ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಜಿಲ್ಲೆಯ ಕುಷ್ಟಗಿ, ಯಲಬುರ್ಗಾ, ಕೊಪ್ಪಳ ಹಾಗೂ ಕನಕಗಿರಿ ಕ್ಷೇತ್ರಗಳ ಆಯ್ಕೆ ಬಗ್ಗೆ ಹೆಚ್ಚು ಹೊತ್ತು ಚರ್ಚೆ ನಡೆಯಲಿಲ್ಲ. ಗಂಗಾವತಿಯಿಂದ ಸ್ಪರ್ಧಿಸಲು ಟಿಕೆಟ್ ಕೊಡಬೇಕು ಎಂದು ಮಲ್ಲಿಕಾರ್ಜುನ ನಾಗಪ್ಪ, ಎಚ್.ಆರ್. ಶ್ರೀನಾಥ್ ಹಾಗೂ ಇಕ್ಬಾಲ್ ಅನ್ಸಾರಿ ಅರ್ಜಿ ಸಲ್ಲಿಸಿದ್ದಾರೆ. ಜನಾರ್ದನ ರೆಡ್ಡಿ ಹೊಸ ಪಕ್ಷದ ಮೂಲಕ ಗಂಗಾವತಿಯಿಂದಲೇ ಸ್ಪರ್ಧೆ ಮಾಡಲು ತೀರ್ಮಾನಿಸಿದ್ದಾರೆ. ಆದ್ದರಿಂದ ಅಭ್ಯರ್ಥಿ ಆಯ್ಕೆ ತಲೆನೋವಾಗಿದೆ.