ಅಮೃತ ಭಾರತ್ ಸ್ಟೇಷನ್ ನಿರ್ಮಾಣ ಅಂಗವಾಗಿ ರೈಲ್ವೆ ಇಲಾಖೆ ಹಮ್ಮಿಕೊಂಡಿದ್ದ ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ಬಹುಮಾನ ಪಡೆದ ವಿದ್ಯಾರ್ಥಿಗಳು
ಸೆಪ್ಟೆಂಬರ್ನಲ್ಲಿ ಸಿಂಧನೂರು ತನಕ ರೈಲು ಸಂಚಾರ ಆರಂಭದ ಭರವಸೆ ಅಮೃತ್ ಭಾರತ ರೈಲು ನಿಲ್ದಾಣಗಳ ಅಭಿವೃದ್ಧಿ ಯೋಜನೆಯಡಿ ಕ್ರಮ ಕೊಪ್ಪಳದಲ್ಲಿ ಇನ್ನೊಂದು ರೈಲು ನಿಲ್ದಾಣದ ನಿರ್ಮಾಣಕ್ಕೆ ಜಾಗ ಪರಿಶೀಲನೆ
ಕೊಪ್ಪಳ ರೈಲು ನಿಲ್ದಾಣದ ಮರು ಅಭಿವೃದ್ದಿಯಿಂದಾಗಿ ಸಂಪರ್ಕ ರಸ್ತೆ ಉನ್ನತೀಕರಣ ಸಾಧ್ಯವಾಗುತ್ತದೆ. ಕಳೆದ ಒಂಬತ್ತು ವರ್ಷಗಳಲ್ಲಿ ರೈಲ್ವೆ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ.
ಹೇಮಲತಾ ನಾಯಕ ವಿಧಾನ ಪರಿಷತ್ ಸದಸ್ಯೆ
ಕುಷ್ಟಗಿ ಕ್ಷೇತ್ರದ ಜನ ರೈಲು ಸೌಲಭ್ಯಕ್ಕಾಗಿ ಕೊಪ್ಪಳ ಅಥವಾ ಹೊಸಪೇಟೆಗೆ ಹೋಗಬೇಕಾಗಿದೆ. ಈಗ ಕುಷ್ಟಗಿ ಸಮೀಪ ರೈಲು ಮಾರ್ಗ ಕಾಮಗಾರಿ ನಡೆಯುತ್ತಿದೆ. 2024ರ ಜೂನ್ ವೇಳೆಗೆ ಇದು ಪೂರ್ಣಗೊಳ್ಳಲಿದೆ.
ದೊಡ್ಡನಗೌಡ ಪಾಟೀಲ ಕುಷ್ಟಗಿ ಶಾಸಕ
‘ರಸ್ತೆಯಲ್ಲಿ ತೊಟ್ಟಿಲು ಕಟ್ಟಿದ್ದೇ ಕಾಂಗ್ರೆಸ್ ಸಾಧನೆ’
ಕೊಪ್ಪಳ: ಸರ್ಕಾರಿ ಕಾರ್ಯಕ್ರಮವಾದರೂ ಸಂಸದರು ವೇದಿಕೆಯಲ್ಲಿಯೇ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡರು ‘ರಸ್ತೆಯಲ್ಲಿ ತೊಟ್ಟಿಲು ಕಟ್ಟಿದ್ದೇ ಆ ಪಕ್ಷದ ಸಾಧನೆ’ ಎಂದು ಚಾಟಿ ಬೀಸಿದರು. ‘ನರೇಂದ್ರ ಮೋದಿ ಅವರನ್ನು ಜಗತ್ತೇ ಮೆಚ್ಚಿಕೊಂಡಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿನಾಕಾರಣ ಮೋದಿಯಿಂದಾಗಿ ದೇಶ ಹಾಳಾಗಿದೆ ಎಂದು ಆಪಾದಿಸುತ್ತಿದ್ದಾರೆ. ರಾಜಕಾರದಲ್ಲಿ ಟೀಕೆ ಪ್ರತಿಟೀಕೆ ಸಹಜ. ಹಾಗಂದ ಮಾತ್ರಕ್ಕೆ ಪ್ರಧಾನಿ ಬಗ್ಗೆ ಹಗುರವಾಗಿ ಮಾತನಾಡಿದರೆ ಸಹಿಸುವುದಿಲ್ಲ’ ಎಂದರು. ‘ಇಷ್ಟು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಏನು ಅಭಿವೃದ್ಧಿ ಮಾಡಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಖಜಾನೆ ಹಣವನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಂಡಿದ್ದಾರೆ. ಅಭಿವೃದ್ಧಿ ಕೆಲಸಗಳಿಗೆ ಹಣವಿಲ್ಲ ಎಂದು ಮುಖ್ಯಮಂತ್ರಿ ಹೇಳುತ್ತಿದ್ದಾರೆ. ಇವರಿಂದ ಮೋದಿ ಹೇಳಿಸಿಕೊಳ್ಳಬೇಕಿಲ್ಲ. ಅಭಿವೃದ್ಧಿ ವಿಷಯದಲ್ಲಿ ಯಾರೇ ಆಗಲಿ ಬೆಂಬಲಿಸಬೇಕು. ಅದು ಬಿಟ್ಟು ಎಲ್ಲದರಲ್ಲೂ ತಪ್ಪು ಹುಡುಕಬಾರದು. ಜಿಲ್ಲೆಯಲ್ಲಿ ಇನ್ನಷ್ಟು ಕೆಲಸಗಳು ಆಗಬೇಕಾಗಿದ್ದು ಅದಕ್ಕೆ ಈಗಿನ ರಾಜ್ಯ ಸರ್ಕಾರದ ಮತ್ತು ಸ್ಥಳೀಯ ಜನಪ್ರತಿನಿಧಿಗಳ ಸಹಕಾರ ಅಗತ್ಯ’ ಎಂದರು.