ಕೊಪ್ಪಳ: ಕೊಪ್ಪಳ ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ಅವರನ್ನು ಏಕಾಏಕಿ ವರ್ಗಾವಣೆ ಮಾಡಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.
2022ರ ಜುಲೈನಲ್ಲಿ ಸುಂದರೇಶ ಬಾಬು ಇಲ್ಲಿ ಡಿ.ಸಿ.ಯಾಗಿ ಬಂದಿದ್ದರು. ಅವರ ಸ್ಥಾನಕ್ಕೆ ಈಗ ಗ್ರಾಮೀಣಾಭಿವೃದ್ಧಿ ಇಲಾಖೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಭಾಗದ ನಿರ್ದೇಶಕ ನಳಿನ್ ಅತುಲ್ ಅವರನ್ನು ನೇಮಿಸಿ ಸರ್ಕಾರ ಆದೇಶ ಮಾಡಿದೆ.
ಹೊಸ ಜಿಲ್ಲಾಧಿಕಾರಿ ಆದೇಶ ಹೊರಬಿದ್ದ ಬೆನ್ನಲ್ಲೇ ನಳಿನ್ ಇಲ್ಲಿನ ಜಿಲ್ಲಾಡಳಿತ ಭವನಕ್ಕೆ ಬಂದಿದ್ದಾರೆ. ಸುಂದರೇಶ ಬಾಬು ಅವರಿಗೆ ಯಾವುದೇ ಹುದ್ದೆ ತೋರಿಸಿಲ್ಲ.
ಬಾಬು ಅವರು ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಲು ಸಿದ್ದತೆ ಮಾಡಿಕೊಂಡು ಎಲ್ಲ ಇಲಾಖೆಗಳ ಅಧಿಕಾರಿಗಳ ಸಭೆ ಕರೆದಿದ್ದರು. ವರ್ಗಾವಣೆಯಾದ ವಿಷಯ ಗೊತ್ತಾಗುತ್ತಿದ್ದಂತೆ ಸಭೆ ರದ್ದುಪಡಿಸಿದರು.