<p>ಕಾರಟಗಿ: ಪಟ್ಟಣದ ಸುಂಕಲಮ್ಮ ಬೈಲ್ ಹತ್ತಿರದ ಸಾರ್ವಜನಿಕ ರುದ್ರಭೂಮಿಯಲ್ಲಿ ಜಾನುವಾರು ಕಟ್ಟಲು ಹಾಗೂ ಬಣವೆ ಹಾಕಲು ಸ್ಥಳ ಮೀಸಲಿಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕಾಧ್ಯಕ್ಷ ನಾರಾಯಣಪ್ಪ ಈಡಿಗೇರ ನೇತೃತ್ವದಲ್ಲಿ ತಹಶೀಲ್ದಾರ್ ಕಚೇರಿಗೆ ಸೋಮವಾರ ಮನವಿ ಸಲ್ಲಿಸಿದರು.</p>.<p>ರುದ್ರಭೂಮಿಯ 1 ರಿಂದ 4 ಸರ್ವೆ ನಂಬರ್ನ ಜಾಗದಲ್ಲಿ ಸುತ್ತಲಿನ 30ಕ್ಕೂ ಹೆಚ್ಚು ಕುಟುಂಬಗಳು ಕಳೆದ ಅನೇಕ ದಶಕಗಳಿಂದ ಬಣವೆ, ಜಾನುವಾರು ಕಟ್ಟುತ್ತಾ ಬಂದಿದ್ದು, ರುದ್ರಭೂಮಿ ಅಭಿವೃದ್ಧಿ ಹೆಸರಿನಲ್ಲಿ ರೈತರನ್ನು ಒಕ್ಕಲೆಬ್ಬಿಸದಿರಿ ಎಂದು ಆಗ್ರಹಿಸಿದ್ದಾರೆ.</p>.<p>ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕಾಧ್ಯಕ್ಷ ನಾರಾಯಣಪ್ಪ ಈಡಿಗೇರ ಮಾತನಾಡಿ, ‘ಪಟ್ಟಣದ ಎಲ್ಲಾ ಜನಾಂಗದವರು ಸೇರಿ ಸಾರ್ವಜನಿಕ ರುದ್ರಭೂಮಿ ಅಭಿವೃದ್ದಿಗೆ ಮುಂದಾಗಿರುವುದಕ್ಕೆ ವಿರೋಧವಿಲ್ಲ. ಆದರೆ ಬಡ ಜನರು ಈ ಜಾಗೆಯಲ್ಲಿ ಬಣವೆ ಇಟ್ಟಿದ್ದು, ರಾತ್ರಿಯಾದರೂ ಸರಿ ಹುಲ್ಲು ತರಬಹುದಾಗಿದೆ. ಜಾನುವಾರುಗಳು ಸುರಕ್ಷಿತವಾಗಿರುತ್ತವೆ. ರೈತರಿಗೆ ಅಗತ್ಯವಿರುವಷ್ಟು ಜಾಗೆ ಒಂದೆಡೆ ನೀಡಿ, ಉಳಿದ ಜಾಗೆಯನ್ನು ಸಾರ್ವಜನಿಕ ರುದ್ರಭೂಮಿಗೆ ಬಳಸಬೇಕು’ ಎಂದರು.</p>.<p>ಗ್ರೇಡ್- 2 ತಹಶೀಲ್ದಾರ್ ಷಣ್ಮುಖಪ್ಪ ಮನವಿ ಸ್ವೀಕರಿಸಿ, ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-35-1160423153</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾರಟಗಿ: ಪಟ್ಟಣದ ಸುಂಕಲಮ್ಮ ಬೈಲ್ ಹತ್ತಿರದ ಸಾರ್ವಜನಿಕ ರುದ್ರಭೂಮಿಯಲ್ಲಿ ಜಾನುವಾರು ಕಟ್ಟಲು ಹಾಗೂ ಬಣವೆ ಹಾಕಲು ಸ್ಥಳ ಮೀಸಲಿಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕಾಧ್ಯಕ್ಷ ನಾರಾಯಣಪ್ಪ ಈಡಿಗೇರ ನೇತೃತ್ವದಲ್ಲಿ ತಹಶೀಲ್ದಾರ್ ಕಚೇರಿಗೆ ಸೋಮವಾರ ಮನವಿ ಸಲ್ಲಿಸಿದರು.</p>.<p>ರುದ್ರಭೂಮಿಯ 1 ರಿಂದ 4 ಸರ್ವೆ ನಂಬರ್ನ ಜಾಗದಲ್ಲಿ ಸುತ್ತಲಿನ 30ಕ್ಕೂ ಹೆಚ್ಚು ಕುಟುಂಬಗಳು ಕಳೆದ ಅನೇಕ ದಶಕಗಳಿಂದ ಬಣವೆ, ಜಾನುವಾರು ಕಟ್ಟುತ್ತಾ ಬಂದಿದ್ದು, ರುದ್ರಭೂಮಿ ಅಭಿವೃದ್ಧಿ ಹೆಸರಿನಲ್ಲಿ ರೈತರನ್ನು ಒಕ್ಕಲೆಬ್ಬಿಸದಿರಿ ಎಂದು ಆಗ್ರಹಿಸಿದ್ದಾರೆ.</p>.<p>ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕಾಧ್ಯಕ್ಷ ನಾರಾಯಣಪ್ಪ ಈಡಿಗೇರ ಮಾತನಾಡಿ, ‘ಪಟ್ಟಣದ ಎಲ್ಲಾ ಜನಾಂಗದವರು ಸೇರಿ ಸಾರ್ವಜನಿಕ ರುದ್ರಭೂಮಿ ಅಭಿವೃದ್ದಿಗೆ ಮುಂದಾಗಿರುವುದಕ್ಕೆ ವಿರೋಧವಿಲ್ಲ. ಆದರೆ ಬಡ ಜನರು ಈ ಜಾಗೆಯಲ್ಲಿ ಬಣವೆ ಇಟ್ಟಿದ್ದು, ರಾತ್ರಿಯಾದರೂ ಸರಿ ಹುಲ್ಲು ತರಬಹುದಾಗಿದೆ. ಜಾನುವಾರುಗಳು ಸುರಕ್ಷಿತವಾಗಿರುತ್ತವೆ. ರೈತರಿಗೆ ಅಗತ್ಯವಿರುವಷ್ಟು ಜಾಗೆ ಒಂದೆಡೆ ನೀಡಿ, ಉಳಿದ ಜಾಗೆಯನ್ನು ಸಾರ್ವಜನಿಕ ರುದ್ರಭೂಮಿಗೆ ಬಳಸಬೇಕು’ ಎಂದರು.</p>.<p>ಗ್ರೇಡ್- 2 ತಹಶೀಲ್ದಾರ್ ಷಣ್ಮುಖಪ್ಪ ಮನವಿ ಸ್ವೀಕರಿಸಿ, ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-35-1160423153</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>