<p><strong>ಕನಕಗಿರಿ</strong>: ಇಂದಿನ ಯುವಜನತೆ ಸಾಮಾಜಿಕ ಮಾಧ್ಯಮದ ಪ್ರಭಾವಕ್ಕೆ ಒಳಗಾಗಿ ದುಶ್ಚಟಗಳಿಗೆ ಬಲಿಯಾಗಬಾರದು ಎಂದು ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ.ಶಶಿಧರ ತಿಳಿಸಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಕೊಪ್ಪಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಸಮುದಾಯ ಆರೋಗ್ಯ ಕೇಂದ್ರ ಮತ್ತು ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ಯುವ ದಿನಾಚರಣೆ ಹಾಗೂ ಎಚ್.ಐ.ವಿ, ಏಡ್ಸ್ ಜಾಗೃತಿ ಅರಿವಿನ ಮಾಸಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಯುವ ಸಮುದಾಯ ಬಾಲ್ಯದಿಂದಲೇ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಂಡು ಸಮಾಜದಲ್ಲಿ ಜಾಗೃತರಾಗಿ ವರ್ತಿಸಬೇಕು. ಏಡ್ಸ್ನಂತಹ ಕಾಯಿಲೆಗಳಿಗೆ ಒಳಗಾಗದೆ ಉತ್ತಮ ಆರೋಗ್ಯ ಕಾಪಾಡಿಕೊಂಡು ದೇಶ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ತಿಳಿಸಿದರು. </p>.<p>ಆಗಸ್ಟ್ನಿಂದ ಸೆಪ್ಟೆಂಬರ್ವರೆಗೆ ಜಿಲ್ಲೆಯಲ್ಲಿ ಗ್ರಾಮ ಸಭೆ, ಭಿತ್ತಿ ಚಿತ್ರ ಸ್ಪರ್ಧೆ, ಬೈಕ್ ಜಾಥಾ, ರಸಪ್ರಶ್ನೆ ಕಾರ್ಯಕ್ರಮ, ಜಾನಪದ ಕಲಾ ತಂಡಗಳಿಂದ ಬೀದಿ ನಾಟಕ ಇತರೆ ಮಾಧ್ಯಮಗಳ ಮೂಲಕ ಜಿಲ್ಲೆಯಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.</p>.<p>ಯುವ ಸಬಲೀಕರಣ ಕ್ರೀಡಾ ಇಲಾಖೆಯ ತಾಲ್ಲೂಕು ಅಧಿಕಾರಿ ತಿಪ್ಪಣ್ಣ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಕ್ಷ್ಮಣ ಕಟ್ಟಿಮನಿ, ಪ್ರಭಾರ ಪ್ರಾಂಶುಪಾಲ ಅಮರೇಶ ದೇವರಾಳ ಮಾತನಾಡಿದರು.<br> ಜಿಲ್ಲಾಮಟ್ಟದ ಭಿತ್ತಿಚಿತ್ರ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಅಕ್ಷತಾ ನಾಗದೇವಿ.ಎ, ದ್ವಿತೀಯ ಸ್ಥಾನ ಅಂಜಲಿ, ತೃತೀಯ ಸ್ಥಾನ ಪಡೆದ ವೈಭವಿ ಅವರಿಗೆ ಇದೇ ಸಮಯದಲ್ಲಿ ಬಹುಮಾನ ವಿತರಿಸಲಾಯಿತು.</p>.<p>ಪಟ್ಟಣ ಪಂಚಾಯತಿ ಅಧ್ಯಕ್ಷೆ ಹುಸೇನಬೀ ಚಳ್ಳಮರದ, ಉಪಾಧ್ಯಕ್ಷ ಕಂಠೀರಂಗ ನಾಯಕ, ತಾ.ಪಂ. ಯೋಜನಾಧಿಕಾರಿ ಹುಲಗಪ್ಪ, ಉಪ ತಹಶೀಲ್ದಾರ್ ಅನಿತಾ ಇಂಡಿ, ಎನ್ಎಸ್ಎಸ್ ಅಧಿಕಾರಿ ಶಿವಪುತ್ರಪ್ಪ ಗಳಪೂಜೆ, ದಂತ ಆರೋಗ್ಯ ಅಧಿಕಾರಿ ಡಾ. ಬಿನಾದೇವಿ, ಜಿಲ್ಲಾ ಮೇಲ್ವಿಚಾರಕ ಮಾಲತೇಶ ಸಜ್ಜನ್ ಇತರರು ಇದ್ದರು.</p>.<p>ಉಪನ್ಯಾಸಕ ಹನುಮೇಶ ಲಾಯದುಣಸಿ ಸ್ವಾಗತಿಸಿದರು, ಅಮರೇಶ ಅಂಗಡಿ ಭಿತ್ತಚಿತ್ರ ಬಿಡುಗಡೆ ಕುರಿತು ವಿವರಿಸಿದರು. ಪರ್ವಿನ್ ಬೇಗಂ ನಿರೂಪಿಸಿದರು.<br> ಸಿದ್ರಾಮಪ್ಪ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಗಿರಿ</strong>: ಇಂದಿನ ಯುವಜನತೆ ಸಾಮಾಜಿಕ ಮಾಧ್ಯಮದ ಪ್ರಭಾವಕ್ಕೆ ಒಳಗಾಗಿ ದುಶ್ಚಟಗಳಿಗೆ ಬಲಿಯಾಗಬಾರದು ಎಂದು ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ.ಶಶಿಧರ ತಿಳಿಸಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಕೊಪ್ಪಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಸಮುದಾಯ ಆರೋಗ್ಯ ಕೇಂದ್ರ ಮತ್ತು ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ಯುವ ದಿನಾಚರಣೆ ಹಾಗೂ ಎಚ್.ಐ.ವಿ, ಏಡ್ಸ್ ಜಾಗೃತಿ ಅರಿವಿನ ಮಾಸಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಯುವ ಸಮುದಾಯ ಬಾಲ್ಯದಿಂದಲೇ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಂಡು ಸಮಾಜದಲ್ಲಿ ಜಾಗೃತರಾಗಿ ವರ್ತಿಸಬೇಕು. ಏಡ್ಸ್ನಂತಹ ಕಾಯಿಲೆಗಳಿಗೆ ಒಳಗಾಗದೆ ಉತ್ತಮ ಆರೋಗ್ಯ ಕಾಪಾಡಿಕೊಂಡು ದೇಶ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ತಿಳಿಸಿದರು. </p>.<p>ಆಗಸ್ಟ್ನಿಂದ ಸೆಪ್ಟೆಂಬರ್ವರೆಗೆ ಜಿಲ್ಲೆಯಲ್ಲಿ ಗ್ರಾಮ ಸಭೆ, ಭಿತ್ತಿ ಚಿತ್ರ ಸ್ಪರ್ಧೆ, ಬೈಕ್ ಜಾಥಾ, ರಸಪ್ರಶ್ನೆ ಕಾರ್ಯಕ್ರಮ, ಜಾನಪದ ಕಲಾ ತಂಡಗಳಿಂದ ಬೀದಿ ನಾಟಕ ಇತರೆ ಮಾಧ್ಯಮಗಳ ಮೂಲಕ ಜಿಲ್ಲೆಯಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.</p>.<p>ಯುವ ಸಬಲೀಕರಣ ಕ್ರೀಡಾ ಇಲಾಖೆಯ ತಾಲ್ಲೂಕು ಅಧಿಕಾರಿ ತಿಪ್ಪಣ್ಣ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಕ್ಷ್ಮಣ ಕಟ್ಟಿಮನಿ, ಪ್ರಭಾರ ಪ್ರಾಂಶುಪಾಲ ಅಮರೇಶ ದೇವರಾಳ ಮಾತನಾಡಿದರು.<br> ಜಿಲ್ಲಾಮಟ್ಟದ ಭಿತ್ತಿಚಿತ್ರ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಅಕ್ಷತಾ ನಾಗದೇವಿ.ಎ, ದ್ವಿತೀಯ ಸ್ಥಾನ ಅಂಜಲಿ, ತೃತೀಯ ಸ್ಥಾನ ಪಡೆದ ವೈಭವಿ ಅವರಿಗೆ ಇದೇ ಸಮಯದಲ್ಲಿ ಬಹುಮಾನ ವಿತರಿಸಲಾಯಿತು.</p>.<p>ಪಟ್ಟಣ ಪಂಚಾಯತಿ ಅಧ್ಯಕ್ಷೆ ಹುಸೇನಬೀ ಚಳ್ಳಮರದ, ಉಪಾಧ್ಯಕ್ಷ ಕಂಠೀರಂಗ ನಾಯಕ, ತಾ.ಪಂ. ಯೋಜನಾಧಿಕಾರಿ ಹುಲಗಪ್ಪ, ಉಪ ತಹಶೀಲ್ದಾರ್ ಅನಿತಾ ಇಂಡಿ, ಎನ್ಎಸ್ಎಸ್ ಅಧಿಕಾರಿ ಶಿವಪುತ್ರಪ್ಪ ಗಳಪೂಜೆ, ದಂತ ಆರೋಗ್ಯ ಅಧಿಕಾರಿ ಡಾ. ಬಿನಾದೇವಿ, ಜಿಲ್ಲಾ ಮೇಲ್ವಿಚಾರಕ ಮಾಲತೇಶ ಸಜ್ಜನ್ ಇತರರು ಇದ್ದರು.</p>.<p>ಉಪನ್ಯಾಸಕ ಹನುಮೇಶ ಲಾಯದುಣಸಿ ಸ್ವಾಗತಿಸಿದರು, ಅಮರೇಶ ಅಂಗಡಿ ಭಿತ್ತಚಿತ್ರ ಬಿಡುಗಡೆ ಕುರಿತು ವಿವರಿಸಿದರು. ಪರ್ವಿನ್ ಬೇಗಂ ನಿರೂಪಿಸಿದರು.<br> ಸಿದ್ರಾಮಪ್ಪ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>