<p>ಕನಕಗಿರಿ: ಇಲ್ಲಿನ ಸುವರ್ಣಗಿರಿ ಸಂಸ್ಥಾನ ವಿರಕ್ತಮಠದ ಆಶ್ರಯದಲ್ಲಿ ವಿಶ್ವಗುರು ಬಸವಣ್ಣನವರ 893ನೇಜಯಂತಿ ನಿಮಿತ್ತ ಸೋಮವಾರ ಸುವರ್ಣಗಿರಿ ವೈಭವ, ಸುವರ್ಣಗಿರಿ ಪ್ರಶಸ್ತಿ ಪ್ರದಾನ, ಇತರೆ ಕಾರ್ಯಕ್ರಮ ನಡೆಯಲಿವೆ.</p>.<p>ಮಹಾಂತ ಶಿವಾಚಾರ್ಯ ಅವರ ನೇತೃತ್ವದಲ್ಲಿ ಬೆಳಿಗ್ಗೆ 5 ಗಂಟೆಗೆ ವಿರಕ್ತಮಠದಲ್ಲಿ ಅಯ್ಯಚಾರ ಹಾಗೂ ಲಿಂಗದೀಕ್ಷೆ ಕಾರ್ಯಕ್ರಮ ಹಾಗೂ ಮಧ್ಯಾಹ್ನ 5 ಗಂಟೆಗೆ ಬಸವೇಶ್ವರರ ಮೂರ್ತಿಯ ಮೆರವಣಿಗೆಯು ಪಟ್ಟಣದ ರಾಜಬೀದಿ ಸೇರಿದಂತೆ ವಿವಿಧ ಬೀದಿಗಳಲ್ಲಿ ನಡೆಯಲಿದೆ. ನಗರಗಡ್ಡಿಯ ಶಾಂತಲಿಂಗೇಶ್ವರ ಸಂಸ್ಥಾನಮಠದ ಶಾಂತಲಿಂಗೇಶ್ವರಬಸ್ವಾಮೀಜಿ, ಸಂತೆಕೆಲ್ಲೂರಿನ ಮಹಂತಿನಮಠದ ಮಹಾಂತ ಶಿವಾಚಾರ್ಯ ಸ್ವಾಮೀಜಿ ಮೆರವಣಿಗೆಗೆ ಚಾಲನೆ ನೀಡುವರು.</p>.<p>ಸಂಜೆ 6.30ಕ್ಕೆ ಸುವರ್ಣಗಿರಿ ಪ್ರಶಸ್ತಿ, ಪರಿಪೂರ್ಣದೆಡೆಗೆ ಆಧ್ಯಾತ್ಮಿಕ ಪ್ರವಚನದ ಸಮಾರೋಪ ನಡೆಯಲಿದ್ದು ಹಿರಿಯ ಸಾಹಿತಿ ಚಂದ್ರಶೇಖರ ಕಂಬಾರ ಅವರಿಗೆ ಸುವರ್ಣಗಿರಿ ಪ್ರಶಸ್ತಿ ಪ್ರದಾನ ಮಾಡಲಾಗುವದು. ಈ ಸಮಯದಲ್ಲಿ ವಿವಿಧ ಮಠಾಧೀಶರು, ಅಧಿಕಾರಿಗಳು ಭಾಗವಹಿಸುವರು. ಮೈಸೂರು ವಿಶ್ವ ವಿದ್ಯಾಲಯದ ಸ್ನಾತಕೋತ್ತರ ಪದವಿಯಲ್ಲಿ 13 ಚಿನ್ನದ ಪದಕ ಹಾಗೂ 4 ನಗದು ಬಹುಮಾನ ಪಡೆದ ತಾಲ್ಲೂಕಿನ ಕನ್ನೇರಮಡಗು ಗ್ರಾಮದ ವಿದ್ಯಾರ್ಥಿ ಚಂದ್ರಶೇಖರ ಕುಷ್ಟಗಿ ಹಾಗೂ ಆಯಾ ಗ್ರಾಮಗಳಲ್ಲಿ ಪ್ರವಚನ ಕಾರ್ಯಕ್ರಮ ನಡೆಸಿಕೊಟ್ಟ ಗ್ರಾಮಸ್ಥರಿಗೆ ಗುರುರಕ್ಷೆ ಹಾಗೂ ಕಾರಟಗಿಯ ಶರಣಬಸವೇಶ್ವರ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-35-1046831469</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಗಿರಿ: ಇಲ್ಲಿನ ಸುವರ್ಣಗಿರಿ ಸಂಸ್ಥಾನ ವಿರಕ್ತಮಠದ ಆಶ್ರಯದಲ್ಲಿ ವಿಶ್ವಗುರು ಬಸವಣ್ಣನವರ 893ನೇಜಯಂತಿ ನಿಮಿತ್ತ ಸೋಮವಾರ ಸುವರ್ಣಗಿರಿ ವೈಭವ, ಸುವರ್ಣಗಿರಿ ಪ್ರಶಸ್ತಿ ಪ್ರದಾನ, ಇತರೆ ಕಾರ್ಯಕ್ರಮ ನಡೆಯಲಿವೆ.</p>.<p>ಮಹಾಂತ ಶಿವಾಚಾರ್ಯ ಅವರ ನೇತೃತ್ವದಲ್ಲಿ ಬೆಳಿಗ್ಗೆ 5 ಗಂಟೆಗೆ ವಿರಕ್ತಮಠದಲ್ಲಿ ಅಯ್ಯಚಾರ ಹಾಗೂ ಲಿಂಗದೀಕ್ಷೆ ಕಾರ್ಯಕ್ರಮ ಹಾಗೂ ಮಧ್ಯಾಹ್ನ 5 ಗಂಟೆಗೆ ಬಸವೇಶ್ವರರ ಮೂರ್ತಿಯ ಮೆರವಣಿಗೆಯು ಪಟ್ಟಣದ ರಾಜಬೀದಿ ಸೇರಿದಂತೆ ವಿವಿಧ ಬೀದಿಗಳಲ್ಲಿ ನಡೆಯಲಿದೆ. ನಗರಗಡ್ಡಿಯ ಶಾಂತಲಿಂಗೇಶ್ವರ ಸಂಸ್ಥಾನಮಠದ ಶಾಂತಲಿಂಗೇಶ್ವರಬಸ್ವಾಮೀಜಿ, ಸಂತೆಕೆಲ್ಲೂರಿನ ಮಹಂತಿನಮಠದ ಮಹಾಂತ ಶಿವಾಚಾರ್ಯ ಸ್ವಾಮೀಜಿ ಮೆರವಣಿಗೆಗೆ ಚಾಲನೆ ನೀಡುವರು.</p>.<p>ಸಂಜೆ 6.30ಕ್ಕೆ ಸುವರ್ಣಗಿರಿ ಪ್ರಶಸ್ತಿ, ಪರಿಪೂರ್ಣದೆಡೆಗೆ ಆಧ್ಯಾತ್ಮಿಕ ಪ್ರವಚನದ ಸಮಾರೋಪ ನಡೆಯಲಿದ್ದು ಹಿರಿಯ ಸಾಹಿತಿ ಚಂದ್ರಶೇಖರ ಕಂಬಾರ ಅವರಿಗೆ ಸುವರ್ಣಗಿರಿ ಪ್ರಶಸ್ತಿ ಪ್ರದಾನ ಮಾಡಲಾಗುವದು. ಈ ಸಮಯದಲ್ಲಿ ವಿವಿಧ ಮಠಾಧೀಶರು, ಅಧಿಕಾರಿಗಳು ಭಾಗವಹಿಸುವರು. ಮೈಸೂರು ವಿಶ್ವ ವಿದ್ಯಾಲಯದ ಸ್ನಾತಕೋತ್ತರ ಪದವಿಯಲ್ಲಿ 13 ಚಿನ್ನದ ಪದಕ ಹಾಗೂ 4 ನಗದು ಬಹುಮಾನ ಪಡೆದ ತಾಲ್ಲೂಕಿನ ಕನ್ನೇರಮಡಗು ಗ್ರಾಮದ ವಿದ್ಯಾರ್ಥಿ ಚಂದ್ರಶೇಖರ ಕುಷ್ಟಗಿ ಹಾಗೂ ಆಯಾ ಗ್ರಾಮಗಳಲ್ಲಿ ಪ್ರವಚನ ಕಾರ್ಯಕ್ರಮ ನಡೆಸಿಕೊಟ್ಟ ಗ್ರಾಮಸ್ಥರಿಗೆ ಗುರುರಕ್ಷೆ ಹಾಗೂ ಕಾರಟಗಿಯ ಶರಣಬಸವೇಶ್ವರ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-35-1046831469</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>