<p><strong>ಕೊಪ್ಪಳ:</strong> ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್ ಅವರ ಸೂಚನೆ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ಧಿ ಅವರು ಶುಕ್ರವಾರ ಇಲ್ಲಿನ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಕಾರಾಗೃಹಗಳಲ್ಲಿ ನಿಷೇಧಿತ ವಸ್ತುಗಳನ್ನು ಸಂಪೂರ್ಣ ತಡೆಗಟ್ಟುವ ನಿಟ್ಟಿನಲ್ಲಿ ಕಾರಾಗೃಹ ಸುಧಾರಣಾ ಸಂಕಲ್ಪ ಅಭಿಯಾನವನ್ನು ಅಲೋಕಕುಮಾರ್ ಅವರು ಆರಂಭಿಸಿದ್ದು, ಇದರ ಭಾಗವಾಗಿ ಜಿಲ್ಲಾ ಕಾರಾಗೃಹದಲ್ಲಿ ಅವರು ಭದ್ರತಾ ಉಪಕರಣಗಳನ್ನು ಎಸ್.ಪಿ. ಪರಿಶೀಲಿಸಿದರು.</p>.<p>ಜಿಲ್ಲಾ ಕಾರಾಗೃಹ ಕೊಪ್ಪಳದ ಅಧೀಕ್ಷಕ ಅಂಬರೀಷ ಎಸ್. ಪೂಜಾರಿ ಅವರು ಎಸ್.ಪಿ. ಅವರಿಗೆ ಲಭ್ಯವಿರುವ ಉಪಕರಣಗಳ ಮಾಹಿತಿ ಒದಗಿಸಿದರು. ಇನ್ನು ಹೆಚ್ಚಿನ ಭದ್ರತಾ ಉಪಕರಣಗಳನ್ನು ಖರೀದಿಸಿ ಯಾವುದೇ ನಿಷೇಧಿತ ವಸ್ತುಗಳು ಕೈದಿಗಳ ಕೈಗೆ ಸಿಗದಂತೆ ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಅವರು ಸೂಚಿಸಿದರು.</p>.<p>ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಮಂತಕುಮಾರ್, ಡಿವೈಎಸ್ಪಿ ಮುತ್ತಣ್ಣ ಸರವಗೋಳ ಹಾಗೂ ಆಂತರಿಕ ಭದ್ರತಾ ವಿಭಾಗದ ವೃತ್ತ ನಿರೀಕ್ಷಕರು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್ ಅವರ ಸೂಚನೆ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ಧಿ ಅವರು ಶುಕ್ರವಾರ ಇಲ್ಲಿನ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಕಾರಾಗೃಹಗಳಲ್ಲಿ ನಿಷೇಧಿತ ವಸ್ತುಗಳನ್ನು ಸಂಪೂರ್ಣ ತಡೆಗಟ್ಟುವ ನಿಟ್ಟಿನಲ್ಲಿ ಕಾರಾಗೃಹ ಸುಧಾರಣಾ ಸಂಕಲ್ಪ ಅಭಿಯಾನವನ್ನು ಅಲೋಕಕುಮಾರ್ ಅವರು ಆರಂಭಿಸಿದ್ದು, ಇದರ ಭಾಗವಾಗಿ ಜಿಲ್ಲಾ ಕಾರಾಗೃಹದಲ್ಲಿ ಅವರು ಭದ್ರತಾ ಉಪಕರಣಗಳನ್ನು ಎಸ್.ಪಿ. ಪರಿಶೀಲಿಸಿದರು.</p>.<p>ಜಿಲ್ಲಾ ಕಾರಾಗೃಹ ಕೊಪ್ಪಳದ ಅಧೀಕ್ಷಕ ಅಂಬರೀಷ ಎಸ್. ಪೂಜಾರಿ ಅವರು ಎಸ್.ಪಿ. ಅವರಿಗೆ ಲಭ್ಯವಿರುವ ಉಪಕರಣಗಳ ಮಾಹಿತಿ ಒದಗಿಸಿದರು. ಇನ್ನು ಹೆಚ್ಚಿನ ಭದ್ರತಾ ಉಪಕರಣಗಳನ್ನು ಖರೀದಿಸಿ ಯಾವುದೇ ನಿಷೇಧಿತ ವಸ್ತುಗಳು ಕೈದಿಗಳ ಕೈಗೆ ಸಿಗದಂತೆ ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಅವರು ಸೂಚಿಸಿದರು.</p>.<p>ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಮಂತಕುಮಾರ್, ಡಿವೈಎಸ್ಪಿ ಮುತ್ತಣ್ಣ ಸರವಗೋಳ ಹಾಗೂ ಆಂತರಿಕ ಭದ್ರತಾ ವಿಭಾಗದ ವೃತ್ತ ನಿರೀಕ್ಷಕರು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>