<p><strong>ಕೊಪ್ಪಳ:</strong> ನಗರದಲ್ಲಿ ಗುರುವಾರ ಸುರಿದ ಮಳೆಯಿಂದಾಗಿ ಕೆಲ ಭಾಗದಲ್ಲಿ ಮನೆಗಳಿಗೆ ನೀರು ನುಗ್ಗಿದರೆ, ಇಲ್ಲಿನ ಕಿನ್ನಾಳ ರಸ್ತೆಯ ಕಲ್ಯಾಣ ನಗರ, ಪ್ರಗತಿ ನಗರ ಮತ್ತಿತರ ಪ್ರದೇಶಗಳ ನಿವಾಸಿಗಳು ಪ್ರವಾಹ ಭೀತಿ ಎದುರಿಸುವಂತಾಗಿದೆ. ಮನೆಗಳಿಗೆ ನುಗ್ಗಿದ ನೀರನ್ನು ಜನ ಮೋಟಾರ್ ಬಳಸಿ ಹೊರ ಹಾಕಿದರು.</p>.<p>ಹಲವಾರು ವರ್ಷಗಳಿಂದ ಸುಮಾರು 40ಕ್ಕೂ ಹೆಚ್ಚು ಅಡಿ ಅಗಲದಲ್ಲಿ ಹರಿಯುತ್ತಿದ್ದ ಹಳ್ಳವನ್ನು ಅತಿಕ್ರಮಿಸಿ, ಕೇವಲ 8 ಅಡಿ ಅಗಲದ ಕಾಲುವೆಯನ್ನು ಮಾತ್ರ ಅವೈಜ್ಞಾನಿಕವಾಗಿ ನಿರ್ಮಿಸಲಾಗಿದೆ. ನಿಸರ್ಗ ಸಹಜವಾಗಿ ಹರಿಯುತ್ತಿದ್ದ ನೀರಿನ ಹರಿವಿಗೆ ಇದೀಗ ಮಾರ್ಗವಿಲ್ಲದಂತಾಗಿ, ನೀರು ರಸ್ತೆಗೆ ನುಗ್ಗಿದೆ. ರಸ್ತೆಯೇ ಹಳ್ಳವಾಗಿ ಪರಿಣಮಿಸಿದ್ದು, ಇದರಿಂದ ಜನ ಆತಂಕ ಎದುರಿಸುವಂತಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.</p>.<p>‘ಕಿನ್ನಾಳ ರಸ್ತೆಯ ಹಳ್ಳವನ್ನು ಅತಿಕ್ರಮಣ ಮಾಡಿ ಕೆಲವು ಖಾಸಗಿ ವ್ಯಕ್ತಿಗಳು ಕಟ್ಟಡಗಳನ್ನು ನಿರ್ಮಿಸಿಕೊಂಡಿರುವ ಪರಿಣಾಮ ಈ ಸಮಸ್ಯೆಯಾಗಿದೆ. ಜಿಲ್ಲಾಡಳಿತ, ನಗರಸಭೆ, ಭಾಗ್ಯನಗರ ಪಟ್ಟಣ ಪಂಚಾಯಿತಿ ಮತ್ತು ಲೋಕೋಪಯೋಗಿ ಇಲಾಖೆ ಗಂಭೀರ ಸಮಸ್ಯೆಯ ಬಗ್ಗೆ ಕಣ್ಣು ತೆರೆದು ನೋಡಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.</p>.<p>ಸುಮಾರು ಎರಡೂವರೆ ತಾಸು ಸುರಿದ ಮಳೆಗೆ ನಗರದ ಪ್ರಮುಖ ರಸ್ತೆಗಳು ಕೆರೆಗಳಂತೆ ಆಗಿದ್ದವು. ನೀರು ಸರಾಗವಾಗಿ ಹರಿದು ಹೋಗಲು ಅವಕಾಶವಿಲ್ಲದೆ ವಾಹನ ಸವಾರರು ಪರದಾಡುವಂತಾಯಿತು.</p>.<p><strong>ಜಲಾವೃತ (ಮುನಿರಾಬಾದ್ ವರದಿ):</strong> ವ್ಯಾಪಕ ಮಳೆಯಾಗಿದ್ದು ಮುನಿರಾಬಾದ್ ಸಮೀಪ ಬೇವಿನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣ ಜಲಾವೃತವಾಗಿದೆ. ಬಿಸಿಯೂಟ ತಯಾರಿಸುವ ಅಡುಗೆಕೋಣೆ ನೀರಿನಿಂದ ತುಂಬಿ ಹೋಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ನಗರದಲ್ಲಿ ಗುರುವಾರ ಸುರಿದ ಮಳೆಯಿಂದಾಗಿ ಕೆಲ ಭಾಗದಲ್ಲಿ ಮನೆಗಳಿಗೆ ನೀರು ನುಗ್ಗಿದರೆ, ಇಲ್ಲಿನ ಕಿನ್ನಾಳ ರಸ್ತೆಯ ಕಲ್ಯಾಣ ನಗರ, ಪ್ರಗತಿ ನಗರ ಮತ್ತಿತರ ಪ್ರದೇಶಗಳ ನಿವಾಸಿಗಳು ಪ್ರವಾಹ ಭೀತಿ ಎದುರಿಸುವಂತಾಗಿದೆ. ಮನೆಗಳಿಗೆ ನುಗ್ಗಿದ ನೀರನ್ನು ಜನ ಮೋಟಾರ್ ಬಳಸಿ ಹೊರ ಹಾಕಿದರು.</p>.<p>ಹಲವಾರು ವರ್ಷಗಳಿಂದ ಸುಮಾರು 40ಕ್ಕೂ ಹೆಚ್ಚು ಅಡಿ ಅಗಲದಲ್ಲಿ ಹರಿಯುತ್ತಿದ್ದ ಹಳ್ಳವನ್ನು ಅತಿಕ್ರಮಿಸಿ, ಕೇವಲ 8 ಅಡಿ ಅಗಲದ ಕಾಲುವೆಯನ್ನು ಮಾತ್ರ ಅವೈಜ್ಞಾನಿಕವಾಗಿ ನಿರ್ಮಿಸಲಾಗಿದೆ. ನಿಸರ್ಗ ಸಹಜವಾಗಿ ಹರಿಯುತ್ತಿದ್ದ ನೀರಿನ ಹರಿವಿಗೆ ಇದೀಗ ಮಾರ್ಗವಿಲ್ಲದಂತಾಗಿ, ನೀರು ರಸ್ತೆಗೆ ನುಗ್ಗಿದೆ. ರಸ್ತೆಯೇ ಹಳ್ಳವಾಗಿ ಪರಿಣಮಿಸಿದ್ದು, ಇದರಿಂದ ಜನ ಆತಂಕ ಎದುರಿಸುವಂತಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.</p>.<p>‘ಕಿನ್ನಾಳ ರಸ್ತೆಯ ಹಳ್ಳವನ್ನು ಅತಿಕ್ರಮಣ ಮಾಡಿ ಕೆಲವು ಖಾಸಗಿ ವ್ಯಕ್ತಿಗಳು ಕಟ್ಟಡಗಳನ್ನು ನಿರ್ಮಿಸಿಕೊಂಡಿರುವ ಪರಿಣಾಮ ಈ ಸಮಸ್ಯೆಯಾಗಿದೆ. ಜಿಲ್ಲಾಡಳಿತ, ನಗರಸಭೆ, ಭಾಗ್ಯನಗರ ಪಟ್ಟಣ ಪಂಚಾಯಿತಿ ಮತ್ತು ಲೋಕೋಪಯೋಗಿ ಇಲಾಖೆ ಗಂಭೀರ ಸಮಸ್ಯೆಯ ಬಗ್ಗೆ ಕಣ್ಣು ತೆರೆದು ನೋಡಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.</p>.<p>ಸುಮಾರು ಎರಡೂವರೆ ತಾಸು ಸುರಿದ ಮಳೆಗೆ ನಗರದ ಪ್ರಮುಖ ರಸ್ತೆಗಳು ಕೆರೆಗಳಂತೆ ಆಗಿದ್ದವು. ನೀರು ಸರಾಗವಾಗಿ ಹರಿದು ಹೋಗಲು ಅವಕಾಶವಿಲ್ಲದೆ ವಾಹನ ಸವಾರರು ಪರದಾಡುವಂತಾಯಿತು.</p>.<p><strong>ಜಲಾವೃತ (ಮುನಿರಾಬಾದ್ ವರದಿ):</strong> ವ್ಯಾಪಕ ಮಳೆಯಾಗಿದ್ದು ಮುನಿರಾಬಾದ್ ಸಮೀಪ ಬೇವಿನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣ ಜಲಾವೃತವಾಗಿದೆ. ಬಿಸಿಯೂಟ ತಯಾರಿಸುವ ಅಡುಗೆಕೋಣೆ ನೀರಿನಿಂದ ತುಂಬಿ ಹೋಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>