<p><strong>ಕೊಪ್ಪಳ:</strong> ತಾಲ್ಲೂಕಿನ ಮುನಿರಾಬಾದ್ ಸಮೀಪದ ಕಾಸನಕಂಡಿ ಗ್ರಾಮಕ್ಕೆ ಹೊಂದಿಕೊಂಡಿರುವ ಅರಣ್ಯ ವಲಯದಲ್ಲಿ ಐದಾರು ತಿಂಗಳುಗಳಿಂದ ಆಗಾಗ ಕಾಣಿಸಿಕೊಂಡಿದ್ದ ಚಿರತೆ ಶುಕ್ರವಾರ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ. ಇದರಿಂದಾಗಿ ಸುತ್ತಮುತ್ತಲಿನ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.</p><p>ಚಿರತೆ ಓಡಾಟದ ಕುರಿತು ಸಾರ್ವಜನಿಕರು ಆಗಾಗ ಫೋಟೊ ಹಾಗೂ ವಿಡಿಯೊ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ಆತಂಕ ವ್ಯಕ್ತಪಡಿಸಿದ್ದರು. ಕಾಸನಕಂಡಿ ಪ್ರದೇಶ ತುಂಗಭದ್ರಾ ಜಲಾಶಯದ ಹಿನ್ನೀರಿನ ಸ್ಥಳವಾಗಿದೆ.</p><p>ಚಿರತೆ ಪ್ರತ್ಯಕ್ಷವಾದ ಸ್ಥಳದ ಸಮೀಪ ಎಚ್ಆರ್ಜಿ ಕಾರ್ಖಾನೆ, ಬೆಟ್ಟದ ವೀರಾಂಜನೇಯ ದೇವಸ್ಥಾನ, ಪಶ್ಚಿಮಕ್ಕೆ ಕೂಗಳತೆಯ ದೂರದಲ್ಲಿ ಕಾಸನಕಂಡಿ ಗ್ರಾಮ, ಅದಕ್ಕೆ ಹೊಂದಿಕೊಂಡಿರುವ ಉತ್ತರ ದಿಕ್ಕಿನಂಚಿಗೆ ಸಾಲುಮರದ ತಿಮ್ಮಕ್ಕ ಉದ್ಯಾನ ಇರುವುದರಿಂದ ಈ ಪ್ರದೇಶಗಳಿಗೆ ರಸ್ತೆಯ ಮೂಲಕ ಬರುವ ಜನರಲ್ಲಿ ಭಯದ ಆತಂಕ ಮೂಡಿತ್ತು. ಈಗ ಚಿರತೆ ಸೆರೆಹಿಡಿದಿರುವುದರಿಂದ ಸುತ್ತಮುತ್ತಲಿನ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ತಾಲ್ಲೂಕಿನ ಮುನಿರಾಬಾದ್ ಸಮೀಪದ ಕಾಸನಕಂಡಿ ಗ್ರಾಮಕ್ಕೆ ಹೊಂದಿಕೊಂಡಿರುವ ಅರಣ್ಯ ವಲಯದಲ್ಲಿ ಐದಾರು ತಿಂಗಳುಗಳಿಂದ ಆಗಾಗ ಕಾಣಿಸಿಕೊಂಡಿದ್ದ ಚಿರತೆ ಶುಕ್ರವಾರ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ. ಇದರಿಂದಾಗಿ ಸುತ್ತಮುತ್ತಲಿನ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.</p><p>ಚಿರತೆ ಓಡಾಟದ ಕುರಿತು ಸಾರ್ವಜನಿಕರು ಆಗಾಗ ಫೋಟೊ ಹಾಗೂ ವಿಡಿಯೊ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ಆತಂಕ ವ್ಯಕ್ತಪಡಿಸಿದ್ದರು. ಕಾಸನಕಂಡಿ ಪ್ರದೇಶ ತುಂಗಭದ್ರಾ ಜಲಾಶಯದ ಹಿನ್ನೀರಿನ ಸ್ಥಳವಾಗಿದೆ.</p><p>ಚಿರತೆ ಪ್ರತ್ಯಕ್ಷವಾದ ಸ್ಥಳದ ಸಮೀಪ ಎಚ್ಆರ್ಜಿ ಕಾರ್ಖಾನೆ, ಬೆಟ್ಟದ ವೀರಾಂಜನೇಯ ದೇವಸ್ಥಾನ, ಪಶ್ಚಿಮಕ್ಕೆ ಕೂಗಳತೆಯ ದೂರದಲ್ಲಿ ಕಾಸನಕಂಡಿ ಗ್ರಾಮ, ಅದಕ್ಕೆ ಹೊಂದಿಕೊಂಡಿರುವ ಉತ್ತರ ದಿಕ್ಕಿನಂಚಿಗೆ ಸಾಲುಮರದ ತಿಮ್ಮಕ್ಕ ಉದ್ಯಾನ ಇರುವುದರಿಂದ ಈ ಪ್ರದೇಶಗಳಿಗೆ ರಸ್ತೆಯ ಮೂಲಕ ಬರುವ ಜನರಲ್ಲಿ ಭಯದ ಆತಂಕ ಮೂಡಿತ್ತು. ಈಗ ಚಿರತೆ ಸೆರೆಹಿಡಿದಿರುವುದರಿಂದ ಸುತ್ತಮುತ್ತಲಿನ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>