<p>ಕೊಪ್ಪಳ: ‘ಮಕ್ಕಳನ್ನು ವಿದ್ಯಾವಂತ, ಜೊತೆಗೆ ಮೌಲ್ಯವಂತ ನೀತಿವಂತ, ಗುಣವಂತ, ಚಾರಿತ್ರ್ಯವಂತರನ್ನಾಗಿ ಮಾಡುವುದು ಅವಶ್ಯಕವಾಗಿದೆ’ ಎಂದು ಬ್ರಹ್ಮಕುಮಾರಿ ಯೋಗಿನಿ ತಿಳಿಸಿದರು.</p>.<p>ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ಏರ್ಪಡಿಸಿದ ಸರ್ವತೋಮುಖ ವ್ಯಕ್ತಿತ್ವ ವಿಕಾಸ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ ‘ಮಕ್ಕಳಿಗೆ ಆಧ್ಯಾತ್ಮ ಶಿಕ್ಷಣ ಅತ್ಯವಶ್ಯವಾಗಿದೆ. ಮಕ್ಕಳು ಮಾನಸಿಕವಾಗಿ ಸದೃಢವಾಗಲು ಆತ್ಮವಿಶ್ವಾಸವನ್ನು ಹೆಚ್ಚಿಸುವ ಒಳ್ಳೆಯ ಆಧ್ಯಾತ್ಮ ವಿಚಾರಗಳನ್ನು ಬೆಳೆಸಿಕೊಳ್ಳಬೇಕು’ ಎಂದರು.</p>.<p>ರಚನಾ ಹಿಟ್ನಾಳ ಮಾತನಾಡಿ ‘ಮಕ್ಕಳು ತಮ್ಮ ಏಕಾಗ್ರತೆಯ ಶಕ್ತಿ, ನೆನಪಿನ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಯೋಗ ಕಲಿಯುವುದು ಅಗತ್ಯವಿದೆ’ ಎಂದರು.</p>.<p>ವೇದಿಕೆಯಲ್ಲಿ ಪತ್ರಪ್ಪ, ಕೃಷ್ಣಪ್ಪ, ಸುರೇಶ್ ಕುಂಬಾರ್, ರೂಪ, ಬಿ.ಕೆ. ಸ್ನೇಹಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-35-66207112</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಪ್ಪಳ: ‘ಮಕ್ಕಳನ್ನು ವಿದ್ಯಾವಂತ, ಜೊತೆಗೆ ಮೌಲ್ಯವಂತ ನೀತಿವಂತ, ಗುಣವಂತ, ಚಾರಿತ್ರ್ಯವಂತರನ್ನಾಗಿ ಮಾಡುವುದು ಅವಶ್ಯಕವಾಗಿದೆ’ ಎಂದು ಬ್ರಹ್ಮಕುಮಾರಿ ಯೋಗಿನಿ ತಿಳಿಸಿದರು.</p>.<p>ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ಏರ್ಪಡಿಸಿದ ಸರ್ವತೋಮುಖ ವ್ಯಕ್ತಿತ್ವ ವಿಕಾಸ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ ‘ಮಕ್ಕಳಿಗೆ ಆಧ್ಯಾತ್ಮ ಶಿಕ್ಷಣ ಅತ್ಯವಶ್ಯವಾಗಿದೆ. ಮಕ್ಕಳು ಮಾನಸಿಕವಾಗಿ ಸದೃಢವಾಗಲು ಆತ್ಮವಿಶ್ವಾಸವನ್ನು ಹೆಚ್ಚಿಸುವ ಒಳ್ಳೆಯ ಆಧ್ಯಾತ್ಮ ವಿಚಾರಗಳನ್ನು ಬೆಳೆಸಿಕೊಳ್ಳಬೇಕು’ ಎಂದರು.</p>.<p>ರಚನಾ ಹಿಟ್ನಾಳ ಮಾತನಾಡಿ ‘ಮಕ್ಕಳು ತಮ್ಮ ಏಕಾಗ್ರತೆಯ ಶಕ್ತಿ, ನೆನಪಿನ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಯೋಗ ಕಲಿಯುವುದು ಅಗತ್ಯವಿದೆ’ ಎಂದರು.</p>.<p>ವೇದಿಕೆಯಲ್ಲಿ ಪತ್ರಪ್ಪ, ಕೃಷ್ಣಪ್ಪ, ಸುರೇಶ್ ಕುಂಬಾರ್, ರೂಪ, ಬಿ.ಕೆ. ಸ್ನೇಹಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-35-66207112</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>