<p><strong>ಕನಕಗಿರಿ:</strong> ಕಳೆದ ಇಪ್ಪತ್ತು ದಿನಗಳ ಹಿಂದೆ ಈ ಭಾಗದಲ್ಲಿ ಕಾಣಿಸಿಕೊಂಡು ಜನರಲ್ಲಿ ಆತಂಕ ಉಂಟುಮಾಡಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.</p>.<p>ಸಮೀಪದ ಅಡವಿಬಾವಿ ಗ್ರಾಮದ ಪರಿಸರದಲ್ಲಿ ಅಂದಾಜು ನಾಲ್ಕು ವರ್ಷದ ಗಂಡು ಚಿರತೆ ಶನಿವಾರ ನಸುಕಿನ ಜಾವ ಬೋನಿಗೆ ಬಿದ್ದಿದೆ.</p>.<p>ಚಿರತೆಗೆ ನಾಯಿ ಎಂದರೆ ಎಲ್ಲಿಲ್ಲದ ಪ್ರೀತಿ, ಬೋನಿನ ಒಂದು ಭಾಗದಲ್ಲಿ ನಾಯಿಯನ್ನು ಬಿಟ್ಟು ಉಳಿದ ಭಾಗಕ್ಕೆ ಗಿಡದ ತಪ್ಪಲುಗಳಿಂದ ಮುಚ್ಚಿ ಚಾಣಾಕ್ಷತನ ಮೆರೆಯಲಾಗಿತ್ತು.ನಾಯಿಯನ್ನು ತಿನ್ನಲು ಬಂದ ಚಿರತೆ ಬೋನಿಗೆ ಬಿದ್ದಿದೆ.</p>.<p>ಚಿರತೆ ಸೆರೆ ಸಿಕ್ಕ ವಿಷಯ ತಿಳಿದ ಅಡವಿಬಾವಿ, ಹುಲಸನಹಟ್ಟಿ, ಬಸರಿಹಾಳ, ಸೋಮಸಾಗರ ಸೇರಿದಂತೆ ವಿವಿಧ ಗ್ರಾಮಗಳ ನೂರಾರು ಜನ ತಂಡೋಪ ತಂಡವಾಗಿ ಬಂದು ಚಿರತೆ ವೀಕ್ಷಿಸಿದರು.</p>.<p>ವಲಯ ಅರಣ್ಯ ಅಧಿಕಾರಿ ಶಿವರಾಜ ಮೇಟಿ ಮಾತನಾಡಿ ಗ್ರಾಮಸ್ಥರ ಮನವಿ ಮೆರೆಗೆ ಚಿರತೆ ಸೆರೆಗೆ ಬೋನಿನ ವ್ಯವಸ್ಥೆ ಮಾಡಿ, ಪ್ರತಿದಿನನಾಯಿಗೆ ಆಹಾರ ನೀಡಲಾಗುತ್ತಿತ್ತು.</p>.<p>ಚಿರತೆ ಬೋನಿಗೆ ಬಿದ್ದಿದ್ದು,ಹೊಸಪೇಟೆ ಜಿಲ್ಲೆಯ ಕಮಲಾಪುರ ಪ್ರಾಣಿ ಸಂಗ್ರಹಾಲಯಕ್ಕೆ ಕಳಿಸಿಕೊಡಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಗಿರಿ:</strong> ಕಳೆದ ಇಪ್ಪತ್ತು ದಿನಗಳ ಹಿಂದೆ ಈ ಭಾಗದಲ್ಲಿ ಕಾಣಿಸಿಕೊಂಡು ಜನರಲ್ಲಿ ಆತಂಕ ಉಂಟುಮಾಡಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.</p>.<p>ಸಮೀಪದ ಅಡವಿಬಾವಿ ಗ್ರಾಮದ ಪರಿಸರದಲ್ಲಿ ಅಂದಾಜು ನಾಲ್ಕು ವರ್ಷದ ಗಂಡು ಚಿರತೆ ಶನಿವಾರ ನಸುಕಿನ ಜಾವ ಬೋನಿಗೆ ಬಿದ್ದಿದೆ.</p>.<p>ಚಿರತೆಗೆ ನಾಯಿ ಎಂದರೆ ಎಲ್ಲಿಲ್ಲದ ಪ್ರೀತಿ, ಬೋನಿನ ಒಂದು ಭಾಗದಲ್ಲಿ ನಾಯಿಯನ್ನು ಬಿಟ್ಟು ಉಳಿದ ಭಾಗಕ್ಕೆ ಗಿಡದ ತಪ್ಪಲುಗಳಿಂದ ಮುಚ್ಚಿ ಚಾಣಾಕ್ಷತನ ಮೆರೆಯಲಾಗಿತ್ತು.ನಾಯಿಯನ್ನು ತಿನ್ನಲು ಬಂದ ಚಿರತೆ ಬೋನಿಗೆ ಬಿದ್ದಿದೆ.</p>.<p>ಚಿರತೆ ಸೆರೆ ಸಿಕ್ಕ ವಿಷಯ ತಿಳಿದ ಅಡವಿಬಾವಿ, ಹುಲಸನಹಟ್ಟಿ, ಬಸರಿಹಾಳ, ಸೋಮಸಾಗರ ಸೇರಿದಂತೆ ವಿವಿಧ ಗ್ರಾಮಗಳ ನೂರಾರು ಜನ ತಂಡೋಪ ತಂಡವಾಗಿ ಬಂದು ಚಿರತೆ ವೀಕ್ಷಿಸಿದರು.</p>.<p>ವಲಯ ಅರಣ್ಯ ಅಧಿಕಾರಿ ಶಿವರಾಜ ಮೇಟಿ ಮಾತನಾಡಿ ಗ್ರಾಮಸ್ಥರ ಮನವಿ ಮೆರೆಗೆ ಚಿರತೆ ಸೆರೆಗೆ ಬೋನಿನ ವ್ಯವಸ್ಥೆ ಮಾಡಿ, ಪ್ರತಿದಿನನಾಯಿಗೆ ಆಹಾರ ನೀಡಲಾಗುತ್ತಿತ್ತು.</p>.<p>ಚಿರತೆ ಬೋನಿಗೆ ಬಿದ್ದಿದ್ದು,ಹೊಸಪೇಟೆ ಜಿಲ್ಲೆಯ ಕಮಲಾಪುರ ಪ್ರಾಣಿ ಸಂಗ್ರಹಾಲಯಕ್ಕೆ ಕಳಿಸಿಕೊಡಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>