<p><strong>ಕನಕಗಿರಿ: </strong>ಸಮೀಪದ ನವಲಿ ಗ್ರಾಮದ ರೈಸ್ ಟೆಕ್ ಪಾರ್ಕ್ ಪರಿಸರದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ನಾಲ್ಕು ಜನ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.</p>.<p>ಕಾರಟಗಿಯ ಇಂದಿರಾನಗರದಿಂದ ತಾಲ್ಲೂಕಿನ ಶಿರಿವಾರ ಗ್ರಾಮದಲ್ಲಿ ನಡೆಯಲಿದ್ದ ಹೋಳಿಗೆ ಊಟದ ಕಾರ್ಯಕ್ರಮದಲ್ಲಿ ಭಾಗವಹಿಸಲು ಟ್ರ್ಯಾಕ್ಟರ್ನಲ್ಲಿ ಬರುತ್ತಿದ್ದರು ಎನ್ನಲಾಗುತ್ತಿದೆ.</p>.<p>ಅಂಬಮ್ಮ ಚೌಡ್ಕಿ(50), ಯಮನಪ್ಪ ಸಿಂಧನೂರು(36) ಅವರು ಸ್ಥಳದಲ್ಲಿ ಮೃತಪಟ್ಟಿದ್ದು, ದೇವಮ್ಮ(70), ಶೇಷಪ್ಪ (55) ಅವರು ಕಾರಟಗಿ ಆಸ್ಪತ್ರೆಯಲ್ಲಿ ಮೃತಪಟ್ಟರು.</p>.<p>ಆರು ಜನರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಗಂಗಾವತಿಗೆ ಕಳಿಸಲಾಗಿದೆ.</p>.<p>ಮೃತಪಟ್ಟ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಸ್ಥಳೀಯರು ಘಟನೆ ನಡೆದ ಸ್ಥಳದಲ್ಲಿ ಗಾಯಾಳುಗಳನ್ನು ಹಾರೈಕೆ ಮಾಡಿದರು.</p>.<p>ಡಿವೈಎಸ್ಪಿ ರುದ್ರೇಶ ಉಜ್ಜಿನಕೊಪ್ಪ, ಪಿಐ ಪರಸಪ್ಪ ಭಜಂತ್ರಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕನಕಗಿರಿ: </strong>ಸಮೀಪದ ನವಲಿ ಗ್ರಾಮದ ರೈಸ್ ಟೆಕ್ ಪಾರ್ಕ್ ಪರಿಸರದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ನಾಲ್ಕು ಜನ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.</p>.<p>ಕಾರಟಗಿಯ ಇಂದಿರಾನಗರದಿಂದ ತಾಲ್ಲೂಕಿನ ಶಿರಿವಾರ ಗ್ರಾಮದಲ್ಲಿ ನಡೆಯಲಿದ್ದ ಹೋಳಿಗೆ ಊಟದ ಕಾರ್ಯಕ್ರಮದಲ್ಲಿ ಭಾಗವಹಿಸಲು ಟ್ರ್ಯಾಕ್ಟರ್ನಲ್ಲಿ ಬರುತ್ತಿದ್ದರು ಎನ್ನಲಾಗುತ್ತಿದೆ.</p>.<p>ಅಂಬಮ್ಮ ಚೌಡ್ಕಿ(50), ಯಮನಪ್ಪ ಸಿಂಧನೂರು(36) ಅವರು ಸ್ಥಳದಲ್ಲಿ ಮೃತಪಟ್ಟಿದ್ದು, ದೇವಮ್ಮ(70), ಶೇಷಪ್ಪ (55) ಅವರು ಕಾರಟಗಿ ಆಸ್ಪತ್ರೆಯಲ್ಲಿ ಮೃತಪಟ್ಟರು.</p>.<p>ಆರು ಜನರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಗಂಗಾವತಿಗೆ ಕಳಿಸಲಾಗಿದೆ.</p>.<p>ಮೃತಪಟ್ಟ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಸ್ಥಳೀಯರು ಘಟನೆ ನಡೆದ ಸ್ಥಳದಲ್ಲಿ ಗಾಯಾಳುಗಳನ್ನು ಹಾರೈಕೆ ಮಾಡಿದರು.</p>.<p>ಡಿವೈಎಸ್ಪಿ ರುದ್ರೇಶ ಉಜ್ಜಿನಕೊಪ್ಪ, ಪಿಐ ಪರಸಪ್ಪ ಭಜಂತ್ರಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>