<p>ಕಾರಟಗಿ: ‘ಗ್ರಾಮೀಣ ಭಾಗದಲ್ಲಿ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಆಡಳಿತದಲ್ಲಿ ಜನರು ಹೆಚ್ಚು ಭಾಗವಹಿಸಲಿ ಎನ್ನುವ ಉದ್ದೇಶದಿಂದ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಡಿ.ಮಂಜುನಾಥ ಹೇಳಿದರು.</p>.<p>ಪಟ್ಟಣದ ತಾ.ಪಂ ಕಚೇರಿಯಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಮಹಾತ್ಮ ಗಾಂಧೀಜಿಯವರ ದೂರದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಮತ್ತು ಸ್ಥಳೀಯ ಸ್ವಾಯತ್ತತೆಯನ್ನು ಸಮನ್ವಯಗೊಳಿಸುವ ದೃಷ್ಟಿ ಪಂಚಾಯತ್ ರಾಜ್ ವ್ಯವಸ್ಥೆಯದ್ದಾಗಿದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ 24ರಂದು ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಆಚರಿಸಲಾಗುತ್ತಿದೆ’ ಎಂದರು.</p>.<p>ತಾ.ಪಂ ಇಒ ಲಕ್ಷ್ಮಿ ದೇವಿ ಅವರು ಮಾತನಾಡಿ,‘ ಪಂಚಾಯತ್ ರಾಜ್ ಇಲಾಖೆಯಲ್ಲಿ ಸಾಕಷ್ಟು ಒಳ್ಳೆಯ ಸೌಲಭ್ಯಗಳಿಗೆ. ಅವುಗಳನ್ನು ಸಮರ್ಪಕ ಜನರಿಗೆ ಮುಟ್ಟಿಸುವಲ್ಲಿ ಎಲ್ಲರ ಪಾತ್ರ ಪ್ರಮುಖವಾಗಿದೆ’ ಎಂದರು.</p>.<p>ಕೇಕ್ ಕತ್ತರಿಸಿ ಸಿಹಿ ಹಂಚಿ ದಿನಾಚರಣೆ ಮಾಡಲಾಯಿತು.</p>.<p>ಗ್ರಾಮ ಪಂಚಾಯಿತಿ ಹಂತದಲ್ಲಿ ಕರ ವಸೂಲಿಯಲ್ಲಿ ತಾಲ್ಲೂಕಿನಲ್ಲಿ ಉತ್ತಮ ಸಾಧನೆ ಮಾಡಿದ ಪಿಡಿಒ, ಕರ ವಸೂಲಿಗಾರರು ಹಾಗೂ ಸಾರ್ವಜನಿಕ ಗ್ರಂಥಾಲಯದ ಸೇವೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿರುವ ಪಿಡಿಒ, ಗ್ರಂಥಪಾಲಕರನ್ನು ಸನ್ಮಾನಿಸಲಾಯಿತು.</p>.<p>ಸಹಾಯಕ ನಿರ್ದೇಶಕಿ ವೈ.ವನಜಾ, ಪಿಡಿಒಗಳಾದ ರಾಮು ನಾಯಕ, ಜ್ಯೋತಿ ರೆಡ್ಡಿ, ಸಾಯಿನಾಥ, ಸಲ್ಮಾಂ ಬೇಗಂ, ಪ್ರಕಾಶ ಹಿರೇಮಠ, ವೆಂಕಟೇಶ ನಾಯಕ, ಭಾಗೇಶ್ವರಿ, ಶರಣಮ್ಮ, ನರೇಗಾ ಹಾಗೂ ಕಚೇರಿಯ ಸಿಬ್ಬಂದಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-35-1179025320</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾರಟಗಿ: ‘ಗ್ರಾಮೀಣ ಭಾಗದಲ್ಲಿ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಆಡಳಿತದಲ್ಲಿ ಜನರು ಹೆಚ್ಚು ಭಾಗವಹಿಸಲಿ ಎನ್ನುವ ಉದ್ದೇಶದಿಂದ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಡಿ.ಮಂಜುನಾಥ ಹೇಳಿದರು.</p>.<p>ಪಟ್ಟಣದ ತಾ.ಪಂ ಕಚೇರಿಯಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಮಹಾತ್ಮ ಗಾಂಧೀಜಿಯವರ ದೂರದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಮತ್ತು ಸ್ಥಳೀಯ ಸ್ವಾಯತ್ತತೆಯನ್ನು ಸಮನ್ವಯಗೊಳಿಸುವ ದೃಷ್ಟಿ ಪಂಚಾಯತ್ ರಾಜ್ ವ್ಯವಸ್ಥೆಯದ್ದಾಗಿದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ 24ರಂದು ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಆಚರಿಸಲಾಗುತ್ತಿದೆ’ ಎಂದರು.</p>.<p>ತಾ.ಪಂ ಇಒ ಲಕ್ಷ್ಮಿ ದೇವಿ ಅವರು ಮಾತನಾಡಿ,‘ ಪಂಚಾಯತ್ ರಾಜ್ ಇಲಾಖೆಯಲ್ಲಿ ಸಾಕಷ್ಟು ಒಳ್ಳೆಯ ಸೌಲಭ್ಯಗಳಿಗೆ. ಅವುಗಳನ್ನು ಸಮರ್ಪಕ ಜನರಿಗೆ ಮುಟ್ಟಿಸುವಲ್ಲಿ ಎಲ್ಲರ ಪಾತ್ರ ಪ್ರಮುಖವಾಗಿದೆ’ ಎಂದರು.</p>.<p>ಕೇಕ್ ಕತ್ತರಿಸಿ ಸಿಹಿ ಹಂಚಿ ದಿನಾಚರಣೆ ಮಾಡಲಾಯಿತು.</p>.<p>ಗ್ರಾಮ ಪಂಚಾಯಿತಿ ಹಂತದಲ್ಲಿ ಕರ ವಸೂಲಿಯಲ್ಲಿ ತಾಲ್ಲೂಕಿನಲ್ಲಿ ಉತ್ತಮ ಸಾಧನೆ ಮಾಡಿದ ಪಿಡಿಒ, ಕರ ವಸೂಲಿಗಾರರು ಹಾಗೂ ಸಾರ್ವಜನಿಕ ಗ್ರಂಥಾಲಯದ ಸೇವೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿರುವ ಪಿಡಿಒ, ಗ್ರಂಥಪಾಲಕರನ್ನು ಸನ್ಮಾನಿಸಲಾಯಿತು.</p>.<p>ಸಹಾಯಕ ನಿರ್ದೇಶಕಿ ವೈ.ವನಜಾ, ಪಿಡಿಒಗಳಾದ ರಾಮು ನಾಯಕ, ಜ್ಯೋತಿ ರೆಡ್ಡಿ, ಸಾಯಿನಾಥ, ಸಲ್ಮಾಂ ಬೇಗಂ, ಪ್ರಕಾಶ ಹಿರೇಮಠ, ವೆಂಕಟೇಶ ನಾಯಕ, ಭಾಗೇಶ್ವರಿ, ಶರಣಮ್ಮ, ನರೇಗಾ ಹಾಗೂ ಕಚೇರಿಯ ಸಿಬ್ಬಂದಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-35-1179025320</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>