<p><strong>ಗಂಗಾವತಿ: </strong>ಕಂಪ್ಲಿ–ಗಂಗಾವತಿ ಸೇತುವೆ ಮೇಲಿನ ಪ್ರವಾಹ ಮಂಗಳವಾರ ಬೆಳಿಗ್ಗೆ ಇಳಿಮುಖವಾಗಿದೆ.</p>.<p>ಪ್ರವಾಹ ಇಳಿಮುಖವಾದ ಕೂಡಲೇ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸುದರ್ಶನ್ ರೆಡ್ಡಿ ಅವರ ನೇತೃತ್ವದಲ್ಲಿ ಜೆಸಿಬಿ ಮೂಲಕ ಸೇತುವೆ ಮೇಲಿನ ರಕ್ಷಣಾ ಕಂಬಿಗಳಿಗೆ ಸಿಲುಕಿದ ಕಸ ತೆರವು ಮಾಡಲಾಯಿತು.</p>.<p>ಸೇತುವೆ ಮೇಲೆ ವಾಹನ ಸಂಚಾರಕ್ಕೆ ಅನುಮತಿ ನೀಡಿಲ್ಲ.</p>.<p>ಕಳೆದ ಎರಡು ದಿನಗಳಿಂದ ನದಿಗೆ ಭಾರಿ ಪ್ರಮಾಣದ ನೀರು ಹರಿದುಬರುತ್ತಿದೆ. ಗ್ರಾಮಗಳಿಗೆ ನೀರು ನುಗ್ಗಿಲ್ಲ.</p>.<p>ಸಾಣಾಪುರ, ಸೇತುವೆ, ಹನುಮನಹಳ್ಳಿ, ದೇವಘಾಟ್, ಲಕ್ಷ್ಮಿಪುರ, ನಾಗನಳ್ಳಿ, ಚಿಕ್ಕಂಜಂತಕಲ್ ನದಿ ಭಾಗದ ಗದ್ದೆಗಳಲ್ಲಿ ಕಸ ಸಂಗ್ರಹವಾಗಿದೆ. ಬದುಗಳು ಕೊಚ್ಚಿ ಹೋಗಿವೆ. ಬಾಳೆ ಗಿಡಗಳು ನೆಲ ಕಚ್ಚಿವೆ.</p>.<p>ನೆರೆಗೆ ಹಲವು ರೈತರ ಬೆಳೆ ನಾಶವಾಗಿದೆ. ನೀರಿನ ಪ್ರಮಾಣ ಇಳಿಕೆ ಆದ ಮೇಲೆ ನಷ್ಟದ ಅಂದಾಜು ಸಿಗಲಿದೆ.</p>.<p>ಚಿಕ್ಕಜಂತಕಲ್, ನಾಗನಳ್ಳಿ, ಆನೆಗೊಂದಿ ಭಾಗದಲ್ಲಿ ಸಾರ್ವಜನಿಕರ ಬಳಕೆಗೆ ನೀರು ಪೂರೈಸಲು ನದಿಗೆ ಅಳವಡಿಸಿದ್ದ ಪೈಪ್ಲೈನ್ ತೆರವುಗೊಳಿಸಲಾಗಿದೆ.</p>.<p>ಈ ಭಾಗದ ಜನರು ನೀರಿನ ತೊಂದರೆ ಅನುಭವಿಸುತ್ತಿದ್ದಾರೆ.</p>.<p>ವಿರುಪಾಪುರಗಡ್ಡೆ–ಹಂಪಿ ಸಂಪರ್ಕ ಕಡಿತವಾಗಿದೆ. ಆನೆಗೊಂದಿಯ ಶ್ರೀಕೃಷ್ಣದೇವರಾಯರ ಸಮಾಧಿ (64 ಸಾಲಿನ ಕಂಬಗಳ ದೇವಸ್ಥಾನ) ಭಾಗಶಃ ಮುಳುಗಡೆಯಾಗಿದೆ.</p>.<p>ಜಲಾನಯನ ಪ್ರದೇಶದಲ್ಲಿ ಮಳೆ ಇಳಿಮುಖವಾಗದ ಕಾರಣ ನೀರಿನ ಒಳ ಹರಿವು ಹೆಚ್ಚಳವಾಗುವ ನೀರಿಕ್ಷೆ ಇದೆ. ನೀರಿಕ್ಷೆಯಂತೆ ನೀರು ಹರಿದು ಬಂದರೆ ಹೆಚ್ಚುವರಿ ನೀರನ್ನು ತುಂಗಭದ್ರಾ ನದಿಗೆ ಹರಿಸಲಾಗುತ್ತದೆ. ಈ ವೇಳೆ ಅಪಾಯದ ಮಟ್ಟ ಮೀರಿ ಹರಿಯುವ ಸಾಧ್ಯತೆ ಇದೆ. ಆದ ಕಾರಣ ಸಂಪೂರ್ಣವಾಗಿ ಪ್ರವಾಹ ಇಳಿಮುಖವಾಗಿ ಜಿಲ್ಲಾಡಳಿತ ಅಧಿಕೃತವಾಗಿ ಆದೇಶ ನೀಡುವವರೆಗೂ ನದಿ ಬಳಿ ಸಾರ್ವಜನಿಕರು ತೆರಳಬಾರದು. ಜಾನುವಾರುಗಳನ್ನು ಸಹ ಬಿಡಬಾರದು ಎಂದು ತುಂಗಭದ್ರಾ ಜಲಾಶಯದ ಮಂಡಳಿ ಮನವಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ: </strong>ಕಂಪ್ಲಿ–ಗಂಗಾವತಿ ಸೇತುವೆ ಮೇಲಿನ ಪ್ರವಾಹ ಮಂಗಳವಾರ ಬೆಳಿಗ್ಗೆ ಇಳಿಮುಖವಾಗಿದೆ.</p>.<p>ಪ್ರವಾಹ ಇಳಿಮುಖವಾದ ಕೂಡಲೇ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸುದರ್ಶನ್ ರೆಡ್ಡಿ ಅವರ ನೇತೃತ್ವದಲ್ಲಿ ಜೆಸಿಬಿ ಮೂಲಕ ಸೇತುವೆ ಮೇಲಿನ ರಕ್ಷಣಾ ಕಂಬಿಗಳಿಗೆ ಸಿಲುಕಿದ ಕಸ ತೆರವು ಮಾಡಲಾಯಿತು.</p>.<p>ಸೇತುವೆ ಮೇಲೆ ವಾಹನ ಸಂಚಾರಕ್ಕೆ ಅನುಮತಿ ನೀಡಿಲ್ಲ.</p>.<p>ಕಳೆದ ಎರಡು ದಿನಗಳಿಂದ ನದಿಗೆ ಭಾರಿ ಪ್ರಮಾಣದ ನೀರು ಹರಿದುಬರುತ್ತಿದೆ. ಗ್ರಾಮಗಳಿಗೆ ನೀರು ನುಗ್ಗಿಲ್ಲ.</p>.<p>ಸಾಣಾಪುರ, ಸೇತುವೆ, ಹನುಮನಹಳ್ಳಿ, ದೇವಘಾಟ್, ಲಕ್ಷ್ಮಿಪುರ, ನಾಗನಳ್ಳಿ, ಚಿಕ್ಕಂಜಂತಕಲ್ ನದಿ ಭಾಗದ ಗದ್ದೆಗಳಲ್ಲಿ ಕಸ ಸಂಗ್ರಹವಾಗಿದೆ. ಬದುಗಳು ಕೊಚ್ಚಿ ಹೋಗಿವೆ. ಬಾಳೆ ಗಿಡಗಳು ನೆಲ ಕಚ್ಚಿವೆ.</p>.<p>ನೆರೆಗೆ ಹಲವು ರೈತರ ಬೆಳೆ ನಾಶವಾಗಿದೆ. ನೀರಿನ ಪ್ರಮಾಣ ಇಳಿಕೆ ಆದ ಮೇಲೆ ನಷ್ಟದ ಅಂದಾಜು ಸಿಗಲಿದೆ.</p>.<p>ಚಿಕ್ಕಜಂತಕಲ್, ನಾಗನಳ್ಳಿ, ಆನೆಗೊಂದಿ ಭಾಗದಲ್ಲಿ ಸಾರ್ವಜನಿಕರ ಬಳಕೆಗೆ ನೀರು ಪೂರೈಸಲು ನದಿಗೆ ಅಳವಡಿಸಿದ್ದ ಪೈಪ್ಲೈನ್ ತೆರವುಗೊಳಿಸಲಾಗಿದೆ.</p>.<p>ಈ ಭಾಗದ ಜನರು ನೀರಿನ ತೊಂದರೆ ಅನುಭವಿಸುತ್ತಿದ್ದಾರೆ.</p>.<p>ವಿರುಪಾಪುರಗಡ್ಡೆ–ಹಂಪಿ ಸಂಪರ್ಕ ಕಡಿತವಾಗಿದೆ. ಆನೆಗೊಂದಿಯ ಶ್ರೀಕೃಷ್ಣದೇವರಾಯರ ಸಮಾಧಿ (64 ಸಾಲಿನ ಕಂಬಗಳ ದೇವಸ್ಥಾನ) ಭಾಗಶಃ ಮುಳುಗಡೆಯಾಗಿದೆ.</p>.<p>ಜಲಾನಯನ ಪ್ರದೇಶದಲ್ಲಿ ಮಳೆ ಇಳಿಮುಖವಾಗದ ಕಾರಣ ನೀರಿನ ಒಳ ಹರಿವು ಹೆಚ್ಚಳವಾಗುವ ನೀರಿಕ್ಷೆ ಇದೆ. ನೀರಿಕ್ಷೆಯಂತೆ ನೀರು ಹರಿದು ಬಂದರೆ ಹೆಚ್ಚುವರಿ ನೀರನ್ನು ತುಂಗಭದ್ರಾ ನದಿಗೆ ಹರಿಸಲಾಗುತ್ತದೆ. ಈ ವೇಳೆ ಅಪಾಯದ ಮಟ್ಟ ಮೀರಿ ಹರಿಯುವ ಸಾಧ್ಯತೆ ಇದೆ. ಆದ ಕಾರಣ ಸಂಪೂರ್ಣವಾಗಿ ಪ್ರವಾಹ ಇಳಿಮುಖವಾಗಿ ಜಿಲ್ಲಾಡಳಿತ ಅಧಿಕೃತವಾಗಿ ಆದೇಶ ನೀಡುವವರೆಗೂ ನದಿ ಬಳಿ ಸಾರ್ವಜನಿಕರು ತೆರಳಬಾರದು. ಜಾನುವಾರುಗಳನ್ನು ಸಹ ಬಿಡಬಾರದು ಎಂದು ತುಂಗಭದ್ರಾ ಜಲಾಶಯದ ಮಂಡಳಿ ಮನವಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>