<p>ಕೊಪ್ಪಳ: ನಗರದ ವಾಸವಿ ಮಂಗಳ ಭವನದಲ್ಲಿ ಸೋಮವಾರ ಕರ್ನಾಟಕ ಆರ್ಯವೈಶ್ಯ ಮಹಾಸಭೆಯ ಅಧ್ಯಕ್ಷ ಆರ್.ಪಿ. ರವಿಶಂಕರ್ ನೇತೃತ್ವದಲ್ಲಿ ಜಿಲ್ಲಾ ಆರ್ಯವೈಶ್ಯ ಸಮಾವೇಶ ನೆರವೇರಿತು.</p>.<p>ಆರ್.ಪಿ ರವಿ ಶಂಕರ್ ಮಾತನಾಡಿ, ‘ಆರ್ಯ ವೈಶ್ಯ ಸಮಾಜದವರ ಮೂಲ ಉದ್ಯೋಗ ವ್ಯಾಪಾರಕ್ಕೆ ಯುವಜನರು ಮರಳಿ ಬರಬೇಕು ಎಂಬ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ಅಂತರರಾಷ್ಟ್ರೀಯ ಮಟ್ಟದ ಆರ್ಯವೈಶ್ಯ ಸಮ್ಮೇಳನವನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗುವುದು’ ಎಂದು ಹೇಳಿದರು.</p>.<p>ವಾಸವಿ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲು ಮತ್ತು ಆರ್ಯವೈಶ್ಯ ಜಾತಿಯನ್ನು ಒಬಿಸಿಗೆ ಸೇರಿಸಲು ಸರ್ಕಾರಕ್ಕೆ ಒತ್ತಾಯ ತರುವ ನಿಟ್ಟಿನಲ್ಲಿ ರಾಜ್ಯಾಧ್ಯಕ್ಷರಿಗೆ ಮನವಿಯನ್ನು ಜಿಲ್ಲಾ ಸಮಿತಿಯ ಅಧ್ಯಕ್ಷ ಶ್ರೀನಿವಾಸ್ ಗುಪ್ತಾ ಹಾಗೂ ಅವೋಪಾ ಘಟಕದ ಅಧ್ಯಕ್ಷ ರಾಘವೇಂದ್ರ ಪಾನಘಂಟಿ ಮನವಿ ಸಲ್ಲಿಸಿದರು.</p>.<p>ನಿರ್ದೇಶಕ ನಾರಾಯಣ ಕುರುಗೋಡು, ಸಂತೋಷ ಕೆಲೋಜಿ, ರಾಘವೇಂದ್ರ ಬೆಲ್ಲಂಕೊಂಡಿ, ಅಂತರರಾಷ್ಟ್ರೀಯ ಆರ್ಯವೈಶ್ಯ ಸಮ್ಮೇಳನದ ಸಂಚಾಲಕ ಅನಿಲ ತಲ್ಲಮ್ಮ, ಎಚ್.ಜೆ. ಹನುಮಂತಯ್ಯ ನಾಮ ನಾಗರಾಜ, ರಾಘವೇಂದ್ರ ಚಿತ್ರಾಲಿ, ರಾಕೇಶ ಪಾನಘಂಟಿ, ಶೋಭಾ ಮಾದಿನೂರ, ಡಿ.ಗುರುರಾಜ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-35-2016170533</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಪ್ಪಳ: ನಗರದ ವಾಸವಿ ಮಂಗಳ ಭವನದಲ್ಲಿ ಸೋಮವಾರ ಕರ್ನಾಟಕ ಆರ್ಯವೈಶ್ಯ ಮಹಾಸಭೆಯ ಅಧ್ಯಕ್ಷ ಆರ್.ಪಿ. ರವಿಶಂಕರ್ ನೇತೃತ್ವದಲ್ಲಿ ಜಿಲ್ಲಾ ಆರ್ಯವೈಶ್ಯ ಸಮಾವೇಶ ನೆರವೇರಿತು.</p>.<p>ಆರ್.ಪಿ ರವಿ ಶಂಕರ್ ಮಾತನಾಡಿ, ‘ಆರ್ಯ ವೈಶ್ಯ ಸಮಾಜದವರ ಮೂಲ ಉದ್ಯೋಗ ವ್ಯಾಪಾರಕ್ಕೆ ಯುವಜನರು ಮರಳಿ ಬರಬೇಕು ಎಂಬ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ಅಂತರರಾಷ್ಟ್ರೀಯ ಮಟ್ಟದ ಆರ್ಯವೈಶ್ಯ ಸಮ್ಮೇಳನವನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗುವುದು’ ಎಂದು ಹೇಳಿದರು.</p>.<p>ವಾಸವಿ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲು ಮತ್ತು ಆರ್ಯವೈಶ್ಯ ಜಾತಿಯನ್ನು ಒಬಿಸಿಗೆ ಸೇರಿಸಲು ಸರ್ಕಾರಕ್ಕೆ ಒತ್ತಾಯ ತರುವ ನಿಟ್ಟಿನಲ್ಲಿ ರಾಜ್ಯಾಧ್ಯಕ್ಷರಿಗೆ ಮನವಿಯನ್ನು ಜಿಲ್ಲಾ ಸಮಿತಿಯ ಅಧ್ಯಕ್ಷ ಶ್ರೀನಿವಾಸ್ ಗುಪ್ತಾ ಹಾಗೂ ಅವೋಪಾ ಘಟಕದ ಅಧ್ಯಕ್ಷ ರಾಘವೇಂದ್ರ ಪಾನಘಂಟಿ ಮನವಿ ಸಲ್ಲಿಸಿದರು.</p>.<p>ನಿರ್ದೇಶಕ ನಾರಾಯಣ ಕುರುಗೋಡು, ಸಂತೋಷ ಕೆಲೋಜಿ, ರಾಘವೇಂದ್ರ ಬೆಲ್ಲಂಕೊಂಡಿ, ಅಂತರರಾಷ್ಟ್ರೀಯ ಆರ್ಯವೈಶ್ಯ ಸಮ್ಮೇಳನದ ಸಂಚಾಲಕ ಅನಿಲ ತಲ್ಲಮ್ಮ, ಎಚ್.ಜೆ. ಹನುಮಂತಯ್ಯ ನಾಮ ನಾಗರಾಜ, ರಾಘವೇಂದ್ರ ಚಿತ್ರಾಲಿ, ರಾಕೇಶ ಪಾನಘಂಟಿ, ಶೋಭಾ ಮಾದಿನೂರ, ಡಿ.ಗುರುರಾಜ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-35-2016170533</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>