<p><strong>ಹನುಮಸಾಗರ (ಕೊಪ್ಪಳ ಜಿಲ್ಲೆ):</strong> ’ವರ್ಷಪೂರ್ತಿ ಡ್ಯೂಟಿ ಮಾಡಬೇಕು, ಒಂದು ದಿನವೂ ರಜೆಯಿಲ್ಲ. ಈ ಕೆಲಸಕ್ಕಿಂತ ಎಗ್ ರೈಸ್ ಮಾಡಿ ಬದುಕೋದೆ ಬೆಟರ್’ ಎಂದು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಹನುಮಸಾಗರ ಪೊಲೀಸ್ ಠಾಣೆಯ ಕಾನ್ಸ್ಟೆಬಲ್ (PC) ವ್ಯಾಟ್ಸ್ ಆ್ಯಪ್ನಲ್ಲಿ ಸ್ಟೇಟಸ್ ಹಾಕಿಕೊಂಡಿರುವುವುದು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ. </p><p>ಪೊಲೀಸ್ ಸಿಬ್ಬಂದಿ ಬ್ರಹ್ಮಾನಂದ ಈ ಸಂದೇಶ ಬರೆದುಕೊಂಡಿದ್ದು ‘ವರ್ಷದ 365 ದಿನಗಳೂ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ರಜೆ ಹಾಗೂ ಹಬ್ಬ-ಹರಿದಿನಗಳಲ್ಲಿ ರಜೆಯ ಅವಕಾಶ ಕಡಿಮೆಯಾಗಿದೆ’ ಎಂದಿದ್ದಾರೆ. ’ಈ ವರ್ಷದಲ್ಲಿ 8,300 ಪೊಲೀಸರ ನೇಮಕಾತಿ ಎಂದು ಡಿಜಿ ಐಜಿಪಿ ಎಂಎಂ. ಸಲೀಂ ಅವರು ನೀಡಿದ್ದ ಹೇಳಿಕೆಯ ಪತ್ರಿಕಾ ವರದಿ ಜೊತೆ ಈ ಸಂದೇಶ ಹಂಚಿಕೊಂಡಿದ್ದಾರೆ. ಪೊಲೀಸ್ ಇಲಾಖೆಗೆ ಬರುವ ಮುಂಚೆ ನೂರು ಸಲ ವಿಚಾರ ಮಾಡಿ ಬನ್ನಿ. ಬೇರೆ ಇಲಾಖೆಗೆ ಹೋಗುವುದು ಉತ್ತಮ ಎಂದಿದ್ದಾರೆ. </p><p>ಇದರ ಬಗ್ಗೆ ಪ್ರತಿಕ್ರಿಯಿಸಿದ ಬ್ರಹ್ಮಾನಂದ ’ನನಗೆ ಎದುರಾಗುತ್ತಿರುವ ಒತ್ತಡದ ಬಗ್ಗೆ ಮಾತ್ರ ಹೇಳಿಕೊಂಡಿದ್ದೇನೆ ವಿನಃ ಇಲಾಖೆಗೆ ಕೆಟ್ಟ ಹೆಸರು ತರುವ ಉದ್ದೇಶವಿಲ್ಲ’ ಎಂದರು.</p><p>ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ಧಿ ‘ಸ್ಟೇಟಸ್ ಹಾಕಿಕೊಂಡಿದ್ದ ಸಿಬ್ಬಂದಿ ಜೊತೆ ಮಾತನಾಡಿದ್ದೇನೆ. ಶಿಸ್ತಿನ ಇಲಾಖೆಯಲ್ಲಿ ಈ ರೀತಿಯ ಸಂದೇಶ ಹಾಕಿಕೊಳ್ಳಲು ಅವಕಾಶವಿಲ್ಲ. ವರದಿ ನೀಡಲು ಪಿಎಸ್ಐಗೆ ಸೂಚಿಸಿದ್ದೇನೆ. ಸಿಬ್ಬಂದಿಗೆ ವೈಯಕ್ತಿಕ ಹಾಗೂ ವೃತ್ತಿ ಸಮಸ್ಯೆಗಳು ಇದ್ದರೆ ನಮ್ಮೊಂದಿಗೆ ಹಂಚಿಕೊಳ್ಳಲು ಮುಕ್ತ ಅವಕಾಶವಿದೆ. ಇಲಾಖೆಯಲ್ಲಿ ಸಮಾಲೋಚಕರು ಕೂಡ ಇದ್ದಾರೆ. ಅವರೊಂದಿಗೂ ಸಮಸ್ಯೆ ಹಂಚಿಕೊಳ್ಳಬಹುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನುಮಸಾಗರ (ಕೊಪ್ಪಳ ಜಿಲ್ಲೆ):</strong> ’ವರ್ಷಪೂರ್ತಿ ಡ್ಯೂಟಿ ಮಾಡಬೇಕು, ಒಂದು ದಿನವೂ ರಜೆಯಿಲ್ಲ. ಈ ಕೆಲಸಕ್ಕಿಂತ ಎಗ್ ರೈಸ್ ಮಾಡಿ ಬದುಕೋದೆ ಬೆಟರ್’ ಎಂದು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಹನುಮಸಾಗರ ಪೊಲೀಸ್ ಠಾಣೆಯ ಕಾನ್ಸ್ಟೆಬಲ್ (PC) ವ್ಯಾಟ್ಸ್ ಆ್ಯಪ್ನಲ್ಲಿ ಸ್ಟೇಟಸ್ ಹಾಕಿಕೊಂಡಿರುವುವುದು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ. </p><p>ಪೊಲೀಸ್ ಸಿಬ್ಬಂದಿ ಬ್ರಹ್ಮಾನಂದ ಈ ಸಂದೇಶ ಬರೆದುಕೊಂಡಿದ್ದು ‘ವರ್ಷದ 365 ದಿನಗಳೂ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ರಜೆ ಹಾಗೂ ಹಬ್ಬ-ಹರಿದಿನಗಳಲ್ಲಿ ರಜೆಯ ಅವಕಾಶ ಕಡಿಮೆಯಾಗಿದೆ’ ಎಂದಿದ್ದಾರೆ. ’ಈ ವರ್ಷದಲ್ಲಿ 8,300 ಪೊಲೀಸರ ನೇಮಕಾತಿ ಎಂದು ಡಿಜಿ ಐಜಿಪಿ ಎಂಎಂ. ಸಲೀಂ ಅವರು ನೀಡಿದ್ದ ಹೇಳಿಕೆಯ ಪತ್ರಿಕಾ ವರದಿ ಜೊತೆ ಈ ಸಂದೇಶ ಹಂಚಿಕೊಂಡಿದ್ದಾರೆ. ಪೊಲೀಸ್ ಇಲಾಖೆಗೆ ಬರುವ ಮುಂಚೆ ನೂರು ಸಲ ವಿಚಾರ ಮಾಡಿ ಬನ್ನಿ. ಬೇರೆ ಇಲಾಖೆಗೆ ಹೋಗುವುದು ಉತ್ತಮ ಎಂದಿದ್ದಾರೆ. </p><p>ಇದರ ಬಗ್ಗೆ ಪ್ರತಿಕ್ರಿಯಿಸಿದ ಬ್ರಹ್ಮಾನಂದ ’ನನಗೆ ಎದುರಾಗುತ್ತಿರುವ ಒತ್ತಡದ ಬಗ್ಗೆ ಮಾತ್ರ ಹೇಳಿಕೊಂಡಿದ್ದೇನೆ ವಿನಃ ಇಲಾಖೆಗೆ ಕೆಟ್ಟ ಹೆಸರು ತರುವ ಉದ್ದೇಶವಿಲ್ಲ’ ಎಂದರು.</p><p>ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ಧಿ ‘ಸ್ಟೇಟಸ್ ಹಾಕಿಕೊಂಡಿದ್ದ ಸಿಬ್ಬಂದಿ ಜೊತೆ ಮಾತನಾಡಿದ್ದೇನೆ. ಶಿಸ್ತಿನ ಇಲಾಖೆಯಲ್ಲಿ ಈ ರೀತಿಯ ಸಂದೇಶ ಹಾಕಿಕೊಳ್ಳಲು ಅವಕಾಶವಿಲ್ಲ. ವರದಿ ನೀಡಲು ಪಿಎಸ್ಐಗೆ ಸೂಚಿಸಿದ್ದೇನೆ. ಸಿಬ್ಬಂದಿಗೆ ವೈಯಕ್ತಿಕ ಹಾಗೂ ವೃತ್ತಿ ಸಮಸ್ಯೆಗಳು ಇದ್ದರೆ ನಮ್ಮೊಂದಿಗೆ ಹಂಚಿಕೊಳ್ಳಲು ಮುಕ್ತ ಅವಕಾಶವಿದೆ. ಇಲಾಖೆಯಲ್ಲಿ ಸಮಾಲೋಚಕರು ಕೂಡ ಇದ್ದಾರೆ. ಅವರೊಂದಿಗೂ ಸಮಸ್ಯೆ ಹಂಚಿಕೊಳ್ಳಬಹುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>