ಗಂಗಾವತಿ (ಕೊಪ್ಪಳ): ಗಂಗಾವತಿ ನಗರದಲ್ಲಿ ರಾಯಚೂರು ರಸ್ತೆಗೆ ಹೊಂದಿಕೊಂಡಿರುವ ರೈಸ್ ಮಿಲ್ನಲ್ಲಿ ಆಕ್ರಮವಾಗಿ ದಾಸ್ತಾನು ಮಾಡಲಾಗಿದ್ದ 168 ಕ್ವಿಂಟಲ್ ಅಕ್ಕಿಯನ್ನು ಆಹಾರ ಇಲಾಖೆ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದಿದ್ದಾರೆ.
ಭತ್ತದನಾಡಿನಲ್ಲಿ ಆಕ್ರಮ ಪಡಿತರ ಅಕ್ಕಿ ಸಾಗಾಟ ಕುರಿತು ಪದೇ ಪದೇ ಆರೋಪ ಕೇಳಿ ಬರುತ್ತಿದ್ದ ಹಿನ್ನಲೆಯಲ್ಲಿ ವಿದ್ಯಾನಗರ ಸಮೀಪದ ರೈಸ್ ಮಿಲ್ ಮೇಲೆ ದಾಳಿ ನಡೆಸಲಾಗಿದೆ.
ಈ ದಾಳಿಯಲ್ಲಿ 50 ಕೆಜಿ ತೂಕದ ಅಕ್ಕಿಯ 337 ಚೀಲಗಳು ಲಭ್ಯವಾಗಿದ್ದು,ಇದರ ಮೌಲ್ಯ ಒಟ್ಟು ₹3.63ಲಕ್ಷ ಎಂದು ಅಂದಾಜಿಸಲಾಗಿದೆ. ಈ ದಾಳಿ ಆಹಾರ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ನೇತೃತ್ವದಲ್ಲಿ ನಡೆದಿದೆ.