ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ: ಅಭ್ಯರ್ಥಿಗೆ ತಲೆನೋವಾದ ಕಾಂಗ್ರೆಸ್‌ ನಾಯಕರ ಭಿನ್ನಮತ

Published 8 ಏಪ್ರಿಲ್ 2024, 13:48 IST
Last Updated 8 ಏಪ್ರಿಲ್ 2024, 13:48 IST
ಅಕ್ಷರ ಗಾತ್ರ

ಕೊಪ್ಪಳ: ಜಿಲ್ಲೆಯ ಗಂಗಾವತಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ನಾಯಕರ ತಿಕ್ಕಾಟ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ ಅವರಿಗೆ ತಲೆನೋವಾಗಿದೆ.

ಮಾಜಿ ಸಚಿವ ಇಕ್ಬಾಲ್‌ ಅನ್ಸಾರಿ ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ವ ಪಕ್ಷೀಯರಿಂದಲೇ ನನಗೆ ಸೋಲಾಗಿದೆ ಎಂದು ಹೇಳುತ್ತಿದ್ದರೆ, ಇನ್ನೊಂದು ಬಣದಲ್ಲಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್‌.ಆರ್‌. ಶ್ರೀನಾಥ್‌ ಸ್ವಂತ ತಪ್ಪು ಮತ್ತು ಅಹಂಕಾರದಿಂದ ಅನ್ಸಾರಿಗೆ ಸೋಲಾಗಿದೆ ಎಂದು ಟೀಕಿಸುತ್ತಿದ್ದಾರೆ.

ಹೀಗಾಗಿ ಈ ಇಬ್ಬರೂ ನಾಯಕರು ಪರಸ್ಪರ ಪ್ರತ್ಯೇಕವಾಗಿಯೇ ಪಕ್ಷದ ಸಭೆಗಳನ್ನು ನಡೆಸುತ್ತಿದ್ದಾರೆ. ಶ್ರೀನಾಥ್‌ ನಡೆಸುವ ಸಭೆಗೆ ಹೋಗದಂತೆ ಅನ್ಸಾರಿ ತಮ್ಮ ಬೆಂಬಲಿಗರಿಗೆ ಸಂದೇಶ ನೀಡಿದ್ದಾರೆ. ಹೀಗಾಗಿ ಗಂಗಾವತಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಒಡೆದ ಮನೆಯಾಗಿದ್ದು ಅಭ್ಯರ್ಥಿ ಎರಡೂ ಕಡೆಗೂ ಸಭೆಗೆ ಹಾಜರಾಗಬೇಕಾದ ಅನಿವಾರ್ಯತೆ ಎದುರಾಗಿದೆ.

ಗಂಗಾವತಿಯಲ್ಲಿ ಸೋಮವಾರ ಎಚ್‌.ಆರ್‌. ಶ್ರೀನಾಥ್‌ ಪಾಲ್ಗೊಂಡಿದ್ದ ಸಭೆಗೆ ಅನ್ಸಾರಿ ಗೈರಾಗಿದ್ದರು. ಇದರಿಂದ ವಾಗ್ದಾಳಿ ನಡೆಸಿರುವ ಶ್ರೀನಾಥ್‌ ‘ಅನ್ಸಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರಿಂದಲೇ ಕಾಂಗ್ರೆಸ್‌ ಹಾಳಾಗುತ್ತಿದೆ’ ಎಂದು ಟೀಕಿಸಿದ್ದಾರೆ.

ಈ ಬೆಳವಣಿಗೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪಕ್ಷದ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ ‘ಏನೇ ಭಿನ್ನಾಭಿಪ್ರಾಯಗಳಿದ್ದರೂ ಅವುಗಳನ್ನು ಸರಿಪಡಿಸಲಾಗುವುದು. ಇದು ನಮ್ಮ ಪಕ್ಷದ ಅಭ್ಯರ್ಥಿ ಗೆಲುವಿಗೆ ಪರಿಣಾಮ ಬೀರುವುದಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT