<p><strong>ಯಲಬುರ್ಗಾ</strong>: ‘ಕಾರ್ತಿಕೋತ್ಸವ ಪ್ರತಿಯೊಬ್ಬರ ಬಾಳಿನಲ್ಲಿ ಬೆಳಕು ತರಲಿ. ಕೊರಾನಾ ದೂರವಾಗಲಿ’ ಎಂದು ಗದಗಿನ ವಿರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜ ಹೇಳಿದರು.</p>.<p>ತಾಲ್ಲೂಕಿನ ಕಲ್ಲೂರು ಗ್ರಾಮದಲ್ಲಿ ನಡೆದ ಕಲ್ಲಿನಾಥೇಶ್ವರ ಕಾರ್ತಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಎಲ್ಲರೂ ನೆಮ್ಮದಿಯಿಂದ ಜೀವನ ನಡೆಸುವಂತಾಗಲಿ ಎಂದರು.</p>.<p>ಸಂಸ್ಥಾನ ಹಿರೇಮಠದ ಪೀಠಾಧಿಕಾರಿ ಸಿದ್ಧರಾಮೇಶ್ವರ ಸ್ವಾಮೀಜಿ ಮಾತನಾಡಿ,‘ಪ್ರತಿವರ್ಷ ಕಾರ್ತಿಕೋತ್ಸವವನ್ನು ವೈಭವದಿಂದ ಆಚರಿಸಲಾಗುತ್ತಿತ್ತು. ಈ ವರ್ಷ ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಗಿದೆ. ಭಕ್ತರಲ್ಲಿ ಹುಮ್ಮಸ್ಸು, ಶ್ರದ್ಧಾಭಕ್ತಿ ಕಡಿಮೆಯಾಗಿಲ್ಲ’ ಎಂದು ಹೇಳಿದರು.</p>.<p>ಪ್ರತಿಭಾವಂತರನ್ನು ಪ್ರೋತ್ಸಾಹಿಸುವುದು ಮಾದರಿ ಕಾರ್ಯ. ಇದೇ ಗ್ರಾಮದ ಉದ್ಯಮಿ ಸಮಾಜ ಸೇವಕ ಕಳಕನಗೌಡ ಪಾಟೀಲ ಜುಮ್ಲಾಪುರ ಅವರು ತಾಲ್ಲೂಕಿನಾದ್ಯಂತ ಪ್ರತಿಭಾವಂತರನ್ನು ಗುರುತಿಸಿ ಅವರಿಗೆ ಪ್ರೋತ್ಸಾಹಿಸುತ್ತಿರುವುದು ಉತ್ತಮ ಬೆಳವಣಿಗೆ. ಇವರ ಸೇವೆಯನ್ನು ನಾಡಿನ ಜನತೆ ಗುರುತಿಸಿ ಕೊಂಡಾಡುತ್ತಿದ್ದಾರೆ ಎಂದರು.</p>.<p>ಜಿಲ್ಲಾ ವೀರೇಶೈವ ಮಹಾಸಭಾದ ಅಧ್ಯಕ್ಷ ಕಳಕನಗೌಡ ಪಾಟೀಲ ಮಾತನಾಡಿ,‘ಬಡವನಾಗಿ ಹುಟ್ಟಿ ತೀರಾ ಕಷ್ಟಪಟ್ಟು ಮೇಲಕ್ಕೆ ಬಂದಿದ್ದೇನೆ. ಬಡತನದ ಅರಿವಿದೆ. ಬಡತನದಿಂದ ಓದುವ ಭಾಗ್ಯ ಸಿಗಲಿಲ್ಲ. ಅದಕ್ಕಾಗಿ ಹೆಚ್ಚಿನ ಅಂಕಗಳಿಸುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಮೂಲಕ ಶೈಕ್ಷಣಿಕ ಸುಧಾರಣೆಗೆ ಆಸಕ್ತಿ ತೋರಿಸುತ್ತಿದ್ದೇನೆ’ ಎಂದರು.</p>.<p>ಹಿರಿಯ ಪತ್ರಕರ್ತ ಕೋಟ್ರಪ್ಪ ತೋಟದ, ವೀರಯ್ಯ ಸಂಗನಾಳಮಠ, ರಸೂಲಸಾಬ ಹಿರೇಮನಿ, ಉಪನ್ಯಾಸಕ ಮಹಾಂತೇಶ ನೆಲಗಣ ಮಾತನಾಡಿದರು.</p>.<p>ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು.</p>.<p>ಕಲ್ಲೂರಿನ ಹಿರೇಮಠದ ವೀರಯ್ಯಜ್ಜನವರು ಸಾನಿಧ್ಯ ವಹಿಸಿದ್ದರು. ಬೆಂಗಳೂರಿನ ಕರ್ನಾಟಕ ಸ್ವಾಭಿಮಾನಿ ವೇದಿಕೆ ಕಾರ್ಯದರ್ಶಿ ಶಂಕರ ಹೂಗಾರ, ರುದ್ರಗೌಡ ಸೊಲಬಗೌಡ್ರು, ಮಂಜುನಾಥ ಕುರಿ ಹಾಗೂ ಸಂತೋಷ ಕಾಯಿಗಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಬುರ್ಗಾ</strong>: ‘ಕಾರ್ತಿಕೋತ್ಸವ ಪ್ರತಿಯೊಬ್ಬರ ಬಾಳಿನಲ್ಲಿ ಬೆಳಕು ತರಲಿ. ಕೊರಾನಾ ದೂರವಾಗಲಿ’ ಎಂದು ಗದಗಿನ ವಿರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜ ಹೇಳಿದರು.</p>.<p>ತಾಲ್ಲೂಕಿನ ಕಲ್ಲೂರು ಗ್ರಾಮದಲ್ಲಿ ನಡೆದ ಕಲ್ಲಿನಾಥೇಶ್ವರ ಕಾರ್ತಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಎಲ್ಲರೂ ನೆಮ್ಮದಿಯಿಂದ ಜೀವನ ನಡೆಸುವಂತಾಗಲಿ ಎಂದರು.</p>.<p>ಸಂಸ್ಥಾನ ಹಿರೇಮಠದ ಪೀಠಾಧಿಕಾರಿ ಸಿದ್ಧರಾಮೇಶ್ವರ ಸ್ವಾಮೀಜಿ ಮಾತನಾಡಿ,‘ಪ್ರತಿವರ್ಷ ಕಾರ್ತಿಕೋತ್ಸವವನ್ನು ವೈಭವದಿಂದ ಆಚರಿಸಲಾಗುತ್ತಿತ್ತು. ಈ ವರ್ಷ ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಗಿದೆ. ಭಕ್ತರಲ್ಲಿ ಹುಮ್ಮಸ್ಸು, ಶ್ರದ್ಧಾಭಕ್ತಿ ಕಡಿಮೆಯಾಗಿಲ್ಲ’ ಎಂದು ಹೇಳಿದರು.</p>.<p>ಪ್ರತಿಭಾವಂತರನ್ನು ಪ್ರೋತ್ಸಾಹಿಸುವುದು ಮಾದರಿ ಕಾರ್ಯ. ಇದೇ ಗ್ರಾಮದ ಉದ್ಯಮಿ ಸಮಾಜ ಸೇವಕ ಕಳಕನಗೌಡ ಪಾಟೀಲ ಜುಮ್ಲಾಪುರ ಅವರು ತಾಲ್ಲೂಕಿನಾದ್ಯಂತ ಪ್ರತಿಭಾವಂತರನ್ನು ಗುರುತಿಸಿ ಅವರಿಗೆ ಪ್ರೋತ್ಸಾಹಿಸುತ್ತಿರುವುದು ಉತ್ತಮ ಬೆಳವಣಿಗೆ. ಇವರ ಸೇವೆಯನ್ನು ನಾಡಿನ ಜನತೆ ಗುರುತಿಸಿ ಕೊಂಡಾಡುತ್ತಿದ್ದಾರೆ ಎಂದರು.</p>.<p>ಜಿಲ್ಲಾ ವೀರೇಶೈವ ಮಹಾಸಭಾದ ಅಧ್ಯಕ್ಷ ಕಳಕನಗೌಡ ಪಾಟೀಲ ಮಾತನಾಡಿ,‘ಬಡವನಾಗಿ ಹುಟ್ಟಿ ತೀರಾ ಕಷ್ಟಪಟ್ಟು ಮೇಲಕ್ಕೆ ಬಂದಿದ್ದೇನೆ. ಬಡತನದ ಅರಿವಿದೆ. ಬಡತನದಿಂದ ಓದುವ ಭಾಗ್ಯ ಸಿಗಲಿಲ್ಲ. ಅದಕ್ಕಾಗಿ ಹೆಚ್ಚಿನ ಅಂಕಗಳಿಸುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಮೂಲಕ ಶೈಕ್ಷಣಿಕ ಸುಧಾರಣೆಗೆ ಆಸಕ್ತಿ ತೋರಿಸುತ್ತಿದ್ದೇನೆ’ ಎಂದರು.</p>.<p>ಹಿರಿಯ ಪತ್ರಕರ್ತ ಕೋಟ್ರಪ್ಪ ತೋಟದ, ವೀರಯ್ಯ ಸಂಗನಾಳಮಠ, ರಸೂಲಸಾಬ ಹಿರೇಮನಿ, ಉಪನ್ಯಾಸಕ ಮಹಾಂತೇಶ ನೆಲಗಣ ಮಾತನಾಡಿದರು.</p>.<p>ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು.</p>.<p>ಕಲ್ಲೂರಿನ ಹಿರೇಮಠದ ವೀರಯ್ಯಜ್ಜನವರು ಸಾನಿಧ್ಯ ವಹಿಸಿದ್ದರು. ಬೆಂಗಳೂರಿನ ಕರ್ನಾಟಕ ಸ್ವಾಭಿಮಾನಿ ವೇದಿಕೆ ಕಾರ್ಯದರ್ಶಿ ಶಂಕರ ಹೂಗಾರ, ರುದ್ರಗೌಡ ಸೊಲಬಗೌಡ್ರು, ಮಂಜುನಾಥ ಕುರಿ ಹಾಗೂ ಸಂತೋಷ ಕಾಯಿಗಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>