<p><strong>ಕಾರಟಗಿ (ಕೊಪ್ಪಳ ಜಿಲ್ಲೆ):</strong> ‘ರಾಜ್ಯದಲ್ಲಿ ಜನರ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷಾ ವರದಿಯ ಅಧ್ಯಯನವನ್ನು ಕಾಂತರಾಜ್ ನೇತೃತ್ವದ ಹಿಂದುಳಿದ ವರ್ಗದ ಆಯೋಗ ಮಾಡಿದೆ. ಇದು ಜಾತಿ ಗಣತಿಯಲ್ಲ’ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು.</p><p>ಪಟ್ಟಣದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿ ‘ಜಾತಿ ಗಣತಿಯನ್ನು ನಾವು ಮಾಡಲು ಬರುವುದಿಲ್ಲ. ರಾಜ್ಯದ 6 ಕೋಟಿ ಜನರ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿ ಅರಿಯಲು ವರದಿ ಸಿದ್ಧವಾಗಿದೆ. ರಾಜ್ಯದ 5 ಕೋಟಿ ಜನರನ್ನು ಸಮಿತಿ ಸದಸ್ಯರು ಭೇಟಿಯಾಗಿ ವರದಿ ತಯಾರಿಸಿದ್ದಾರೆ. ಇದಕ್ಕಾಗಿ 1.22 ಲಕ್ಷ ಶಿಕ್ಷಕರು ಕೆಲಸ ಮಾಡಿದ್ದಾರೆ. ಕುರುಬ ಜನಾಂಗದಲ್ಲಷ್ಟೇ ಶಿಕ್ಷಕರು ಇಲ್ಲ. ಒಟ್ಟು 56 ಮಾನದಂಡಗಳನ್ನು ಅನುಸರಿಸಿ ವರದಿ ಸಿದ್ದಪಡಿಸಲಾಗಿದೆ’ ಎಂದು ತಿಳಿಸಿದರು.</p><p>‘ಜಾತಿ ನೋಡದೇ ಬಡ ಕುಟುಂಬಗಳಿಗೆ ಸರ್ಕಾರ ಏನೆಲ್ಲಾ ಕಲ್ಪಿಸಬಹುದು ಎಂಬ ಪರಿಕಲ್ಪನೆ ಬರಲಿದೆ. ಇಂಥ ಸಮೀಕ್ಷೆಯನ್ನು ಹಿಂದೆ ಯಡಿಯೂರಪ್ಪ, ಜಗದೀಶ ಶೆಟ್ಟರ್, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಮಾಡಿಸಲು ಸಾಧ್ಯವಾಗಿರಲಿಲ್ಲ. ಜೆಡಿಎಸ್ನವರಿಗೆ ಬಡವರು ಉದ್ದಾರವಾಗುವುದು ಬೇಕಿಲ್ಲ’ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರಟಗಿ (ಕೊಪ್ಪಳ ಜಿಲ್ಲೆ):</strong> ‘ರಾಜ್ಯದಲ್ಲಿ ಜನರ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷಾ ವರದಿಯ ಅಧ್ಯಯನವನ್ನು ಕಾಂತರಾಜ್ ನೇತೃತ್ವದ ಹಿಂದುಳಿದ ವರ್ಗದ ಆಯೋಗ ಮಾಡಿದೆ. ಇದು ಜಾತಿ ಗಣತಿಯಲ್ಲ’ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು.</p><p>ಪಟ್ಟಣದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿ ‘ಜಾತಿ ಗಣತಿಯನ್ನು ನಾವು ಮಾಡಲು ಬರುವುದಿಲ್ಲ. ರಾಜ್ಯದ 6 ಕೋಟಿ ಜನರ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿ ಅರಿಯಲು ವರದಿ ಸಿದ್ಧವಾಗಿದೆ. ರಾಜ್ಯದ 5 ಕೋಟಿ ಜನರನ್ನು ಸಮಿತಿ ಸದಸ್ಯರು ಭೇಟಿಯಾಗಿ ವರದಿ ತಯಾರಿಸಿದ್ದಾರೆ. ಇದಕ್ಕಾಗಿ 1.22 ಲಕ್ಷ ಶಿಕ್ಷಕರು ಕೆಲಸ ಮಾಡಿದ್ದಾರೆ. ಕುರುಬ ಜನಾಂಗದಲ್ಲಷ್ಟೇ ಶಿಕ್ಷಕರು ಇಲ್ಲ. ಒಟ್ಟು 56 ಮಾನದಂಡಗಳನ್ನು ಅನುಸರಿಸಿ ವರದಿ ಸಿದ್ದಪಡಿಸಲಾಗಿದೆ’ ಎಂದು ತಿಳಿಸಿದರು.</p><p>‘ಜಾತಿ ನೋಡದೇ ಬಡ ಕುಟುಂಬಗಳಿಗೆ ಸರ್ಕಾರ ಏನೆಲ್ಲಾ ಕಲ್ಪಿಸಬಹುದು ಎಂಬ ಪರಿಕಲ್ಪನೆ ಬರಲಿದೆ. ಇಂಥ ಸಮೀಕ್ಷೆಯನ್ನು ಹಿಂದೆ ಯಡಿಯೂರಪ್ಪ, ಜಗದೀಶ ಶೆಟ್ಟರ್, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಮಾಡಿಸಲು ಸಾಧ್ಯವಾಗಿರಲಿಲ್ಲ. ಜೆಡಿಎಸ್ನವರಿಗೆ ಬಡವರು ಉದ್ದಾರವಾಗುವುದು ಬೇಕಿಲ್ಲ’ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>