<p><strong>ಕಾರಟಗಿ:</strong> ಪಟ್ಟಣದ ಹೃದಯ ಭಾಗದಲ್ಲಿಯ ಮುಖ್ಯರಸ್ತೆಗಳಲ್ಲಿಯ ಗುಂಡಿಗಳನ್ನು ಮುಚ್ಚಲಾಗದೆ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರನ್ನು ಗುಂಡಿಗಳ ಮೂಲಕ ಜೀವ ಹಿಂಡುತ್ತಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಮಂಜುನಾಥ ಮಸ್ಕಿ ಹೇಳಿದರು.</p>.<p>ರಾಜ್ಯದಲ್ಲಿನ ರಸ್ತೆಗಳ ಅವ್ಯವಸ್ಥೆಯನ್ನು ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಲ್ಲಿಯ ಬಿಜೆಪಿಯಿಂದ ಬುಧವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.</p><p><br>‘ರಾಜ್ಯ ಸರ್ಕಾರದ ಆಡಳಿತ ವೈಫಲ್ಯ, ಸರ್ಕಾರ ಜನರ ಹಿತರಕ್ಷಣೆ ಮರೆತಿದ್ದು, ಸರ್ಕಾರದ ಖಜಾನೆಯೇ ಖಾಲಿಯಾಗಿದೆ’ ಎಂದು ಟೀಕಿಸಿದರು. </p><p>ಬಿಜೆಪಿ ಜಿಲ್ಲಾ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮೌನೇಶ ದಢೇಸೂಗೂರು, ಬಿಜೆಪಿ ಎಸ್ಟಿ ಮೋರ್ಚಾ ಅಧ್ಯಕ್ಷ ದೇವರಾಜ ನಾಯಕ, ರೈತ ಮೋರ್ಚಾ ಅಧ್ಯಕ್ಷ ಶಿವಶರಣಪ್ಪ ಶಿವಪೂಜಿ, ಪ್ರಮುಖರಾದ ಅಮರೇಶಪ್ಪ ನಾಯಕ ಚಳ್ಳೂರು, ಹನುಮಂತಪ್ಪ ಹಗೇದಾಳ, ಧನಂಜಯ್ ಎಲಿಗಾರ್ ಸೇರಿ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರಟಗಿ:</strong> ಪಟ್ಟಣದ ಹೃದಯ ಭಾಗದಲ್ಲಿಯ ಮುಖ್ಯರಸ್ತೆಗಳಲ್ಲಿಯ ಗುಂಡಿಗಳನ್ನು ಮುಚ್ಚಲಾಗದೆ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರನ್ನು ಗುಂಡಿಗಳ ಮೂಲಕ ಜೀವ ಹಿಂಡುತ್ತಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಮಂಜುನಾಥ ಮಸ್ಕಿ ಹೇಳಿದರು.</p>.<p>ರಾಜ್ಯದಲ್ಲಿನ ರಸ್ತೆಗಳ ಅವ್ಯವಸ್ಥೆಯನ್ನು ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಲ್ಲಿಯ ಬಿಜೆಪಿಯಿಂದ ಬುಧವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.</p><p><br>‘ರಾಜ್ಯ ಸರ್ಕಾರದ ಆಡಳಿತ ವೈಫಲ್ಯ, ಸರ್ಕಾರ ಜನರ ಹಿತರಕ್ಷಣೆ ಮರೆತಿದ್ದು, ಸರ್ಕಾರದ ಖಜಾನೆಯೇ ಖಾಲಿಯಾಗಿದೆ’ ಎಂದು ಟೀಕಿಸಿದರು. </p><p>ಬಿಜೆಪಿ ಜಿಲ್ಲಾ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮೌನೇಶ ದಢೇಸೂಗೂರು, ಬಿಜೆಪಿ ಎಸ್ಟಿ ಮೋರ್ಚಾ ಅಧ್ಯಕ್ಷ ದೇವರಾಜ ನಾಯಕ, ರೈತ ಮೋರ್ಚಾ ಅಧ್ಯಕ್ಷ ಶಿವಶರಣಪ್ಪ ಶಿವಪೂಜಿ, ಪ್ರಮುಖರಾದ ಅಮರೇಶಪ್ಪ ನಾಯಕ ಚಳ್ಳೂರು, ಹನುಮಂತಪ್ಪ ಹಗೇದಾಳ, ಧನಂಜಯ್ ಎಲಿಗಾರ್ ಸೇರಿ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>