ಎಲ್ಲ ಪಕ್ಷಗಳಿಗೆ ಅವರದ್ದೇ ಆದ ತತ್ವ ಹಾಗೂ ಸಿದ್ಧಾಂತಗಳಿವೆ. ಅದಕ್ಕೆ ತಕ್ಕಂತೆ ಮಾತನಾಡಬೇಕು. ಯಾರೇ ಆಗಲಿ ಕೊಲ್ಲುವ ಬಗ್ಗೆ ಮಾತಾಡಬಾರದು. ಅದನ್ನು ಒಪ್ಪುವುದಿಲ್ಲ. ಆಶ್ವತ್ಥ ನಾರಾಯಣ ಅವರು ಸಿದ್ದರಾಮಯ್ಯ ಅವರನ್ನು ಟಿಪ್ಪು ಕೊಂದಂತೆಯೇ ಕೊಲೆಮಾಡಬೇಕು ಎಂದು ನೀಡಿದ ಹೇಳಿಕೆ ಸರಿಯಲ್ಲ. ಇದು ನಮ್ಮಪಕ್ಷದ ಸಿದ್ದಾಂತ ಅಲ್ಲ. ಆಶ್ವತ್ಥನಾರಾಯಣ ಹೇಳಿಕೆ ತಪ್ಪು ಎಂದರು.