<p><strong>ಕನಕಗಿರಿ:</strong> ತಾಲ್ಲೂಕಿನ ನವಲಿ ಗ್ರಾಮದ ವ್ಯವಸಾಯ ಸೇವಾ ಸಹಕಾರಿ ಸಂಘದ ಸಿಪಾಯಿಯಾದ (ಸಹಾಯಕ ಹುದ್ದೆ) ಮೆಹಬೂಬಸಾಬ ಪಿಂಜಾರ ಅವರ ಮನೆಯಲ್ಲಿ ಮಂಗಳವಾರ ಕಳ್ಳತನವಾಗಿದೆ.</p>.<p>‘ಗ್ರಾಮದ ವೀರಸಂಗಪ್ಪ ಪಟ್ಟಣಶೆಟ್ಟಿ ಅವರಿಗೆ ಸೇರಿದ ಮನೆಯಲ್ಲಿ ಕಳೆದ ಆರು ವರ್ಷಗಳಿಂದ ಬಾಡಿಗೆ ಇದ್ದು 15 ವರ್ಷದಿಂದ ಸಂಘದಲ್ಲಿ ಸಿಪಾಯಿ ಕೆಲಸ ಮಾಡುತ್ತಿರುವೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ₹ 1.50 ಲಕ್ಷ ನಗದು ಹಾಗೂ ₹ 7.50 ಲಕ್ಷ ಮೊತ್ತದ ಬಂಗಾರದ ಉಂಗುರ, ನೆಕ್ಲೆಸ್, ಮಂಗಳಸೂತ್ರ, ತಾಳಿ, ಕಿವಿಯೋಲೆಯನ್ನು ಕದ್ದುಕೊಂಡು ಹೋಗಿದ್ದಾರೆ’ ಎಂದು ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.</p>.<p><strong>ಯುವತಿ ನಾಪತ್ತೆ: ದೂರು ದಾಖಲು</strong></p>.<p>ಕನಕಗಿರಿ: ‘ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನನ್ನ ಮಗಳು ನಿಂಗಮ್ಮ ಕೋಮಾರ್ ಮನೆಯಿಂದ ಹೊರ ಹೋಗಿದ್ದು ನಾಪತ್ತೆಯಾಗಿದ್ದಾಳೆ’ ಎಂದು ದ್ಯಾಮವ್ವ ದೇವಪ್ಪ ಎಂಬುವವರು ದೂರು ನೀಡಿದ್ದಾರೆ</p>.<p>ಸಂಬಂಧಿಕರು ಹಾಗೂ ತಾನು ಹುಡುಕಿದ್ದು ಸಿಕ್ಕಿಲ್ಲ. ತನ್ನ ಮಗಳನ್ನು ಪತ್ತೆ ಹಚ್ಚಿ ಕೊಡುವಂತೆ ಯುವತಿಯ ತಾಯಿ ನೀಡಿದ ದೂರಿನನ್ವಯ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಗಿರಿ:</strong> ತಾಲ್ಲೂಕಿನ ನವಲಿ ಗ್ರಾಮದ ವ್ಯವಸಾಯ ಸೇವಾ ಸಹಕಾರಿ ಸಂಘದ ಸಿಪಾಯಿಯಾದ (ಸಹಾಯಕ ಹುದ್ದೆ) ಮೆಹಬೂಬಸಾಬ ಪಿಂಜಾರ ಅವರ ಮನೆಯಲ್ಲಿ ಮಂಗಳವಾರ ಕಳ್ಳತನವಾಗಿದೆ.</p>.<p>‘ಗ್ರಾಮದ ವೀರಸಂಗಪ್ಪ ಪಟ್ಟಣಶೆಟ್ಟಿ ಅವರಿಗೆ ಸೇರಿದ ಮನೆಯಲ್ಲಿ ಕಳೆದ ಆರು ವರ್ಷಗಳಿಂದ ಬಾಡಿಗೆ ಇದ್ದು 15 ವರ್ಷದಿಂದ ಸಂಘದಲ್ಲಿ ಸಿಪಾಯಿ ಕೆಲಸ ಮಾಡುತ್ತಿರುವೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ₹ 1.50 ಲಕ್ಷ ನಗದು ಹಾಗೂ ₹ 7.50 ಲಕ್ಷ ಮೊತ್ತದ ಬಂಗಾರದ ಉಂಗುರ, ನೆಕ್ಲೆಸ್, ಮಂಗಳಸೂತ್ರ, ತಾಳಿ, ಕಿವಿಯೋಲೆಯನ್ನು ಕದ್ದುಕೊಂಡು ಹೋಗಿದ್ದಾರೆ’ ಎಂದು ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.</p>.<p><strong>ಯುವತಿ ನಾಪತ್ತೆ: ದೂರು ದಾಖಲು</strong></p>.<p>ಕನಕಗಿರಿ: ‘ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನನ್ನ ಮಗಳು ನಿಂಗಮ್ಮ ಕೋಮಾರ್ ಮನೆಯಿಂದ ಹೊರ ಹೋಗಿದ್ದು ನಾಪತ್ತೆಯಾಗಿದ್ದಾಳೆ’ ಎಂದು ದ್ಯಾಮವ್ವ ದೇವಪ್ಪ ಎಂಬುವವರು ದೂರು ನೀಡಿದ್ದಾರೆ</p>.<p>ಸಂಬಂಧಿಕರು ಹಾಗೂ ತಾನು ಹುಡುಕಿದ್ದು ಸಿಕ್ಕಿಲ್ಲ. ತನ್ನ ಮಗಳನ್ನು ಪತ್ತೆ ಹಚ್ಚಿ ಕೊಡುವಂತೆ ಯುವತಿಯ ತಾಯಿ ನೀಡಿದ ದೂರಿನನ್ವಯ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>