<p><strong>ಕಾರಟಗಿ:</strong> ಬಡವರು, ಕೂಲಿ ಕಾರ್ಮಿಕರು, ಕೃಷಿಕರು ಅಧಿಕ ಸಂಖ್ಯೆಯಲ್ಲಿ ವಾಸಿಸುತ್ತಿರುವ 23ನೇ ವಾರ್ಡ್ನ ದೇವಿಕ್ಯಾಂಪ್ನಲ್ಲಿ ಸಕಾಲಕ್ಕೆ ಆರೋಗ್ಯ ಸೇವೆ ದೊರಕಲು ‘ನಮ್ಮ ಕ್ಲಿನಿಕ್’ ಆರೋಗ್ಯ ಸೇವಾ ಕೇಂದ್ರ ಆರಂಭಿಸಬೇಕು ಎಂದು ವಾರ್ಡ್ನ ಸದಸ್ಯೆ ಜಿ. ಅರುಣಾದೇವಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಪುರಸಭೆ ಮುಖ್ಯಾಧಿಕಾರಿ ಸಾಬಣ್ಣ ಕಟ್ಟಿಕಾರ ಅವರಿಗೆ ಮನವಿ ಸಲ್ಲಿಸಿದರು.</p>.<p>ಜನಸಂಖ್ಯೆ ಹೆಚ್ಚಿರುವ ಪ್ರದೇಶದಲ್ಲಿ ಆರೋಗ್ಯ ಸೇವೆ ಒದಗಿಸಲು ಸರ್ಕಾರ ರಾಜ್ಯಾದ್ಯಂತ ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರಗಳನ್ನು ಆರಂಭಿಸಿದೆ. ಪಟ್ಟಣದ 14ನೇ ವಾರ್ಡ್ನ ರಾಮನಗರ ಮತ್ತು 12ನೇ ವಾರ್ಡ್ ರಾಜೀವಗಾಂಧಿ ನಗರದಲ್ಲೂ ಈಗಾಗಲೇ ಆರಂಭಿಸಿದ್ದು, 23ನೇ ವಾರ್ಡ್ನಲ್ಲಿಯೂ ನಮ್ಮ ಕ್ಲಿನಿಕ್ ಆರಂಭಿಸಲು ತುರ್ತು ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಪುರಸಭೆಯಿಂದ ಸಚಿವ ಶಿವರಾಜ ತಂಗಡಗಿ ಹಾಗೂ ಜಿಲ್ಲಾಡಳಿತಕ್ಕೆ ಪ್ರಸ್ತಾವನೆ ಸಲ್ಲಿಸಿ ದೇವಿಕ್ಯಾಂಪ್ನಲ್ಲೂ ನಮ್ಮ ಕ್ಲಿನಿಕ್ ಆರಂಭಿಸಬೇಕು ಎಂದು ಆಗ್ರಹಿಸಿದ್ದಾರೆ.</p>.<p>ಪಟ್ಟಣದಿಂದ ದೂರವಿರುವ ದೇವಿಕ್ಯಾಂಪ್ನ ಜನರು ತುರ್ತು ಆರೋಗ್ಯ ಸೇವೆಗೆ ಪಟ್ಟಣಕ್ಕೆ ಬರಬೇಕಿರುವುದನ್ನು ತಪ್ಪಿಸಲು ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರ ಆರಂಭಿಸಬೇಕು. ಇದರಿಂದ ಬಡವರಿಗೆ, ಕೂಲಿ ಕಾರ್ಮಿಕರಿಗೆ ತುಂಬಾ ಅನುಕೂಲವಾಗುವುದು ಎಂದು ಮನವಿಯಲ್ಲಿ ಕೋರಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-35-1707547409</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರಟಗಿ:</strong> ಬಡವರು, ಕೂಲಿ ಕಾರ್ಮಿಕರು, ಕೃಷಿಕರು ಅಧಿಕ ಸಂಖ್ಯೆಯಲ್ಲಿ ವಾಸಿಸುತ್ತಿರುವ 23ನೇ ವಾರ್ಡ್ನ ದೇವಿಕ್ಯಾಂಪ್ನಲ್ಲಿ ಸಕಾಲಕ್ಕೆ ಆರೋಗ್ಯ ಸೇವೆ ದೊರಕಲು ‘ನಮ್ಮ ಕ್ಲಿನಿಕ್’ ಆರೋಗ್ಯ ಸೇವಾ ಕೇಂದ್ರ ಆರಂಭಿಸಬೇಕು ಎಂದು ವಾರ್ಡ್ನ ಸದಸ್ಯೆ ಜಿ. ಅರುಣಾದೇವಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಪುರಸಭೆ ಮುಖ್ಯಾಧಿಕಾರಿ ಸಾಬಣ್ಣ ಕಟ್ಟಿಕಾರ ಅವರಿಗೆ ಮನವಿ ಸಲ್ಲಿಸಿದರು.</p>.<p>ಜನಸಂಖ್ಯೆ ಹೆಚ್ಚಿರುವ ಪ್ರದೇಶದಲ್ಲಿ ಆರೋಗ್ಯ ಸೇವೆ ಒದಗಿಸಲು ಸರ್ಕಾರ ರಾಜ್ಯಾದ್ಯಂತ ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರಗಳನ್ನು ಆರಂಭಿಸಿದೆ. ಪಟ್ಟಣದ 14ನೇ ವಾರ್ಡ್ನ ರಾಮನಗರ ಮತ್ತು 12ನೇ ವಾರ್ಡ್ ರಾಜೀವಗಾಂಧಿ ನಗರದಲ್ಲೂ ಈಗಾಗಲೇ ಆರಂಭಿಸಿದ್ದು, 23ನೇ ವಾರ್ಡ್ನಲ್ಲಿಯೂ ನಮ್ಮ ಕ್ಲಿನಿಕ್ ಆರಂಭಿಸಲು ತುರ್ತು ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಪುರಸಭೆಯಿಂದ ಸಚಿವ ಶಿವರಾಜ ತಂಗಡಗಿ ಹಾಗೂ ಜಿಲ್ಲಾಡಳಿತಕ್ಕೆ ಪ್ರಸ್ತಾವನೆ ಸಲ್ಲಿಸಿ ದೇವಿಕ್ಯಾಂಪ್ನಲ್ಲೂ ನಮ್ಮ ಕ್ಲಿನಿಕ್ ಆರಂಭಿಸಬೇಕು ಎಂದು ಆಗ್ರಹಿಸಿದ್ದಾರೆ.</p>.<p>ಪಟ್ಟಣದಿಂದ ದೂರವಿರುವ ದೇವಿಕ್ಯಾಂಪ್ನ ಜನರು ತುರ್ತು ಆರೋಗ್ಯ ಸೇವೆಗೆ ಪಟ್ಟಣಕ್ಕೆ ಬರಬೇಕಿರುವುದನ್ನು ತಪ್ಪಿಸಲು ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರ ಆರಂಭಿಸಬೇಕು. ಇದರಿಂದ ಬಡವರಿಗೆ, ಕೂಲಿ ಕಾರ್ಮಿಕರಿಗೆ ತುಂಬಾ ಅನುಕೂಲವಾಗುವುದು ಎಂದು ಮನವಿಯಲ್ಲಿ ಕೋರಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-35-1707547409</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>