<p><strong>ಕನಕಗಿರಿ:</strong> ಕೇಂದ್ರ ಸರ್ಕಾರದ ಅನುಮೋದನೆ ಹಾಗೂ ಅನುದಾನವಿಲ್ಲದ 9 ಹೆಚ್ಚುವರಿ ಚಟುವಟಿಕೆಗಳ ಪ್ರೋತ್ಸಾಹ ಧನಕ್ಕೆ ಸಂಬಂಧಿಸಿದಂತೆ ಪ್ರಮುಖ ಮಾಡ್ಯೂಲ್ಗಳನ್ನು ಆಶಾ ನಿಧಿ ತಂತ್ರಾಂಶದಲ್ಲಿ ನಿಷ್ಕ್ರಿಯಗೊಳಿಸಿರುವುದನ್ನು ವಿರೋಧಿಸಿ ಇಲ್ಲಿನ ಆಶಾ ಕಾರ್ಯಕರ್ತರು ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಡಾ.ಶರಣೆಗೌಡ ಅವರಿಗೆ ಮನವಿ ಸಲ್ಲಿಸಿದರು.</p>.<p>ಆಶಾ ಕಾರ್ಯಕರ್ತೆ ಮಲ್ಲಮ್ಮ ಗಡಾದ ಮಾತನಾಡಿ, ‘ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗುತ್ತಿದ್ದ ಕೆಲವು ಕಾರ್ಯಗಳ ಪ್ರೋತ್ಸಾಹಧನವನ್ನು ಪೂರ್ವ ಸೂಚನೆ ಇಲ್ಲದೆ ಸ್ಥಗಿತಗೊಳಿಸಲಾಗಿದೆ. ಮಹಿಳಾ ಮತ್ತು ಪುರುಷರ ಕುಟುಂಬ ಕಲ್ಯಾಣ ಶಸ್ತ್ರಚಿಕಿತ್ಸೆ, ಪ್ರಸವೋತ್ತರ ಶಸ್ತ್ರಚಿಕಿತ್ಸೆ ಸೇರಿದಂತೆ ಒಟ್ಟು 9 ಚಟುವಟಿಕೆಗಳಿಗೆ ಸಂಬಂಧಿಸಿದ ಮಾಡ್ಯೂಲ್ಗಳನ್ನು ಆಶಾ ನಿಧಿ ತಂತ್ರಾಂಶದಲ್ಲಿ ನಿಷ್ಕ್ರಿಯಗೊಳಿಸಿದ್ದು, ಆಶಾ ಕಾರ್ಯಕರ್ತೆಯರಿಗೆ ಆರ್ಥಿಕವಾಗಿ ಸಮಸ್ಯೆ ಎದುರಾಗಿದೆ’ ಎಂದು ದೂರಿದರು.</p>.<p>‘ಕೇಂದ್ರ ಸರ್ಕಾರವು 9 ಚಟುವಟಿಕೆಗಳಿಗೆ ಅಗತ್ಯ ಅನುಮೋದನೆ ಹಾಗೂ ಅನುದಾನ ಒದಗಿಸಿ ಪ್ರೋತ್ಸಾಹಧನ ಪಾವತಿಸುವವರೆಗೆ ಸಂಬಂಧಿತ ಕೆಲಸಗಳನ್ನು ಮಾಡುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು.</p>.<p>‘ಸರ್ಕಾರ ಆಶಾ ಕಾರ್ಯಕರ್ತೆಯರ ಮೇಲೆ ಹೆಚ್ಚುವರಿ ಕೆಲಸಗಳ ಒತ್ತಡ ಹೇರದೆ, ಈಗಾಗಲೇ ಮಾಡುತ್ತಿರುವ ಕೆಲಸಗಳಿಗೆ ಸಮರ್ಪಕ ಪ್ರೋತ್ಸಾಹಧನ ಹಾಗೂ ಕಾರ್ಮಿಕ ಹಕ್ಕುಗಳನ್ನು ಖಾತ್ರಿಪಡಿಸಬೇಕು’ ಎಂದು ಆಗ್ರಹಿಸಿದರು.</p>.<p>ಆಶಾ ಮುಖಂಡರಾದ ಮಲ್ಲಮ್ಮ ಗಡಾದ, ಪೂರ್ಣಿಮಾ, ಶಿವಮ್ಮ, ಭಾನು, ಪುಷ್ಪಾವತಿ, ಮಹಾದೇವಿ, ಅನ್ನಪೂರ್ಣ , ವಿದ್ಯಾ ಸೇರಿದಂತೆ ಇತರರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-35-1059085151</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಗಿರಿ:</strong> ಕೇಂದ್ರ ಸರ್ಕಾರದ ಅನುಮೋದನೆ ಹಾಗೂ ಅನುದಾನವಿಲ್ಲದ 9 ಹೆಚ್ಚುವರಿ ಚಟುವಟಿಕೆಗಳ ಪ್ರೋತ್ಸಾಹ ಧನಕ್ಕೆ ಸಂಬಂಧಿಸಿದಂತೆ ಪ್ರಮುಖ ಮಾಡ್ಯೂಲ್ಗಳನ್ನು ಆಶಾ ನಿಧಿ ತಂತ್ರಾಂಶದಲ್ಲಿ ನಿಷ್ಕ್ರಿಯಗೊಳಿಸಿರುವುದನ್ನು ವಿರೋಧಿಸಿ ಇಲ್ಲಿನ ಆಶಾ ಕಾರ್ಯಕರ್ತರು ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಡಾ.ಶರಣೆಗೌಡ ಅವರಿಗೆ ಮನವಿ ಸಲ್ಲಿಸಿದರು.</p>.<p>ಆಶಾ ಕಾರ್ಯಕರ್ತೆ ಮಲ್ಲಮ್ಮ ಗಡಾದ ಮಾತನಾಡಿ, ‘ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗುತ್ತಿದ್ದ ಕೆಲವು ಕಾರ್ಯಗಳ ಪ್ರೋತ್ಸಾಹಧನವನ್ನು ಪೂರ್ವ ಸೂಚನೆ ಇಲ್ಲದೆ ಸ್ಥಗಿತಗೊಳಿಸಲಾಗಿದೆ. ಮಹಿಳಾ ಮತ್ತು ಪುರುಷರ ಕುಟುಂಬ ಕಲ್ಯಾಣ ಶಸ್ತ್ರಚಿಕಿತ್ಸೆ, ಪ್ರಸವೋತ್ತರ ಶಸ್ತ್ರಚಿಕಿತ್ಸೆ ಸೇರಿದಂತೆ ಒಟ್ಟು 9 ಚಟುವಟಿಕೆಗಳಿಗೆ ಸಂಬಂಧಿಸಿದ ಮಾಡ್ಯೂಲ್ಗಳನ್ನು ಆಶಾ ನಿಧಿ ತಂತ್ರಾಂಶದಲ್ಲಿ ನಿಷ್ಕ್ರಿಯಗೊಳಿಸಿದ್ದು, ಆಶಾ ಕಾರ್ಯಕರ್ತೆಯರಿಗೆ ಆರ್ಥಿಕವಾಗಿ ಸಮಸ್ಯೆ ಎದುರಾಗಿದೆ’ ಎಂದು ದೂರಿದರು.</p>.<p>‘ಕೇಂದ್ರ ಸರ್ಕಾರವು 9 ಚಟುವಟಿಕೆಗಳಿಗೆ ಅಗತ್ಯ ಅನುಮೋದನೆ ಹಾಗೂ ಅನುದಾನ ಒದಗಿಸಿ ಪ್ರೋತ್ಸಾಹಧನ ಪಾವತಿಸುವವರೆಗೆ ಸಂಬಂಧಿತ ಕೆಲಸಗಳನ್ನು ಮಾಡುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು.</p>.<p>‘ಸರ್ಕಾರ ಆಶಾ ಕಾರ್ಯಕರ್ತೆಯರ ಮೇಲೆ ಹೆಚ್ಚುವರಿ ಕೆಲಸಗಳ ಒತ್ತಡ ಹೇರದೆ, ಈಗಾಗಲೇ ಮಾಡುತ್ತಿರುವ ಕೆಲಸಗಳಿಗೆ ಸಮರ್ಪಕ ಪ್ರೋತ್ಸಾಹಧನ ಹಾಗೂ ಕಾರ್ಮಿಕ ಹಕ್ಕುಗಳನ್ನು ಖಾತ್ರಿಪಡಿಸಬೇಕು’ ಎಂದು ಆಗ್ರಹಿಸಿದರು.</p>.<p>ಆಶಾ ಮುಖಂಡರಾದ ಮಲ್ಲಮ್ಮ ಗಡಾದ, ಪೂರ್ಣಿಮಾ, ಶಿವಮ್ಮ, ಭಾನು, ಪುಷ್ಪಾವತಿ, ಮಹಾದೇವಿ, ಅನ್ನಪೂರ್ಣ , ವಿದ್ಯಾ ಸೇರಿದಂತೆ ಇತರರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-35-1059085151</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>