ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಮಗಾರಿಗಳ ಮೇಲೆ ನಿಗಾ ಇಡಿ

ಶಾಸಕ ಅಮರೇಗೌಡ ಬಯ್ಯಾಪುರ ಮನವಿ
Last Updated 15 ಜೂನ್ 2021, 4:51 IST
ಅಕ್ಷರ ಗಾತ್ರ

ಹನುಮಸಾಗರ: ‘ಸಮುದಾಯ ಭವನದ ಕಾಮಗಾರಿ ಕಳಪೆಯಾಗದಂತೆ ಇಲ್ಲಿನ ಜನರು ನಿಗಾ ಇಡಬೇಕು’ ಎಂದು ಶಾಸಕ ಅಮರೇಗೌಡ ಬಯ್ಯಾಪುರ ಹೇಳಿದರು.

ಭಾನುವಾರ 12ನೇ ವಾರ್ಡ್‌ನಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಿಸಲಾಗುತ್ತಿರುವ ಸಮುದಾಯ ಭವನದ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

₹10 ಲಕ್ಷ ವೆಚ್ಚದಲ್ಲಿ ಮೌಲಾನಾ ಅಬುಲ್ ಕಲಾಮ್ ಆಜಾದ್ ಸಮುದಾಯ ಭವನದ ಕಾಮಗಾರಿ ನಡೆಯುತ್ತಿದೆ. ಸಾರ್ವಜನಿಕರು, ಸಂಘ ಸಂಸ್ಥೆಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು.

ಮಾಜಿ ಶಾಸಕ ಹಸನಸಾಬ ದೋಟಿಹಾಳ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಂಜುನಾಥ ಹುಲ್ಲೂರ, ತಾಲ್ಲೂಕು ಪಂಚಾಯಿತಿ ಸದಸ್ಯ ಸುರೇಶ ಕುಂಟನಗೌಡ್ರ, ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀಶೈಲ ಮೋಟಗಿ, ವೀರಭದ್ರಪ್ಪ ಪತ್ತಾರ, ಚಂದ್ರು ಬೆಳಗಲ್, ರಮೇಶ ಬಡಿಗೇರ, ರುದ್ರಗೌಡ ಗೌಡಪ್ಪನವರ, ಪ್ರಮುಖರಾದ ಗೌಸ್‍ಮೊಹಿನುದ್ದೀನ್ ವಂಟೆಳಿ, ಚಂದಪ್ಪ, ಮಹಾಂತೇಶ, ಸಂಗಯ್ಯ ವಸ್ತ್ರದ, ಆಸಿಫ್ ಡಲಾಯತ್, ಸೂಚಪ್ಪ, ಮೈನುದ್ದೀನ್ ಖಾಜಿ ಹಾಗೂ ಗೌಸ್‍ ಮೊಹಿನುದ್ದೀನ್ ವಂಟೆಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT