<p><strong>ಕನಕಗಿರಿ</strong>: ಸಮೀಪದ ಹಿರೇಮಾದಿನಾಳ ಗ್ರಾಮದ ಪ್ರಸನ್ನ ವೀರಾಂಜನೇಯ ದೇವರ ರಥೋತ್ಸವ ಶುಕ್ರವಾರ ಸಂಜೆ ವಿಜೃಂಭಣೆಯಿಂದ ನಡೆಯಿತು.</p>.<p>ಬೆಳಿಗ್ಗೆ ಮಂತ್ರಾಲಯದ ಕ್ರಿಷ್ಣಾಚಾರ್ಯ ರಾಜಪುರೋಹಿತ ಹಾಗೂ ಎಂ.ಜಯಸಿಂಹಾಚಾರ್ಯ ನೇತೃತ್ವದಲ್ಲಿ ರಥಾಂಗ ಹೋಮ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ದಾ, ಭಕ್ತಿಯಿಂದ ಜರುಗಿದವು. ಬಾಲಗೋಪಾಲದಾಸ ಹಾಗೂ ಶಕುಂತಲಾ ಅವರು ಹೋಮಕ್ಕೆ ಪೂರ್ಣಾಹುತಿ ಸಮರ್ಪಿಸಿದರು. <br> ರಥೋತ್ಸವ ನಡೆದಾಗ ಭಕ್ತರು ಬಾಳೆಹಣ್ಣು, ಉತ್ತತ್ತಿ ಎಸೆದು ಧನ್ಯತೆ ಮೆರೆದರು. ಹಿರೇಮಾದಿನಾಳ, ಚಿಕ್ಕಮಾದಿನಾಳ, ಅಗೋಲಿ, ವಿಠಲಾಪುರ, ನಾಗಲಾಪುರ, ರಾಮದುರ್ಗ, ಬಂಕಾಪುರ ಭಾಗವಹಿಸಿದ್ದರು. ಹೂವು, ದವನ, ಕಾಯಿ, ಕರ್ಪೂರ ಇತರೆ ಪೂಜಾ ಸಾಮಗ್ರಿಗಳ ಖರೀದಿ ಜೋರಾಗಿತ್ತು. </p>.<p><strong>ಗ</strong><strong>ರುಡೋತ್ಸವ</strong>: ಪ್ರಸನ್ನ ವೀರಾಂಜನೇಯಸ್ವಾಮಿಯ ರಥೋತ್ಸವ ಶುಕ್ರವಾರ ಸಂಜೆ ವಿಜೃಂಭಣೆಯಿಂದ ನಡೆಯಿತು. ಈ ನಿಮಿತ್ತ ದೇಗುದಲ್ಲಿ ಸೀತಾರಾಮ ಕಲ್ಯಾಣೋತ್ಸವ ಶ್ರದ್ಧೆ, ಭಕ್ತಿಯಿಂದ ನಡೆಯಿತು. ಮಂಗಳಾರುತಿ ಮಾಡುವ ಮೂಲಕ ಗರುಡೋತ್ಸವಕ್ಕೆ ಚಾಲನೆ ನೀಡಲಾಯಿತು.</p>.<p>ಗ್ರಾಮದ ಪ್ರಮುಖ ಬೀದಿಯಿಂದ ಅಗಸಿ ಬಾಗಿಲಿನ ಬಸವಣ್ಣ ದೇವಸ್ಥಾನದವರೆಗೆ ನಂತರ ವೀರಾಂಜನೇಯ ದೇವಸ್ಥಾನಕ್ಕೆ ತಲುಪಿತು. ಭಕ್ತರು ಗೋವಿಂದಾ, ಗೋವಿಂದಾ ಎಂಬ ನಾಮ ಸ್ಮರಣೆ ಮಾಡಿದರು. ದೀವಟಗಿ ಹಿಡಿದು ಕರ್ಪೂರ ದಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಗಿರಿ</strong>: ಸಮೀಪದ ಹಿರೇಮಾದಿನಾಳ ಗ್ರಾಮದ ಪ್ರಸನ್ನ ವೀರಾಂಜನೇಯ ದೇವರ ರಥೋತ್ಸವ ಶುಕ್ರವಾರ ಸಂಜೆ ವಿಜೃಂಭಣೆಯಿಂದ ನಡೆಯಿತು.</p>.<p>ಬೆಳಿಗ್ಗೆ ಮಂತ್ರಾಲಯದ ಕ್ರಿಷ್ಣಾಚಾರ್ಯ ರಾಜಪುರೋಹಿತ ಹಾಗೂ ಎಂ.ಜಯಸಿಂಹಾಚಾರ್ಯ ನೇತೃತ್ವದಲ್ಲಿ ರಥಾಂಗ ಹೋಮ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ದಾ, ಭಕ್ತಿಯಿಂದ ಜರುಗಿದವು. ಬಾಲಗೋಪಾಲದಾಸ ಹಾಗೂ ಶಕುಂತಲಾ ಅವರು ಹೋಮಕ್ಕೆ ಪೂರ್ಣಾಹುತಿ ಸಮರ್ಪಿಸಿದರು. <br> ರಥೋತ್ಸವ ನಡೆದಾಗ ಭಕ್ತರು ಬಾಳೆಹಣ್ಣು, ಉತ್ತತ್ತಿ ಎಸೆದು ಧನ್ಯತೆ ಮೆರೆದರು. ಹಿರೇಮಾದಿನಾಳ, ಚಿಕ್ಕಮಾದಿನಾಳ, ಅಗೋಲಿ, ವಿಠಲಾಪುರ, ನಾಗಲಾಪುರ, ರಾಮದುರ್ಗ, ಬಂಕಾಪುರ ಭಾಗವಹಿಸಿದ್ದರು. ಹೂವು, ದವನ, ಕಾಯಿ, ಕರ್ಪೂರ ಇತರೆ ಪೂಜಾ ಸಾಮಗ್ರಿಗಳ ಖರೀದಿ ಜೋರಾಗಿತ್ತು. </p>.<p><strong>ಗ</strong><strong>ರುಡೋತ್ಸವ</strong>: ಪ್ರಸನ್ನ ವೀರಾಂಜನೇಯಸ್ವಾಮಿಯ ರಥೋತ್ಸವ ಶುಕ್ರವಾರ ಸಂಜೆ ವಿಜೃಂಭಣೆಯಿಂದ ನಡೆಯಿತು. ಈ ನಿಮಿತ್ತ ದೇಗುದಲ್ಲಿ ಸೀತಾರಾಮ ಕಲ್ಯಾಣೋತ್ಸವ ಶ್ರದ್ಧೆ, ಭಕ್ತಿಯಿಂದ ನಡೆಯಿತು. ಮಂಗಳಾರುತಿ ಮಾಡುವ ಮೂಲಕ ಗರುಡೋತ್ಸವಕ್ಕೆ ಚಾಲನೆ ನೀಡಲಾಯಿತು.</p>.<p>ಗ್ರಾಮದ ಪ್ರಮುಖ ಬೀದಿಯಿಂದ ಅಗಸಿ ಬಾಗಿಲಿನ ಬಸವಣ್ಣ ದೇವಸ್ಥಾನದವರೆಗೆ ನಂತರ ವೀರಾಂಜನೇಯ ದೇವಸ್ಥಾನಕ್ಕೆ ತಲುಪಿತು. ಭಕ್ತರು ಗೋವಿಂದಾ, ಗೋವಿಂದಾ ಎಂಬ ನಾಮ ಸ್ಮರಣೆ ಮಾಡಿದರು. ದೀವಟಗಿ ಹಿಡಿದು ಕರ್ಪೂರ ದಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>