<p>ಕನಕಗಿರಿ: ‘ಬೇಸಿಗೆ ಹಿನ್ನೆಲೆಯಲ್ಲಿ ತಾಲ್ಲೂಕಿನ 11 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮ ವಹಿಸಬೇಕು’ ಎಂದು ತಹಶೀಲ್ದಾರ್ ವಿಶ್ವನಾಥ ಮುರುಡಿ ಹೇಳಿದರು.</p>.<p>ಇಲ್ಲಿನ ತಾ.ಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಪಿಡಿಒ ಹಾಗೂ ಇತರೆ ಸಿಬ್ಬಂದಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಕುಡಿಯುವ ನೀರಿನ ಸಮಸ್ಯೆ ಕುರಿತು ಗ್ರಾಮ ಪಂಚಾಯಿತಿಯವರು ಜಾಗ್ರತೆ ವಹಿಸಬೇಕು. ಜತೆಗೆ ವಾಟರ್ ಮ್ಯಾನ್ಗಳು ಯಾವ ಬೋರ್ವೆಲ್ಗಳಲ್ಲಿ ನೀರು ಕಡಿಮೆಯಾಗಿದೆ ಎಂಬುದರ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಬೇಕು’ ಎಂದರು.</p>.<p>‘ನೀರನ್ನು ವಿನಾಃ ಕಾರಣ ಪೋಲು ಮಾಡಬಾರದು. ಪ್ರತಿನಿತ್ಯ ಸಮಯ ನಿಗದಿಪಡಿಸಿ, ನೀರು ಪೂರೈಸಬೇಕು. ಜೊತೆಗೆ ಪೈಪ್ ಲೈನ್ ಎಲ್ಲಿ ಲೀಕ್ ಆಗುತ್ತಿದೆ ಎಂಬುದರ ಬಗ್ಗೆ ಮಾಹಿತಿ ಇರಬೇಕು’ ಎಂದು ತಿಳಿಸಿದರು.</p>.<p>ತಾ.ಪಂ ಇಒ ಕೆ.ರಾಜಶೇಖರ್ ಮಾತನಾಡಿ,‘ಪಿಡಿಒಗಳು ಹಾಗೂ ವಾಟರ್ ಮ್ಯಾನ್ಗಳು ತಾಲ್ಲೂಕಿನ ಎಲ್ಲಾ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಆಗದಂತೆ ಕ್ರಮವಹಿಸಬೇಕು. ನಿಮ್ಮ ಕೆಲಸವನ್ನು ಸರಿಯಾಗಿ ನಿರ್ವಹಿಸಿದರೆ, ಯಾವ ಗ್ರಾಮಗಳಲ್ಲಿಯೂ ಸಮಸ್ಯೆಗಳು ಉಲ್ಬಣವಾಗುವುದಿಲ್ಲ ಎಂಬುದು ಅರಿತುಕೊಳ್ಳಬೇಕು’ ಎಂದು ಹೇಳಿದರು.</p>.<p>ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-35-397029331</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಗಿರಿ: ‘ಬೇಸಿಗೆ ಹಿನ್ನೆಲೆಯಲ್ಲಿ ತಾಲ್ಲೂಕಿನ 11 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮ ವಹಿಸಬೇಕು’ ಎಂದು ತಹಶೀಲ್ದಾರ್ ವಿಶ್ವನಾಥ ಮುರುಡಿ ಹೇಳಿದರು.</p>.<p>ಇಲ್ಲಿನ ತಾ.ಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಪಿಡಿಒ ಹಾಗೂ ಇತರೆ ಸಿಬ್ಬಂದಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಕುಡಿಯುವ ನೀರಿನ ಸಮಸ್ಯೆ ಕುರಿತು ಗ್ರಾಮ ಪಂಚಾಯಿತಿಯವರು ಜಾಗ್ರತೆ ವಹಿಸಬೇಕು. ಜತೆಗೆ ವಾಟರ್ ಮ್ಯಾನ್ಗಳು ಯಾವ ಬೋರ್ವೆಲ್ಗಳಲ್ಲಿ ನೀರು ಕಡಿಮೆಯಾಗಿದೆ ಎಂಬುದರ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಬೇಕು’ ಎಂದರು.</p>.<p>‘ನೀರನ್ನು ವಿನಾಃ ಕಾರಣ ಪೋಲು ಮಾಡಬಾರದು. ಪ್ರತಿನಿತ್ಯ ಸಮಯ ನಿಗದಿಪಡಿಸಿ, ನೀರು ಪೂರೈಸಬೇಕು. ಜೊತೆಗೆ ಪೈಪ್ ಲೈನ್ ಎಲ್ಲಿ ಲೀಕ್ ಆಗುತ್ತಿದೆ ಎಂಬುದರ ಬಗ್ಗೆ ಮಾಹಿತಿ ಇರಬೇಕು’ ಎಂದು ತಿಳಿಸಿದರು.</p>.<p>ತಾ.ಪಂ ಇಒ ಕೆ.ರಾಜಶೇಖರ್ ಮಾತನಾಡಿ,‘ಪಿಡಿಒಗಳು ಹಾಗೂ ವಾಟರ್ ಮ್ಯಾನ್ಗಳು ತಾಲ್ಲೂಕಿನ ಎಲ್ಲಾ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಆಗದಂತೆ ಕ್ರಮವಹಿಸಬೇಕು. ನಿಮ್ಮ ಕೆಲಸವನ್ನು ಸರಿಯಾಗಿ ನಿರ್ವಹಿಸಿದರೆ, ಯಾವ ಗ್ರಾಮಗಳಲ್ಲಿಯೂ ಸಮಸ್ಯೆಗಳು ಉಲ್ಬಣವಾಗುವುದಿಲ್ಲ ಎಂಬುದು ಅರಿತುಕೊಳ್ಳಬೇಕು’ ಎಂದು ಹೇಳಿದರು.</p>.<p>ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-35-397029331</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>