<p>ಕೊಪ್ಪಳ: ಗಣತಿ ಪಟ್ಟಿಯಾಚೆ ಇರುವ ಮಾಜಿ ದೇವದಾಸಿ ಮಹಿಳೆಯರು ಹಾಗೂ ಅವರ ಕುಟುಂಬಗಳ ಸದಸ್ಯರನ್ನು ಕೂಡಲೇ ಗಣತಿ ಪಟ್ಟಿಗೆ ಸೇರಿಸಿಕೊಂಡು ಪುನರ್ವಸತಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಜ್ಯ ದೇವದಾಸಿ ವಿಮೋಚನಾ ಮಹಿಳೆಯರ ಸಂಘದ ಜಿಲ್ಲಾ ಸಮಿತಿ ಪದಾಧಿಕಾರಿಗಳು ಆಗ್ರಹಿಸಿದರು.</p>.<p>ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಬುಧವಾರ ಪ್ರತಿಭಟನೆ ನಡೆಸಿ ದೇವದಾಸಿ ಪದ್ಧತಿಯನ್ನು ಈ ಹಿಂದೆಯೇ ನಿಷೇಧಿಸಲಾಗಿತ್ತು. ಆದರೂ ಎರಡು ಬಾರಿ ದೇವದಾಸಿ ಮಹಿಳೆಯರ ಗಣತಿ ನಡೆಸಿ ಪುನರ್ವಸತಿ ಕಲ್ಪಿಸಲಾಗಿದೆ. ಮಹಿಳೆಯರು ಅವರ ಕುಟುಂಬದ ಸದಸ್ಯರನ್ನು ಹಳೆಯ ಕಾಯ್ದೆ ತೋರಿಸಿ ಗಣತಿಯಿಂದ ಹೊರಗಡೆ ಇಟ್ಟರೆ ಹೊಸ ಕಾಯ್ದೆ ಅಂಗೀಕಾರದ ನಂತರ ಮರಳಿ ಈ ಮಹಿಳೆಯರ ಗಣತಿಗೆ ಕ್ರಮವಹಿಸಲು ಮತ್ತಷ್ಟು ಬಜೆಟ್ ಹೊರೆ ಸರ್ಕಾರ ಭರಿಸಬೇಕಾಗುತ್ತದೆ. ಆದ್ದರಿಂದ, ವಯೋಮಿತಿ ಕೇಳದೆ ಹಾಗು ವಿಧಾನ ಮಂಡಲ ರದ್ದು ಮಾಡಿದ ಕಾಯ್ದೆಗಳನ್ನು ತೋರಿಸಿ ಅರ್ಜಿ ಪಡೆಯದಿರುವ ಮತ್ತು ಫಲಾನುಭವಿಗಳಾಗಿ ವಿಲೇ ಮಾಡದಿರುವ ತೊಡಕು ಸರಿಪಡಿಸಬೇಕು ಎಂದು ಆಗ್ರಹಿಸಿದರು.</p>.<p>ಪ್ರತಿಭಟನೆಯಲ್ಲಿ ಸಂಘದ ರಾಜ್ಯಾಧ್ಯಕ್ಷೆ ಜಿ. ಹುಲಿಗೆಮ್ಮ, ಉಪಾಧ್ಯಕ್ಷ ಮಂಜುನಾಥ್ ಡಗ್ಗಿ, ಜಿಲ್ಲಾ ಖಜಾಂಚಿ ಸುಂಕಪ್ಪ ಗದಗ, ಹುಲಿಗೆಮ್ಮ ಹಾಲಹಳ್ಳಿ, ಮಹಾದೇವಿ, ಸಿದ್ದಮ್ಮ ಹರ್ಲಾಪುರ, ರತ್ನಮ್ಮ, ಫಕೀರಮ್ಮ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-35-485480509</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಪ್ಪಳ: ಗಣತಿ ಪಟ್ಟಿಯಾಚೆ ಇರುವ ಮಾಜಿ ದೇವದಾಸಿ ಮಹಿಳೆಯರು ಹಾಗೂ ಅವರ ಕುಟುಂಬಗಳ ಸದಸ್ಯರನ್ನು ಕೂಡಲೇ ಗಣತಿ ಪಟ್ಟಿಗೆ ಸೇರಿಸಿಕೊಂಡು ಪುನರ್ವಸತಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಜ್ಯ ದೇವದಾಸಿ ವಿಮೋಚನಾ ಮಹಿಳೆಯರ ಸಂಘದ ಜಿಲ್ಲಾ ಸಮಿತಿ ಪದಾಧಿಕಾರಿಗಳು ಆಗ್ರಹಿಸಿದರು.</p>.<p>ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಬುಧವಾರ ಪ್ರತಿಭಟನೆ ನಡೆಸಿ ದೇವದಾಸಿ ಪದ್ಧತಿಯನ್ನು ಈ ಹಿಂದೆಯೇ ನಿಷೇಧಿಸಲಾಗಿತ್ತು. ಆದರೂ ಎರಡು ಬಾರಿ ದೇವದಾಸಿ ಮಹಿಳೆಯರ ಗಣತಿ ನಡೆಸಿ ಪುನರ್ವಸತಿ ಕಲ್ಪಿಸಲಾಗಿದೆ. ಮಹಿಳೆಯರು ಅವರ ಕುಟುಂಬದ ಸದಸ್ಯರನ್ನು ಹಳೆಯ ಕಾಯ್ದೆ ತೋರಿಸಿ ಗಣತಿಯಿಂದ ಹೊರಗಡೆ ಇಟ್ಟರೆ ಹೊಸ ಕಾಯ್ದೆ ಅಂಗೀಕಾರದ ನಂತರ ಮರಳಿ ಈ ಮಹಿಳೆಯರ ಗಣತಿಗೆ ಕ್ರಮವಹಿಸಲು ಮತ್ತಷ್ಟು ಬಜೆಟ್ ಹೊರೆ ಸರ್ಕಾರ ಭರಿಸಬೇಕಾಗುತ್ತದೆ. ಆದ್ದರಿಂದ, ವಯೋಮಿತಿ ಕೇಳದೆ ಹಾಗು ವಿಧಾನ ಮಂಡಲ ರದ್ದು ಮಾಡಿದ ಕಾಯ್ದೆಗಳನ್ನು ತೋರಿಸಿ ಅರ್ಜಿ ಪಡೆಯದಿರುವ ಮತ್ತು ಫಲಾನುಭವಿಗಳಾಗಿ ವಿಲೇ ಮಾಡದಿರುವ ತೊಡಕು ಸರಿಪಡಿಸಬೇಕು ಎಂದು ಆಗ್ರಹಿಸಿದರು.</p>.<p>ಪ್ರತಿಭಟನೆಯಲ್ಲಿ ಸಂಘದ ರಾಜ್ಯಾಧ್ಯಕ್ಷೆ ಜಿ. ಹುಲಿಗೆಮ್ಮ, ಉಪಾಧ್ಯಕ್ಷ ಮಂಜುನಾಥ್ ಡಗ್ಗಿ, ಜಿಲ್ಲಾ ಖಜಾಂಚಿ ಸುಂಕಪ್ಪ ಗದಗ, ಹುಲಿಗೆಮ್ಮ ಹಾಲಹಳ್ಳಿ, ಮಹಾದೇವಿ, ಸಿದ್ದಮ್ಮ ಹರ್ಲಾಪುರ, ರತ್ನಮ್ಮ, ಫಕೀರಮ್ಮ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-35-485480509</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>