<p><strong>ಯಲಬುರ್ಗಾ: ‘</strong>ಕಂದಾಯ ಅದಾಲತ್ ಮೂಲಕ ಸಾರ್ವಜನಿಕರು ಕಂದಾಯ ಇಲಾಖೆಗೆ ಸಂಬಂಧಿಸಿದ ವಿವಿಧ ಸೇವೆಗಳನ್ನು ತ್ವರಿತವಾಗಿ ಪಡೆದುಕೊಳ್ಳಬಹುದು’ ಎಂದು ತಹಶೀಲ್ದಾರ್ ಶ್ರೀಶೈಲ ತಳವಾರ ತಿಳಿಸಿದರು.</p>.<p>ತಾಲ್ಲೂಕಿನ ಮುಧೋಳ ಗ್ರಾಮದಲ್ಲಿ ಶನಿವಾರ ನಡೆದ ಹೋಬಳಿ ಮಟ್ಟದ ಕಂದಾಯ ಮತ್ತು ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಈ ಕಾರ್ಯಕ್ರಮದಿಂದ ಸಾರ್ವಜನಿಕರಿಗೆ ಅನಗತ್ಯವಾಗಿ ಕಚೇರಿಗೆ ಅಲೆಯುವುದು ತಪ್ಪುತ್ತದೆ. ಅಧಿಕಾರಿಗಳು, ಸಿಬ್ಬಂದಿ ಹಾಗೂ ಸೇವೆ ಪಡೆಯುವ ಸಾರ್ವಜನಿಕರು ಮುಖಾಮುಖಿಯಾಗಿ ಸಂಪರ್ಕ ಸಾಧಿಸಿ ಕೆಲಸ ಮಾಡಿಸಿಕೊಳ್ಳಲು ಅವಕಾಶವಿರುತ್ತದೆ. ಇದರ ಸದುಪಯೋಗಪಡಿಸಿಕೊಳ್ಳಬೇಕು’ ಎಂದರು.</p>.<p>ಉಪವಿಭಾಗಾಧಿಕಾರಿ ನಾರಾಯಣ ಕನಕರೆಡ್ಡಿ ಮಾತನಾಡಿ,‘ಕಂದಾಯ ಇಲಾಖೆಯ ಕಾರ್ಯ ಒತ್ತಡದಿಂದ ಸಕಾಲದಲ್ಲಿ ಜನರಿಗೆ ಸ್ಪಂದಿಸಲು ಸಾಧ್ಯವಾಗದ ಕಾರಣ ಅದಾಲತ್ ಮೂಲಕ ಅರ್ಜಿಗಳ ವಿಲೇವಾರಿ ಮಾಡಲಾಗುತ್ತಿದೆ’ ಎಂದು ಹೇಳಿದರು.</p>.<p>ಮೂಧೋಳ ಗ್ರಾಮ ಲೆಕ್ಕಾಧಿಕಾರಿ ಕುಮಾರ ಪರಸಾಪುರ, ಕಂದಾಯ ನಿರೀಕ್ಷಕ ಹುಸೇನ ಸಾಬ್, ಸರ್ವೆ ಮೇಲ್ವಿಚಾರಕ ಶ್ರೀನಿವಾಸ, ಗ್ರಾಮದ ಮುಖಂಡರಾದ ಅಪ್ಪಣ ಪಲ್ಲೇದ, ಹೇಮರೆಡ್ಡಿ ರಡ್ಡೆರ ಹಾಗೂ ಬಸಪ್ಪ ಹಕ್ಕಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಬುರ್ಗಾ: ‘</strong>ಕಂದಾಯ ಅದಾಲತ್ ಮೂಲಕ ಸಾರ್ವಜನಿಕರು ಕಂದಾಯ ಇಲಾಖೆಗೆ ಸಂಬಂಧಿಸಿದ ವಿವಿಧ ಸೇವೆಗಳನ್ನು ತ್ವರಿತವಾಗಿ ಪಡೆದುಕೊಳ್ಳಬಹುದು’ ಎಂದು ತಹಶೀಲ್ದಾರ್ ಶ್ರೀಶೈಲ ತಳವಾರ ತಿಳಿಸಿದರು.</p>.<p>ತಾಲ್ಲೂಕಿನ ಮುಧೋಳ ಗ್ರಾಮದಲ್ಲಿ ಶನಿವಾರ ನಡೆದ ಹೋಬಳಿ ಮಟ್ಟದ ಕಂದಾಯ ಮತ್ತು ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಈ ಕಾರ್ಯಕ್ರಮದಿಂದ ಸಾರ್ವಜನಿಕರಿಗೆ ಅನಗತ್ಯವಾಗಿ ಕಚೇರಿಗೆ ಅಲೆಯುವುದು ತಪ್ಪುತ್ತದೆ. ಅಧಿಕಾರಿಗಳು, ಸಿಬ್ಬಂದಿ ಹಾಗೂ ಸೇವೆ ಪಡೆಯುವ ಸಾರ್ವಜನಿಕರು ಮುಖಾಮುಖಿಯಾಗಿ ಸಂಪರ್ಕ ಸಾಧಿಸಿ ಕೆಲಸ ಮಾಡಿಸಿಕೊಳ್ಳಲು ಅವಕಾಶವಿರುತ್ತದೆ. ಇದರ ಸದುಪಯೋಗಪಡಿಸಿಕೊಳ್ಳಬೇಕು’ ಎಂದರು.</p>.<p>ಉಪವಿಭಾಗಾಧಿಕಾರಿ ನಾರಾಯಣ ಕನಕರೆಡ್ಡಿ ಮಾತನಾಡಿ,‘ಕಂದಾಯ ಇಲಾಖೆಯ ಕಾರ್ಯ ಒತ್ತಡದಿಂದ ಸಕಾಲದಲ್ಲಿ ಜನರಿಗೆ ಸ್ಪಂದಿಸಲು ಸಾಧ್ಯವಾಗದ ಕಾರಣ ಅದಾಲತ್ ಮೂಲಕ ಅರ್ಜಿಗಳ ವಿಲೇವಾರಿ ಮಾಡಲಾಗುತ್ತಿದೆ’ ಎಂದು ಹೇಳಿದರು.</p>.<p>ಮೂಧೋಳ ಗ್ರಾಮ ಲೆಕ್ಕಾಧಿಕಾರಿ ಕುಮಾರ ಪರಸಾಪುರ, ಕಂದಾಯ ನಿರೀಕ್ಷಕ ಹುಸೇನ ಸಾಬ್, ಸರ್ವೆ ಮೇಲ್ವಿಚಾರಕ ಶ್ರೀನಿವಾಸ, ಗ್ರಾಮದ ಮುಖಂಡರಾದ ಅಪ್ಪಣ ಪಲ್ಲೇದ, ಹೇಮರೆಡ್ಡಿ ರಡ್ಡೆರ ಹಾಗೂ ಬಸಪ್ಪ ಹಕ್ಕಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>