<p>ಕನಕಗಿರಿ: ತಾಲ್ಲೂಕಿನ ಕೆರೆ, ಹಳ್ಳ ಪಾತ್ರದ ಗ್ರಾಮಗಳಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ಹಾಗೂ ಸಾಗಾಣಿಕೆ ತಡೆಯಲು ಇಲ್ಲಿನ ತಹಶೀಲ್ದಾರ್ ವಿಶ್ವನಾಥ ಮುರುಡಿ ಅವರು ಬುಧವಾರ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.</p>.<p>ಕನಕಗಿರಿ, ಚಿಕ್ಕಮಾದಿನಾಳ, ರಾಮದುರ್ಗ, ನಾಗಲಾಪುರ, ನವಲಿ, ಬುನ್ನಟ್ಟಿ, ಈಚನಾಳ, ಮಲ್ಲಾಪುರ, ಹಿರೇಮಾದಿನಾಳ, ಉದ್ದಿಹಾಳ, ಯತ್ನಟ್ಟಿ, ಜೀರಾಳ, ಚಿಕ್ಕಡಂಕಲ್ ಸೇರಿದಂತೆ ಹೋಬಳಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಅಕ್ರಮ ಮರಳು ತೆಗೆಯುವುದು, ಸಾಗಿಸುವುದನ್ನು ಬಿಎನ್ಎಸ್ ಕಲಂ 163ರ ಅಡಿ ನಿಷೇಧಿಸಲಾಗಿದೆ.</p>.<p>ಕರ್ನಾಟಕ ಉಪಖನಿಜ ರಿಯಾಯಿತಿ ನಿಯಮಗಳು 1994 ಹಾಗೂ ನಿಯಮಗಳು 2016 ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163ರ ಪ್ರಕಾರ ಈ ಕ್ರಮ ಜರುಗಿಸಲಾಗಿದೆ. ಅಕ್ರಮ ಮರಳು ದಂಧೆ ಹೆಚ್ಚಿದ್ದರಿಂದ ಸರ್ಕಾರಕ್ಕೆ ನಷ್ಟ ಹಾಗೂ ಪರಿಸರ ಹಾನಿಯಾಗುತ್ತಿತ್ತು. ಆದೇಶ ಉಲ್ಲಂಘಿಸಿದರೆ ಸೂಕ್ತ ಕಾನೂನು ಕ್ರಮಕೈಗೊಳ್ಳಲು ಪೊಲೀಸರಿಗೆ ಸೂಚಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-35-949436456</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಗಿರಿ: ತಾಲ್ಲೂಕಿನ ಕೆರೆ, ಹಳ್ಳ ಪಾತ್ರದ ಗ್ರಾಮಗಳಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ಹಾಗೂ ಸಾಗಾಣಿಕೆ ತಡೆಯಲು ಇಲ್ಲಿನ ತಹಶೀಲ್ದಾರ್ ವಿಶ್ವನಾಥ ಮುರುಡಿ ಅವರು ಬುಧವಾರ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.</p>.<p>ಕನಕಗಿರಿ, ಚಿಕ್ಕಮಾದಿನಾಳ, ರಾಮದುರ್ಗ, ನಾಗಲಾಪುರ, ನವಲಿ, ಬುನ್ನಟ್ಟಿ, ಈಚನಾಳ, ಮಲ್ಲಾಪುರ, ಹಿರೇಮಾದಿನಾಳ, ಉದ್ದಿಹಾಳ, ಯತ್ನಟ್ಟಿ, ಜೀರಾಳ, ಚಿಕ್ಕಡಂಕಲ್ ಸೇರಿದಂತೆ ಹೋಬಳಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಅಕ್ರಮ ಮರಳು ತೆಗೆಯುವುದು, ಸಾಗಿಸುವುದನ್ನು ಬಿಎನ್ಎಸ್ ಕಲಂ 163ರ ಅಡಿ ನಿಷೇಧಿಸಲಾಗಿದೆ.</p>.<p>ಕರ್ನಾಟಕ ಉಪಖನಿಜ ರಿಯಾಯಿತಿ ನಿಯಮಗಳು 1994 ಹಾಗೂ ನಿಯಮಗಳು 2016 ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163ರ ಪ್ರಕಾರ ಈ ಕ್ರಮ ಜರುಗಿಸಲಾಗಿದೆ. ಅಕ್ರಮ ಮರಳು ದಂಧೆ ಹೆಚ್ಚಿದ್ದರಿಂದ ಸರ್ಕಾರಕ್ಕೆ ನಷ್ಟ ಹಾಗೂ ಪರಿಸರ ಹಾನಿಯಾಗುತ್ತಿತ್ತು. ಆದೇಶ ಉಲ್ಲಂಘಿಸಿದರೆ ಸೂಕ್ತ ಕಾನೂನು ಕ್ರಮಕೈಗೊಳ್ಳಲು ಪೊಲೀಸರಿಗೆ ಸೂಚಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-35-949436456</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>