<p><strong>ಕನಕಗಿರಿ</strong>: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿರುವ ಐತಿಹಾಸಿಕ ಪುಷ್ಕರಣಿಗಳ ಸ್ಥಳಕ್ಕೆ ಬುಧವಾರ ರಾಜ್ಯ ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯ ಹಂಪಿ ಉಪ ನಿರ್ದೇಶಕ ಆರ್.ಶೇಜೇಶ್ವರ ಭೇಟಿ ನೀಡಿ ವೀಕ್ಷಣೆ ಮಾಡಿದರು.</p>.<p>ಸಮೀಪದ ಸೋಮಸಾಗರ ಗ್ರಾಮದ ರೈತರ ಭೂಮಿಯಲ್ಲಿರುವ ಪುಷ್ಕರಣಿ ಭೇಟಿ ನೀಡಿ ಅಧ್ಯಯನ ನಡೆಸಿದರು. ಪುಷ್ಕರಣಿ ಸುತ್ತಲೂ ಭೇಟಿ ನೀಡಿ, ಅಲ್ಲಿರುವ ಕೆತ್ತನೆಯ ಚಿತ್ರಗಳನ್ನು ಸೆರೆ ಹಿಡಿದು ಮಾಹಿತಿ ಪಡೆದರು.</p>.<p>ಬಸರಿಹಾಳ ಗ್ರಾಮದ ರೈತರ ಪುಷ್ಕರಣಿ ಹಾಗೂ ಹುಲಿಹೈದರ ಗ್ರಾಮದಲ್ಲಿ ವಿವಿಧ ಪುಷ್ಕರಣಿಗಳಿಗೆ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸಿದರು.</p>.<p>ತಹಶೀಲ್ದಾರ್ ವಿಶ್ವನಾಥ ಮುರುಡಿ ಮಾತನಾಡಿ, ‘ತಾಲ್ಲೂಕಿನಲ್ಲಿರುವ ಎಲ್ಲಾ ಪುಷ್ಕರಣಿಗಳ ಮಾಹಿತಿಯನ್ನು ಕಲೆಹಾಕಿ ಸರ್ಕಾರದಿಂದ ಅದಿಸೂಚನೆ ಮಾಡಿಸಿ ಸಂರಕ್ಷಿಸಲಾಗುವುದು’ ಎಂದು ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಲ್.ವಿರೇಂದ್ರಕುಮಾರ, ಸಹಾಯಕ ನಿರ್ದೇಶಕ ಚಂದ್ರಶೇಖರ ಕಂದಕೂರ, ಪುರಾತತ್ವ ಸಹಾಯಕ ಡಾ.ಮಂಜನಾಯ್ಕ, ಪಿಡಿಒ ಬಸವರಾಜ ಸಂಕನೂರ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಗಿರಿ</strong>: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿರುವ ಐತಿಹಾಸಿಕ ಪುಷ್ಕರಣಿಗಳ ಸ್ಥಳಕ್ಕೆ ಬುಧವಾರ ರಾಜ್ಯ ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯ ಹಂಪಿ ಉಪ ನಿರ್ದೇಶಕ ಆರ್.ಶೇಜೇಶ್ವರ ಭೇಟಿ ನೀಡಿ ವೀಕ್ಷಣೆ ಮಾಡಿದರು.</p>.<p>ಸಮೀಪದ ಸೋಮಸಾಗರ ಗ್ರಾಮದ ರೈತರ ಭೂಮಿಯಲ್ಲಿರುವ ಪುಷ್ಕರಣಿ ಭೇಟಿ ನೀಡಿ ಅಧ್ಯಯನ ನಡೆಸಿದರು. ಪುಷ್ಕರಣಿ ಸುತ್ತಲೂ ಭೇಟಿ ನೀಡಿ, ಅಲ್ಲಿರುವ ಕೆತ್ತನೆಯ ಚಿತ್ರಗಳನ್ನು ಸೆರೆ ಹಿಡಿದು ಮಾಹಿತಿ ಪಡೆದರು.</p>.<p>ಬಸರಿಹಾಳ ಗ್ರಾಮದ ರೈತರ ಪುಷ್ಕರಣಿ ಹಾಗೂ ಹುಲಿಹೈದರ ಗ್ರಾಮದಲ್ಲಿ ವಿವಿಧ ಪುಷ್ಕರಣಿಗಳಿಗೆ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸಿದರು.</p>.<p>ತಹಶೀಲ್ದಾರ್ ವಿಶ್ವನಾಥ ಮುರುಡಿ ಮಾತನಾಡಿ, ‘ತಾಲ್ಲೂಕಿನಲ್ಲಿರುವ ಎಲ್ಲಾ ಪುಷ್ಕರಣಿಗಳ ಮಾಹಿತಿಯನ್ನು ಕಲೆಹಾಕಿ ಸರ್ಕಾರದಿಂದ ಅದಿಸೂಚನೆ ಮಾಡಿಸಿ ಸಂರಕ್ಷಿಸಲಾಗುವುದು’ ಎಂದು ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಲ್.ವಿರೇಂದ್ರಕುಮಾರ, ಸಹಾಯಕ ನಿರ್ದೇಶಕ ಚಂದ್ರಶೇಖರ ಕಂದಕೂರ, ಪುರಾತತ್ವ ಸಹಾಯಕ ಡಾ.ಮಂಜನಾಯ್ಕ, ಪಿಡಿಒ ಬಸವರಾಜ ಸಂಕನೂರ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>