ಬರು.