<p><strong>ಕಾರಟಗಿ</strong>: ತಾಲ್ಲೂಕಿನ ಮರ್ಲಾನಹಳ್ಳಿ ಗ್ರಾಮದ ವೆಂಕಟೇಶ್ವರ ದೇವಸ್ಥಾನದಲ್ಲಿ ಶ್ರೀನಿವಾಸ ಸೇವಾ ಟ್ರಸ್ಟ್ ಆಶ್ರಯದಲ್ಲಿ 40ನೇ ವರ್ಷದ ಮೂರ್ತಿ ಪ್ರತಿಷ್ಠಾಪನೆ, ವಾರ್ಷಿಕೋತ್ಸವ ಹಾಗೂ ಶ್ರೀನಿವಾಸ ಕಲ್ಯಾಣ ಮಹೋತ್ಸವವು ಸಡಗರ, ಸಂಭ್ರಮದೊಂದಿಗೆ ವಿಜೃಂಭಣೆಯಿಂದ ಸೋಮವಾರ ನಡೆಯಿತು.</p>.<p>ಬೆಳಿಗ್ಗೆ ಸುಪ್ರಭಾತ ಸೇವೆ, ಅಭಿಷೇಕ ಹಾಗೂ ವಿಶೇಷ ಪೂಜೆ ಹಾಗೂ ವಿಶೇಷ ಅಲಂಕಾರ ಪೂಜೆಯೊಂದಿಗೆ ಶ್ರೀನಿವಾಸ ಕಲ್ಯಾಣ ಮಹೋತ್ಸವವನ್ನು ವೈದಿಕ ಸಂಪ್ರದಾಯದಂತೆ ಭಕ್ತಿ, ಭಾವದಿಂದ ನಡೆಸಲಾಯಿತು.</p>.<p>ಅರ್ಚಕ ಪ್ರಸಾದ ಮಾತನಾಡಿ, ‘ಎಂ.ಅಪ್ಪಾರಾವ ಶೆಟ್ಟಿ ಈ ಭಾಗದ ಜನರಿಗೆ ವೆಂಕಟೇಶ್ವರ ಸ್ವಾಮಿಯ ಭಕ್ತಿ, ದರ್ಶನ ಮತ್ತು ಆರಾಧನೆ ಸಲೀಸಾಗಿ ದೊರೆಯಲು 40 ವರ್ಷದ ಹಿಂದೆ ಆರಂಭಿಸಿದ ಧಾರ್ಮಿಕ ಕಾರ್ಯಕ್ರಮವನ್ನು ಅವರ ಕುಟುಂಬ ವರ್ಗದವರು ಮುನ್ನೆಡಿಸಿಕೊಂಡು ಹೊರಟಿರುವುದು ಮಹಾ ಮಹಾತ್ಕಾರ್ಯ’ ಎಂದು ಹೇಳಿದರು.</p>.<p>ಮಧ್ಯಾಹ್ನ ಆಗಮಿಸಿದ್ದ ಸಹಸ್ರಾರು ಭಕ್ತರಿಗೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ಹೋಮ-ಹವನ, ಭಜನೆ, ಕೋಲಾಟ ಸೇರಿದಂತೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.</p>.<p>ಗ್ರಾಮಸ್ಥರು, ವಿವಿಧೆಡೆಯ ಭಕ್ತರು ಹಾಗೂ ಎಂ.ಅಪ್ಪಾರಾವ ಕುಟುಂಬದವರು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಿದರು. ಭಕ್ತಿ, ಸಾಮಾಜಿಕ ಸೌಹಾರ್ದತೆಯ ಪ್ರತೀಕವಾಗಿ ಕಲ್ಯಾಣ ಮಹೋತ್ಸವ ನಡೆಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-35-997712849</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರಟಗಿ</strong>: ತಾಲ್ಲೂಕಿನ ಮರ್ಲಾನಹಳ್ಳಿ ಗ್ರಾಮದ ವೆಂಕಟೇಶ್ವರ ದೇವಸ್ಥಾನದಲ್ಲಿ ಶ್ರೀನಿವಾಸ ಸೇವಾ ಟ್ರಸ್ಟ್ ಆಶ್ರಯದಲ್ಲಿ 40ನೇ ವರ್ಷದ ಮೂರ್ತಿ ಪ್ರತಿಷ್ಠಾಪನೆ, ವಾರ್ಷಿಕೋತ್ಸವ ಹಾಗೂ ಶ್ರೀನಿವಾಸ ಕಲ್ಯಾಣ ಮಹೋತ್ಸವವು ಸಡಗರ, ಸಂಭ್ರಮದೊಂದಿಗೆ ವಿಜೃಂಭಣೆಯಿಂದ ಸೋಮವಾರ ನಡೆಯಿತು.</p>.<p>ಬೆಳಿಗ್ಗೆ ಸುಪ್ರಭಾತ ಸೇವೆ, ಅಭಿಷೇಕ ಹಾಗೂ ವಿಶೇಷ ಪೂಜೆ ಹಾಗೂ ವಿಶೇಷ ಅಲಂಕಾರ ಪೂಜೆಯೊಂದಿಗೆ ಶ್ರೀನಿವಾಸ ಕಲ್ಯಾಣ ಮಹೋತ್ಸವವನ್ನು ವೈದಿಕ ಸಂಪ್ರದಾಯದಂತೆ ಭಕ್ತಿ, ಭಾವದಿಂದ ನಡೆಸಲಾಯಿತು.</p>.<p>ಅರ್ಚಕ ಪ್ರಸಾದ ಮಾತನಾಡಿ, ‘ಎಂ.ಅಪ್ಪಾರಾವ ಶೆಟ್ಟಿ ಈ ಭಾಗದ ಜನರಿಗೆ ವೆಂಕಟೇಶ್ವರ ಸ್ವಾಮಿಯ ಭಕ್ತಿ, ದರ್ಶನ ಮತ್ತು ಆರಾಧನೆ ಸಲೀಸಾಗಿ ದೊರೆಯಲು 40 ವರ್ಷದ ಹಿಂದೆ ಆರಂಭಿಸಿದ ಧಾರ್ಮಿಕ ಕಾರ್ಯಕ್ರಮವನ್ನು ಅವರ ಕುಟುಂಬ ವರ್ಗದವರು ಮುನ್ನೆಡಿಸಿಕೊಂಡು ಹೊರಟಿರುವುದು ಮಹಾ ಮಹಾತ್ಕಾರ್ಯ’ ಎಂದು ಹೇಳಿದರು.</p>.<p>ಮಧ್ಯಾಹ್ನ ಆಗಮಿಸಿದ್ದ ಸಹಸ್ರಾರು ಭಕ್ತರಿಗೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ಹೋಮ-ಹವನ, ಭಜನೆ, ಕೋಲಾಟ ಸೇರಿದಂತೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.</p>.<p>ಗ್ರಾಮಸ್ಥರು, ವಿವಿಧೆಡೆಯ ಭಕ್ತರು ಹಾಗೂ ಎಂ.ಅಪ್ಪಾರಾವ ಕುಟುಂಬದವರು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಿದರು. ಭಕ್ತಿ, ಸಾಮಾಜಿಕ ಸೌಹಾರ್ದತೆಯ ಪ್ರತೀಕವಾಗಿ ಕಲ್ಯಾಣ ಮಹೋತ್ಸವ ನಡೆಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-35-997712849</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>