<p><strong>ಕಾರಟಗಿ</strong>: ‘ರೈತರು ಸಾಲ ಬಾಧೆಗೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳಬಾರದು. ರೈತರ ಸಮಸ್ಯೆಗೆ ಸರ್ಕಾರ ಸ್ಪಂದಿಸಲು ಸಿದ್ಧವಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.</p>.<p>ಜುಲೈ 30ರಂದು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಪಟ್ಟಣದ 2ನೇ ವಾರ್ಡ್ನ ಉಪ್ಪಾರ ಓಣಿಯ ರೈತ ಯಂಕಪ್ಪ ಉಪ್ಪಾರ ನಿವಾಸಕ್ಕೆ ಶನಿವಾರ ಭೇಟಿ ನೀಡಿ, ಮೃತ ರೈತನ ಪತ್ನಿ ದೇವಮ್ಮ ಉಪ್ಪಾರ ಕುಟುಂಬಕ್ಕೆ ಸಾಂತ್ವನ ಹೇಳಿ, ಮಾತನಾಡಿದರು.</p>.<p>‘ಘಟನೆಯ ವರದಿ ಶೀಘ್ರವೇ ಸಿದ್ಧಪಡಿಸಿ ಕುಟುಂಬಕ್ಕೆ ಪರಿಹಾರ ವಿತರಣೆ ಆಗುವಂತೆ ಕ್ರಮಕ್ಕೆ ಮುಂದಾಗಬೇಕು ಎಂದು ಸ್ಥಳದಲ್ಲಿದ್ದ ತಹಶೀಲ್ದಾರ್ ಎಂ. ಕುಮಾರಸ್ವಾಮಿಗೆ ಸೂಚಿಸಿದರು.</p>.<p>ರೈತರು ಧೈರ್ಯದಿಂದ ಬಂದ ಪರಿಸ್ಥಿತಿಯನ್ನು ಎದುರಿಸಬೇಕು ಎಂದು ಸಾಂತ್ವನ ಹೇಳಿದ ಸಚಿವ ತಂಗಡಗಿ ವೈಯಕ್ತಿಕ ಹಣಕಾಸು ನೆರವು ನೀಡಿದರು.</p>.<p>ಅನುಷ್ಠಾನಕ್ಕೆ ಬದ್ಧ: ಒಳಮೀಸಲಾತಿ ವರ್ಗೀಕರಣಕ್ಕೆ ಸುಪ್ರೀಂ ಕೋಟ್ನಿಂದ ಹಸಿರು ನಿಶಾನೆ ದೊರೆತಿದ್ದು, ಅನುಷ್ಠಾನಕ್ಕೆ ಸರ್ಕಾರ ಬದ್ಧ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯರೊಂದಿಗೆ ಚರ್ಚಿಸಿದ್ದೇವೆ. ಭೂಮಿ ಪೂಜೆ ನೆರವೇರಿಸಲಾಗಿರುವ ಇಂದಿರಾ ಕ್ಯಾಂಟಿನ್ ಸ್ಥಳ ಸರ್ಕಾರಿ ಜಾಗೆವೇ ಅಥವಾರ ಭೂಮಿ ಖಾಸಗಿಯವರದ್ದೇ ಎಂಬ ದೂರುಗಳನ್ನು ಪರಿಶೀಲಿಸಲಾಗುವುದು ಎಂದರು.</p>.<p>ಪ್ರಮುಖರಾದ ಕೆ. ಸಿದ್ದನಗೌಡ, ಶರಣಪ್ಪ ಪರಕಿ, ಅಯ್ಯಪ್ಪ ಉಪ್ಪಾರ, ಉದಯ ಈಡಿಗೇರ, ರೈತ ಮುಖಂಡ ನಾರಾಯಣ ಈಡಿಗೇರ, ಶ್ರೀನಿವಾಸ ಗೋಮರ್ಸಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರಟಗಿ</strong>: ‘ರೈತರು ಸಾಲ ಬಾಧೆಗೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳಬಾರದು. ರೈತರ ಸಮಸ್ಯೆಗೆ ಸರ್ಕಾರ ಸ್ಪಂದಿಸಲು ಸಿದ್ಧವಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.</p>.<p>ಜುಲೈ 30ರಂದು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಪಟ್ಟಣದ 2ನೇ ವಾರ್ಡ್ನ ಉಪ್ಪಾರ ಓಣಿಯ ರೈತ ಯಂಕಪ್ಪ ಉಪ್ಪಾರ ನಿವಾಸಕ್ಕೆ ಶನಿವಾರ ಭೇಟಿ ನೀಡಿ, ಮೃತ ರೈತನ ಪತ್ನಿ ದೇವಮ್ಮ ಉಪ್ಪಾರ ಕುಟುಂಬಕ್ಕೆ ಸಾಂತ್ವನ ಹೇಳಿ, ಮಾತನಾಡಿದರು.</p>.<p>‘ಘಟನೆಯ ವರದಿ ಶೀಘ್ರವೇ ಸಿದ್ಧಪಡಿಸಿ ಕುಟುಂಬಕ್ಕೆ ಪರಿಹಾರ ವಿತರಣೆ ಆಗುವಂತೆ ಕ್ರಮಕ್ಕೆ ಮುಂದಾಗಬೇಕು ಎಂದು ಸ್ಥಳದಲ್ಲಿದ್ದ ತಹಶೀಲ್ದಾರ್ ಎಂ. ಕುಮಾರಸ್ವಾಮಿಗೆ ಸೂಚಿಸಿದರು.</p>.<p>ರೈತರು ಧೈರ್ಯದಿಂದ ಬಂದ ಪರಿಸ್ಥಿತಿಯನ್ನು ಎದುರಿಸಬೇಕು ಎಂದು ಸಾಂತ್ವನ ಹೇಳಿದ ಸಚಿವ ತಂಗಡಗಿ ವೈಯಕ್ತಿಕ ಹಣಕಾಸು ನೆರವು ನೀಡಿದರು.</p>.<p>ಅನುಷ್ಠಾನಕ್ಕೆ ಬದ್ಧ: ಒಳಮೀಸಲಾತಿ ವರ್ಗೀಕರಣಕ್ಕೆ ಸುಪ್ರೀಂ ಕೋಟ್ನಿಂದ ಹಸಿರು ನಿಶಾನೆ ದೊರೆತಿದ್ದು, ಅನುಷ್ಠಾನಕ್ಕೆ ಸರ್ಕಾರ ಬದ್ಧ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯರೊಂದಿಗೆ ಚರ್ಚಿಸಿದ್ದೇವೆ. ಭೂಮಿ ಪೂಜೆ ನೆರವೇರಿಸಲಾಗಿರುವ ಇಂದಿರಾ ಕ್ಯಾಂಟಿನ್ ಸ್ಥಳ ಸರ್ಕಾರಿ ಜಾಗೆವೇ ಅಥವಾರ ಭೂಮಿ ಖಾಸಗಿಯವರದ್ದೇ ಎಂಬ ದೂರುಗಳನ್ನು ಪರಿಶೀಲಿಸಲಾಗುವುದು ಎಂದರು.</p>.<p>ಪ್ರಮುಖರಾದ ಕೆ. ಸಿದ್ದನಗೌಡ, ಶರಣಪ್ಪ ಪರಕಿ, ಅಯ್ಯಪ್ಪ ಉಪ್ಪಾರ, ಉದಯ ಈಡಿಗೇರ, ರೈತ ಮುಖಂಡ ನಾರಾಯಣ ಈಡಿಗೇರ, ಶ್ರೀನಿವಾಸ ಗೋಮರ್ಸಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>