<p><strong>ಗಂಗಾವತಿ: </strong>‘ಕನ್ನಡ ಸಾಹಿತ್ಯ ಪರಿಷತ್ತಿನ ಕೊಪ್ಪಳ ಜಿಲ್ಲಾ ಘಟಕ ಕೆಲವು ಪಟ್ಟಭದ್ರರ ಕೈಯಲ್ಲಿ ಸಿಕ್ಕು ನಲುಗುತ್ತಿದೆ. ಇಂಥ ಹಿಡಿತದಿಂದ ಕಸಾಪವನ್ನು ಹೊರತರಲು ಮತ್ತು ರಾಜಕೀಯ, ಜಾತಿ ರಹಿತ ಕಸಾಪ ಕಟ್ಟಲು ನಾನು ಸಂಕಲ್ಪ ಮಾಡಿ ಈ ಬಾರಿ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಪರ್ಧಿಸಿದ್ದೇನೆ’ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಹನುಮಂತಪ್ಪ ಅಂಡಗಿ ಹೇಳಿದರು.</p>.<p>ನಗರದ ಪತ್ರಿಕಾ ಭವನದಲ್ಲಿ ಕಸಾಪ ಚುನಾವಣೆಯ ಪ್ರಣಾಳಿಕೆ ಬಿಡುಗಡೆ ಮಾಡಿ ಅವರು ಮಾತನಾಡಿದರು.</p>.<p>‘ಮೇ.9 ಕ್ಕೆ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ನಡೆಯಲಿದೆ. ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಾಡೋಜ ಡಾ.ಮಹೇಶ ಜೋಶಿ ಸ್ಪರ್ಧಿಸಿದ್ದಾರೆ. ಅವರನ್ನು ನಾನು ಬೆಂಬಲಿಸಿದ್ದು, ಜಿಲ್ಲೆಯಲ್ಲಿ ನನಗೆ ಮತ ಹಾಕಲು ಮತದಾರರಲ್ಲಿ ಮನವಿ ಮಾಡುತ್ತೇನೆ’ ಎಂದು ಹೇಳಿದರು.</p>.<p>ಅರ್ಹ ಸಾಹಿತಿಗಳು ಕಸಾಪದೊಂದಿಗೆ ನಿರಂತರ ಸಂಪರ್ಕದಲ್ಲಿರುವ ರೀತಿ ಕೆಲಸ ಮಾಡುತ್ತೇನೆ. ರಾಜಕೀಯ, ಜಾತಿ ಹೆಸರಿನಲ್ಲಿ ಮತ ಕೇಳುವವರನ್ನು ಕಡೆಗಣಿಸಿ ಜಾತಿ, ರಾಜಕೀಯ ರಹಿತ ಹಾಗೂ ಜೀವನದುದ್ದಕ್ಕೂ ಸಾಹಿತ್ಯ ಕ್ಷೇತ್ರದ ಸಂಘಟನೆಯಲ್ಲಿರುವ ನನಗೆ ಈ ಭಾರಿ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.</p>.<p>ಶಿಕ್ಷಕ ಹನುಮಂತಪ್ಪ ಗಿಡ್ಡಿ ಹಾಗೂ ಇಂದರಗಿ ಗ್ರಾ.ಪಂ. ಸದಸ್ಯ ಗವಿಸಿದ್ಧಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ: </strong>‘ಕನ್ನಡ ಸಾಹಿತ್ಯ ಪರಿಷತ್ತಿನ ಕೊಪ್ಪಳ ಜಿಲ್ಲಾ ಘಟಕ ಕೆಲವು ಪಟ್ಟಭದ್ರರ ಕೈಯಲ್ಲಿ ಸಿಕ್ಕು ನಲುಗುತ್ತಿದೆ. ಇಂಥ ಹಿಡಿತದಿಂದ ಕಸಾಪವನ್ನು ಹೊರತರಲು ಮತ್ತು ರಾಜಕೀಯ, ಜಾತಿ ರಹಿತ ಕಸಾಪ ಕಟ್ಟಲು ನಾನು ಸಂಕಲ್ಪ ಮಾಡಿ ಈ ಬಾರಿ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಪರ್ಧಿಸಿದ್ದೇನೆ’ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಹನುಮಂತಪ್ಪ ಅಂಡಗಿ ಹೇಳಿದರು.</p>.<p>ನಗರದ ಪತ್ರಿಕಾ ಭವನದಲ್ಲಿ ಕಸಾಪ ಚುನಾವಣೆಯ ಪ್ರಣಾಳಿಕೆ ಬಿಡುಗಡೆ ಮಾಡಿ ಅವರು ಮಾತನಾಡಿದರು.</p>.<p>‘ಮೇ.9 ಕ್ಕೆ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ನಡೆಯಲಿದೆ. ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಾಡೋಜ ಡಾ.ಮಹೇಶ ಜೋಶಿ ಸ್ಪರ್ಧಿಸಿದ್ದಾರೆ. ಅವರನ್ನು ನಾನು ಬೆಂಬಲಿಸಿದ್ದು, ಜಿಲ್ಲೆಯಲ್ಲಿ ನನಗೆ ಮತ ಹಾಕಲು ಮತದಾರರಲ್ಲಿ ಮನವಿ ಮಾಡುತ್ತೇನೆ’ ಎಂದು ಹೇಳಿದರು.</p>.<p>ಅರ್ಹ ಸಾಹಿತಿಗಳು ಕಸಾಪದೊಂದಿಗೆ ನಿರಂತರ ಸಂಪರ್ಕದಲ್ಲಿರುವ ರೀತಿ ಕೆಲಸ ಮಾಡುತ್ತೇನೆ. ರಾಜಕೀಯ, ಜಾತಿ ಹೆಸರಿನಲ್ಲಿ ಮತ ಕೇಳುವವರನ್ನು ಕಡೆಗಣಿಸಿ ಜಾತಿ, ರಾಜಕೀಯ ರಹಿತ ಹಾಗೂ ಜೀವನದುದ್ದಕ್ಕೂ ಸಾಹಿತ್ಯ ಕ್ಷೇತ್ರದ ಸಂಘಟನೆಯಲ್ಲಿರುವ ನನಗೆ ಈ ಭಾರಿ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.</p>.<p>ಶಿಕ್ಷಕ ಹನುಮಂತಪ್ಪ ಗಿಡ್ಡಿ ಹಾಗೂ ಇಂದರಗಿ ಗ್ರಾ.ಪಂ. ಸದಸ್ಯ ಗವಿಸಿದ್ಧಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>