<p><strong>ಯಲಬುರ್ಗಾ (ಕೊಪ್ಪಳ ಜಿಲ್ಲೆ):</strong> ‘ಕೆಲಸ ಮಾಡಿದ ಶಾಸಕರಿಗೆ ಪಕ್ಷದಿಂದ ಟಿಕೆಟ್ ಸಿಕ್ಕೇ ಸಿಗುತ್ತದೆ. ಸಂಸದೀಯ ಮಂಡಳಿ ಈ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳುತ್ತದೆ’ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.</p>.<p>ಇಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಕೆಲಸ ಮಾಡಿದವರು, ಅಭಿವೃದ್ಧಿಗೆ ಆದ್ಯತೆ ಕೊಟ್ಟವರಿಗೆ ಟಿಕೆಟ್ ಸಿಗುತ್ತದೆ. ಈ ಬಗ್ಗೆ ವಿನಾಕಾರಣ ಗೊಂದಲ ಬೇಡ’ ಎಂದರು.</p>.<p>‘ಚುನಾವಣೆ ಘೋಷಣೆಗೆ ಪತ್ರಿಕಾಗೋಷ್ಠಿ ಕರೆದ ಕಾರಣ ಇಲ್ಲಿನ ಕಾರ್ಯಕ್ರಮದಲ್ಲಿ ಹೆಚ್ಚು ಮಾತನಾಡಲು ಸಾಧ್ಯವಾಗಲಿಲ್ಲ. ಹಾಲಪ್ಪ ಆಚಾರ್ ಆಶಯದಂತೆ ₹3000 ಕೋಟಿ ಅನುದಾನ ನೀಡಿ ಯಲಬುರ್ಗಾ ಕ್ಷೇತ್ರ ನೀರಾವರಿ ಮಾಡಲು ಆದ್ಯತೆ ಕೊಟ್ಟಿದ್ದೇನೆ. ಈ ನೀರು ಸದ್ಬಳಕೆ ಮಾಡಿಕೊಂಡರೆ ಇಲ್ಲಿನ ರೈತರು ಶ್ರೀಮಂತರಾಗುತ್ತಾರೆ’ ಎಂದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವ ಹಾಲಪ್ಪ ಆಚಾರ್ ‘ನೀರಾವರಿ ವಿಷಯದಲ್ಲಿ ಕ್ಷೇತ್ರದ ಜನರಿಗೆ ಕೊಟ್ಟ ಮಾತು ಉಳಿಸಿಕೊಂಡಿದ್ದೇನೆ’ ಎಂದರು.</p>.<p>’ಟಿಕೆಟ್ ಘೋಷಣೆ ಮಾಡದಿದ್ದರೆ ಎಲ್ಲಿ ಪಕ್ಷ ಬಿಟ್ಟು ಹೋಗುತ್ತಾರೊ ಎನ್ನುವ ಆತಂಕದಿಂದ ಕಾಂಗ್ರೆಸ್ ಈಗಾಗಲೇ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಆದರೆ, ನಮ್ಮ ಪಕ್ಷಕ್ಕೆ ಅಂಥ ಭಯವಿಲ್ಲ. ವರಿಷ್ಠರು ಚರ್ಚಿಸಿ ಅರ್ಹರಿಗೆ ಟಿಕೆಟ್ ನೀಡುತ್ತಾರೆ’ ಎಂದರು.</p>.<p>ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ಗೆ ಪೈಪೋಟಿ ಇದೆಯಲ್ಲ ಎನ್ನುವ ಪ್ರಶ್ನೆಗೆ ‘ಆಕಾಂಕ್ಷಿಗಳು ಎಲ್ಲ ಕಡೆ ಇದ್ದೇ ಇರುತ್ತಾರೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಆಸೆ, ಆಶಯ ಮತ್ತು ನಿರೀಕ್ಷೆ ಇದ್ದೇ ಇರುತ್ತದೆ. ಬಿಜೆಪಿಯಲ್ಲಿ ಎಲ್ಲರಿಗೂ ಅವಕಾಶ ಸಿಗುತ್ತದೆ. ಸಿಗುವ ತನಕ ಕಾಯಬೇಕು’ ಎಂದು ಪ್ರತಿಕ್ರಿಯಿಸಿದರು.</p>.<p><strong>ಓದಿ... <a href="https://www.prajavani.net/district/koppal/karnataka-assembly-election-2023-election-code-of-conduct-koppal-district-bjp-politics-1027327.html" target="_blank">ಯಲಬುರ್ಗಾ | ಕೆರೆಗೆ ನೀರು: 38 ನಿಮಿಷದಲ್ಲಿ ಪೂರ್ಣಗೊಂಡ ಉದ್ಘಾಟನಾ ಕಾರ್ಯಕ್ರಮ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಬುರ್ಗಾ (ಕೊಪ್ಪಳ ಜಿಲ್ಲೆ):</strong> ‘ಕೆಲಸ ಮಾಡಿದ ಶಾಸಕರಿಗೆ ಪಕ್ಷದಿಂದ ಟಿಕೆಟ್ ಸಿಕ್ಕೇ ಸಿಗುತ್ತದೆ. ಸಂಸದೀಯ ಮಂಡಳಿ ಈ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳುತ್ತದೆ’ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.</p>.<p>ಇಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಕೆಲಸ ಮಾಡಿದವರು, ಅಭಿವೃದ್ಧಿಗೆ ಆದ್ಯತೆ ಕೊಟ್ಟವರಿಗೆ ಟಿಕೆಟ್ ಸಿಗುತ್ತದೆ. ಈ ಬಗ್ಗೆ ವಿನಾಕಾರಣ ಗೊಂದಲ ಬೇಡ’ ಎಂದರು.</p>.<p>‘ಚುನಾವಣೆ ಘೋಷಣೆಗೆ ಪತ್ರಿಕಾಗೋಷ್ಠಿ ಕರೆದ ಕಾರಣ ಇಲ್ಲಿನ ಕಾರ್ಯಕ್ರಮದಲ್ಲಿ ಹೆಚ್ಚು ಮಾತನಾಡಲು ಸಾಧ್ಯವಾಗಲಿಲ್ಲ. ಹಾಲಪ್ಪ ಆಚಾರ್ ಆಶಯದಂತೆ ₹3000 ಕೋಟಿ ಅನುದಾನ ನೀಡಿ ಯಲಬುರ್ಗಾ ಕ್ಷೇತ್ರ ನೀರಾವರಿ ಮಾಡಲು ಆದ್ಯತೆ ಕೊಟ್ಟಿದ್ದೇನೆ. ಈ ನೀರು ಸದ್ಬಳಕೆ ಮಾಡಿಕೊಂಡರೆ ಇಲ್ಲಿನ ರೈತರು ಶ್ರೀಮಂತರಾಗುತ್ತಾರೆ’ ಎಂದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವ ಹಾಲಪ್ಪ ಆಚಾರ್ ‘ನೀರಾವರಿ ವಿಷಯದಲ್ಲಿ ಕ್ಷೇತ್ರದ ಜನರಿಗೆ ಕೊಟ್ಟ ಮಾತು ಉಳಿಸಿಕೊಂಡಿದ್ದೇನೆ’ ಎಂದರು.</p>.<p>’ಟಿಕೆಟ್ ಘೋಷಣೆ ಮಾಡದಿದ್ದರೆ ಎಲ್ಲಿ ಪಕ್ಷ ಬಿಟ್ಟು ಹೋಗುತ್ತಾರೊ ಎನ್ನುವ ಆತಂಕದಿಂದ ಕಾಂಗ್ರೆಸ್ ಈಗಾಗಲೇ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಆದರೆ, ನಮ್ಮ ಪಕ್ಷಕ್ಕೆ ಅಂಥ ಭಯವಿಲ್ಲ. ವರಿಷ್ಠರು ಚರ್ಚಿಸಿ ಅರ್ಹರಿಗೆ ಟಿಕೆಟ್ ನೀಡುತ್ತಾರೆ’ ಎಂದರು.</p>.<p>ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ಗೆ ಪೈಪೋಟಿ ಇದೆಯಲ್ಲ ಎನ್ನುವ ಪ್ರಶ್ನೆಗೆ ‘ಆಕಾಂಕ್ಷಿಗಳು ಎಲ್ಲ ಕಡೆ ಇದ್ದೇ ಇರುತ್ತಾರೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಆಸೆ, ಆಶಯ ಮತ್ತು ನಿರೀಕ್ಷೆ ಇದ್ದೇ ಇರುತ್ತದೆ. ಬಿಜೆಪಿಯಲ್ಲಿ ಎಲ್ಲರಿಗೂ ಅವಕಾಶ ಸಿಗುತ್ತದೆ. ಸಿಗುವ ತನಕ ಕಾಯಬೇಕು’ ಎಂದು ಪ್ರತಿಕ್ರಿಯಿಸಿದರು.</p>.<p><strong>ಓದಿ... <a href="https://www.prajavani.net/district/koppal/karnataka-assembly-election-2023-election-code-of-conduct-koppal-district-bjp-politics-1027327.html" target="_blank">ಯಲಬುರ್ಗಾ | ಕೆರೆಗೆ ನೀರು: 38 ನಿಮಿಷದಲ್ಲಿ ಪೂರ್ಣಗೊಂಡ ಉದ್ಘಾಟನಾ ಕಾರ್ಯಕ್ರಮ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>