<p>ಕೊಪ್ಪಳ: ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿರುವ ಈಜುಕೊಳದಲ್ಲಿ ಭಾನುವಾರ ನಡೆದ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಗವೀಶ ಯಲಿಗಾರ ಹಾಗೂ ಶೌರ್ಯ ಪಾಟೀಲ ಸೇರಿದಂತೆ ಹಲವರು ವಿವಿಧ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದರು.</p>.<p>8ರಿಂದ 10 ವರ್ಷದ ಒಳಗಿನ ವಿಭಾಗದಲ್ಲಿ ವಿರಾಟ್ ಪಾಟೀಲ್ (ಪ್ರಥಮ), ಆದರ್ಶ (ದ್ವಿತೀಯ), ಸುಫಿಯಾನ್ ಪಟೇಲ್ (ತೃತೀಯ), 10ರಿಂದ 12 ವರ್ಷದೊಳಗಿನ ವಿಭಾಗದಲ್ಲಿ ಶೌರ್ಯ ಪಾಟೀಲ್ (ಪ್ರಥಮ), ಅನುಷ್ (ದ್ವಿತೀಯ) ಹಾಗೂ ಶ್ರೀಧರ್ ಭಟ್ (ತೃತೀಯ) ಸ್ಥಾನ ಗಳಿಸಿದರು. 12ರಿಂದ 14 ವರ್ಷದ ಒಳಗಿನವರ ವಿಭಾಗದಲ್ಲಿ ಗವೀಶ ಯಲಿಗಾರ ಮೊದಲಿಗರಾದರೆ, ದ್ವಿತೀಯ ಸ್ಥಾನ ಶ್ರೇಯಸ್ ಪಾಲಾಯಿತು. ತನಯ್ ಮೂರನೇ ಸ್ಥಾನ ಗಳಿಸಿಕೊಂಡರು.</p>.<p>ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಪ್ಪಳ ಜಿಲ್ಲಾ ಸ್ವೀಮಿಂಗ್ ಕ್ಲಬ್ ಸಹಯೋಗದಲ್ಲಿ ನಡೆದ ಕ್ರೀಡಾಕೂಟದಲ್ಲಿ 50 ಈಜುಪಟುಗಳು ಪಾಲ್ಗೊಂಡಿದ್ದರು.</p>.<p>ಕೊಪ್ಪಳ ನಗರ ಪೊಲೀಸ್ ಠಾಣೆಯ ಸಿಪಿಐ ಸುರೇಶ ಡಿ. ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ ‘ಸ್ಪರ್ಧೆಗಳನ್ನು ಆಯೋಜಿಸಿದರೆ ಮಕ್ಕಳಿಗೆ ಮಾನಸಿಕವಾಗಿ ಹಾಗೂ ದೈಹಿಕವಾಗಿ ಗಟ್ಟಿಯಾಗಲು ಸಾಧ್ಯವಾಗುತ್ತದೆ. ಸ್ಥಳೀಯ ಕ್ರೀಡಾಪಟುಗಳು ಇಂಥ ಸ್ಪರ್ಧೆಗಳ ಅವಕಾಶ ಬಳಸಿಕೊಳ್ಳಬೇಕು. ಪೋಷಕರು ಕೂಡ ಮಕ್ಕಳು ಕ್ರೀಡೆಯಲ್ಲಿ ಸಾಧನೆ ಮಾಡಲು ಪ್ರೋತ್ಸಾಹ ನೀಡಬೇಕು’ ಎಂದರು.</p>.<p>ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿಠ್ಠಲ ಜಾಬಗೌಡರ ಮಾತನಾಡಿ ‘ಕ್ರೀಡೆ ಜೀವನದ ಅವಿಭಾಗ್ಯ ಅಂಗವಾಗಿದೆ. ಪ್ರತಿಯೊಬ್ಬರು ಒಂದೊಂದು ಕ್ರೀಡೆಯಲ್ಲಿ ಭಾಗವಹಿಸಿ ತಮ್ಮ ಸಾಮರ್ಥ್ಯ ಪ್ರದರ್ಶಿಸಿದ ಆರೋಗ್ಯವನ್ನು ಉತ್ತಮವಾಗಿಟ್ಟುಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಅಂತರರಾಷ್ಟೀಯ ಕ್ರೀಡಾಪಟು ಹೈದರಾಬಾದ್ನ ಅಸ್ಮಿತಾಚಂದ್ರು ‘ಗುರುಗಳ ಹಾಗೂ ಮನೆಯವರ ಆಸಕ್ತಿಯಿಂದ ಬೇಸಿಗೆ ತರಬೇತಿ ಶಿಬಿರಗಳಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ರಾಜ್ಯ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪಾಲ್ಗೊಳ್ಳಲು ಅವಕಾಶ ಪಡೆದಿದ್ದೇನೆ’ ಎಂದರು.</p>.<p>ಅಂತರರಾಷ್ಟೀಯ ಕ್ರೀಡಾಪಟು ವೃತಿ ಅಗರವಾಲ್, ಕೋಚ್ ಜಾನ್ವಿ, ಎ.ಎನ್. ಯತಿರಾಜ್, ಕೊಪ್ಪಳ ತಾಲ್ಲೂಕು ಕ್ರೀಡಾಧಿಕಾರಿ ಶರಣಬಸವ ಬಂಡಿಹಾಳ ಸೇರಿದಂತೆ ಅನೇಕರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-35-984682464</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಪ್ಪಳ: ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿರುವ ಈಜುಕೊಳದಲ್ಲಿ ಭಾನುವಾರ ನಡೆದ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಗವೀಶ ಯಲಿಗಾರ ಹಾಗೂ ಶೌರ್ಯ ಪಾಟೀಲ ಸೇರಿದಂತೆ ಹಲವರು ವಿವಿಧ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದರು.</p>.<p>8ರಿಂದ 10 ವರ್ಷದ ಒಳಗಿನ ವಿಭಾಗದಲ್ಲಿ ವಿರಾಟ್ ಪಾಟೀಲ್ (ಪ್ರಥಮ), ಆದರ್ಶ (ದ್ವಿತೀಯ), ಸುಫಿಯಾನ್ ಪಟೇಲ್ (ತೃತೀಯ), 10ರಿಂದ 12 ವರ್ಷದೊಳಗಿನ ವಿಭಾಗದಲ್ಲಿ ಶೌರ್ಯ ಪಾಟೀಲ್ (ಪ್ರಥಮ), ಅನುಷ್ (ದ್ವಿತೀಯ) ಹಾಗೂ ಶ್ರೀಧರ್ ಭಟ್ (ತೃತೀಯ) ಸ್ಥಾನ ಗಳಿಸಿದರು. 12ರಿಂದ 14 ವರ್ಷದ ಒಳಗಿನವರ ವಿಭಾಗದಲ್ಲಿ ಗವೀಶ ಯಲಿಗಾರ ಮೊದಲಿಗರಾದರೆ, ದ್ವಿತೀಯ ಸ್ಥಾನ ಶ್ರೇಯಸ್ ಪಾಲಾಯಿತು. ತನಯ್ ಮೂರನೇ ಸ್ಥಾನ ಗಳಿಸಿಕೊಂಡರು.</p>.<p>ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಪ್ಪಳ ಜಿಲ್ಲಾ ಸ್ವೀಮಿಂಗ್ ಕ್ಲಬ್ ಸಹಯೋಗದಲ್ಲಿ ನಡೆದ ಕ್ರೀಡಾಕೂಟದಲ್ಲಿ 50 ಈಜುಪಟುಗಳು ಪಾಲ್ಗೊಂಡಿದ್ದರು.</p>.<p>ಕೊಪ್ಪಳ ನಗರ ಪೊಲೀಸ್ ಠಾಣೆಯ ಸಿಪಿಐ ಸುರೇಶ ಡಿ. ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ ‘ಸ್ಪರ್ಧೆಗಳನ್ನು ಆಯೋಜಿಸಿದರೆ ಮಕ್ಕಳಿಗೆ ಮಾನಸಿಕವಾಗಿ ಹಾಗೂ ದೈಹಿಕವಾಗಿ ಗಟ್ಟಿಯಾಗಲು ಸಾಧ್ಯವಾಗುತ್ತದೆ. ಸ್ಥಳೀಯ ಕ್ರೀಡಾಪಟುಗಳು ಇಂಥ ಸ್ಪರ್ಧೆಗಳ ಅವಕಾಶ ಬಳಸಿಕೊಳ್ಳಬೇಕು. ಪೋಷಕರು ಕೂಡ ಮಕ್ಕಳು ಕ್ರೀಡೆಯಲ್ಲಿ ಸಾಧನೆ ಮಾಡಲು ಪ್ರೋತ್ಸಾಹ ನೀಡಬೇಕು’ ಎಂದರು.</p>.<p>ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿಠ್ಠಲ ಜಾಬಗೌಡರ ಮಾತನಾಡಿ ‘ಕ್ರೀಡೆ ಜೀವನದ ಅವಿಭಾಗ್ಯ ಅಂಗವಾಗಿದೆ. ಪ್ರತಿಯೊಬ್ಬರು ಒಂದೊಂದು ಕ್ರೀಡೆಯಲ್ಲಿ ಭಾಗವಹಿಸಿ ತಮ್ಮ ಸಾಮರ್ಥ್ಯ ಪ್ರದರ್ಶಿಸಿದ ಆರೋಗ್ಯವನ್ನು ಉತ್ತಮವಾಗಿಟ್ಟುಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಅಂತರರಾಷ್ಟೀಯ ಕ್ರೀಡಾಪಟು ಹೈದರಾಬಾದ್ನ ಅಸ್ಮಿತಾಚಂದ್ರು ‘ಗುರುಗಳ ಹಾಗೂ ಮನೆಯವರ ಆಸಕ್ತಿಯಿಂದ ಬೇಸಿಗೆ ತರಬೇತಿ ಶಿಬಿರಗಳಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ರಾಜ್ಯ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪಾಲ್ಗೊಳ್ಳಲು ಅವಕಾಶ ಪಡೆದಿದ್ದೇನೆ’ ಎಂದರು.</p>.<p>ಅಂತರರಾಷ್ಟೀಯ ಕ್ರೀಡಾಪಟು ವೃತಿ ಅಗರವಾಲ್, ಕೋಚ್ ಜಾನ್ವಿ, ಎ.ಎನ್. ಯತಿರಾಜ್, ಕೊಪ್ಪಳ ತಾಲ್ಲೂಕು ಕ್ರೀಡಾಧಿಕಾರಿ ಶರಣಬಸವ ಬಂಡಿಹಾಳ ಸೇರಿದಂತೆ ಅನೇಕರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-35-984682464</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>